ಘಟ್ಟಕ್ಕೆ_ವಲಸೆ_ಬರುತ್ತಿದ್ದ_ಕರಾವಳಿ_ಜನ ... #ಭಾಗ_1. #ಯಾಕೆ_ಈ_ರೀತಿ_ವಲಸೆ_ಬಂದರು?.... ಎಷ್ಟನೇ ಇಸವಿಯಿಂದ ಇದು ಪ್ರಾರಂಭವಾಯಿತು?... ಆ ಕಾಲದ ಪ್ರಯಾಣ ಹೇಗಿತ್ತು?... ವಲಸೆ ಬಂದವರ ಜೀವನ ಶೈಲಿ?... ಗೆಳೆಯರಾದ ತೀರ್ಥಹಳ್ಳಿ ತಾಲ್ಲೂಕಿನ #ಕಿರಣ್_ಬೀಸು ಕರಾವಳಿ ಭಾಗದ ಜನರ ವಲಸೆ ಬಗ್ಗೆ ವಿವರವಾದ ಲೇಖನ ಬರೆಯಲು ಹೇಳಿದ್ದು ಈ ಲೇಖನ ಬರೆಯಲು ಪ್ರೇರಣೆ ಆಯಿತು, ಈ ಲೇಖನ ದೀರ್ಘವಾಗಿರುವುದರಿಂದ ಕೆಲವು ಭಾಗಗಳಲ್ಲಿ ಪ್ರಕಟಿಸುತ್ತೇನೆ. ಕರಾವಳಿ ಜನರ ವಲಸೆಯು ಪ್ರಮುಖವಾಗಿ ಹವಾಮಾನ ವೈಪರೀತ್ಯಗಳು, ಉದ್ಯೋಗಾವಕಾಶಗಳ ಕೊರತೆ ಮತ್ತು ನಗರೀಕರಣದಿಂದ ಉಂಟಾಗುತ್ತಿತ್ತು. ಸಾವಿರಾರು ಜನ ಈಗ ಘಟ್ಟ ವಾಸಿಗಳಾಗಿದ್ದಾರೆ ಅವರಿಗೆ ಅವರ ಕುಟುಂಬಗಳು ವಲಸೆ ಬಂದ ಕಥೆ ಮರೆತು ಹೋಗಿರಬಹುದು. #ಘಟ್ಟಕ್ಕೆ_ವಲಸೆ_ಬರುತ್ತಿದ್ದ_ಕರಾವಳಿ_ಜನ ಎಂಬುದು ಕರ್ನಾಟಕದ ಸಾಮಾಜಿಕ ಮತ್ತು ಅರ್ಥಿಕ ಇತಿಹಾಸದಲ್ಲಿ ಅತ್ಯಂತ ಪ್ರಮುಖ ಹಾಗೂ ಆಸಕ್ತಿದಾಯಕ ಅದ್ಯಾಯವಾಗಿದೆ. ಈ ಕರಾವಳಿ ಜನರ ವಲಸೆ ಬಗ್ಗೆ ಶಿವರಾಮ ಕಾರಂತರು ತಮ್ಮ ಕಾದಂಬರಿಯಲ್ಲಿ ದಾಖಲಿಸಿದ್ದಾರೆ ಅದು ಸಿನಿಮಾ ಕೂಡ ಆಗಿ ಪ್ರಸಿದ್ಧಿ ಪಡೆದಿತ್ತು. ಶಿವರಾಮ ಕಾರಂತರ ಪ್ರಸಿದ್ಧ ಕಾದಂಬರಿ #ಚೋಮನದುಡಿಯಲ್ಲಿ ಕರಾವಳಿ ಭಾಗದ ವಲಸೆಯ ಚಿತ್ರಣವು ಕೇವಲ ಭೌಗೋಳಿಕ ಸ್ಥಳಾಂತರವಾಗಿರದೆ ಅದು ಅಂದಿನ ಕಾಲದ ಸಾಮಾಜಿಕ, ಆರ್ಥಿಕ ಮತ...
ಶಿವಮೊಗ್ಗ_ಬೆಂಗಳೂರು_ವಿಮಾನ_ಸಂಚಾರ_ರದ್ದು_ಏಕೆ?... ಶಿವಮೊಗ್ಗ ಬೆಂಗಳೂರು ವಿಮಾನ ಮಾರ್ಗದಲ್ಲಿ ಪ್ರಯಣಿಕರ ಸಂಖ್ಯೆ ಉತ್ತಮವಾಗೇ ಇತ್ತು ಸುಮಾರು ಶೇಕಡಾ 80% ಸೀಟುಗಳು ಭರ್ತಿ ಆಗುತ್ತಿತ್ತು ಆದರೂ ವಿಮಾನಗಳ ಸಂಚಾರ ಸ್ಥಗಿತಗೊಳಿಸಲು ಕಾರಣ ಏನು?... ತಿಂಗಳಿಗೆ ಸರಾಸರಿ 10 ರಿಂದ 13 ಸಾವಿರ ಜನ ವಿಮಾನದಲ್ಲಿ ಈ ಮಾರ್ಗದಲ್ಲಿ ಸಂಚರಿಸಿದರೂ ವಿಮಾನ ಸಂಚಾರ ನಿಲ್ಲಿಸಿದ್ದು ಏಕೆ?... ಶಿವಮೊಗ್ಗ ಬೆಂಗಳೂರಿಗೆ #ಉಡಾನ್ ಯೋಜನೆ ಇನ್ನೂ ಪ್ರಾರಂಭವಾಗಿಲ್ಲ ಏಕೆ?.. ಶಿವಮೊಗ್ಗದಲ್ಲಿ ಪ್ರಧಾನ ಮಂತ್ರಿ ಮೋದೀಜಿ ಅವರಿಂದ ಉದ್ಘಾಟನೆಗೊಂಡ #ಕುವೆಂಪು_ ವಿಮಾನ ನಿಲ್ದಾಣದಲ್ಲಿ ಸಾಲು ಸಾಲಾಗಿ ವಿಮಾನ ಸಂಚಾರವನ್ನು ಸ್ಥಗಿತಗೊಳಿಸುತ್ತಿರುವ ವಿಮಾನ ಸಂಸ್ಥೆಗಳ ನಿರ್ಧಾರದಿಂದ ಮೇಲಿನ ಈ ರೀತಿಯ ಪ್ರಶ್ನೆಗಳು ಏಳುತ್ತಿದೆ. ಪ್ರಸ್ತುತ #ಶಿವಮೊಗ್ಗದಿಂದ_ಬೆಂಗಳೂರಿಗೆ_ಯಾವುದೇ_ನೇರ_ವಿಮಾನ_ಸೌಲಭ್ಯ_ಲಭ್ಯವಿಲ್ಲ. ಈ ಹಿಂದೆ ಇಂಡಿಗೋ (IndiGo) ಸಂಸ್ಥೆಯು ಶಿವಮೊಗ್ಗ - ಬೆಂಗಳೂರು ನಡುವೆ ನೇರ ವಿಮಾನ ಸೇವೆ ನಡೆಸುತ್ತಿತ್ತಾದರೂ, ಕಾರ್ಯಾಚರಣೆಯ ಕಾರಣಗಳಿಂದಾಗಿ ಅದನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣವು ಆಗಸ್ಟ್ 31, 2023 ರಂದು ತನ್ನ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಭಾರತೀಯ ವಿಮಾನಯಾನ ಪ್ರಾಧಿಕಾರ (AAI) ಮತ್ತು ನಾಗರಿಕ ವಿಮಾನಯ...