ರಾಣಿ_ಚೆನ್ನಬೈರಾದೇವಿ_ಮೊದಲ_ಸಿನಿಮಾ 2013 ರಲ್ಲಿ ಚಿತ್ರಿಕರಣ ಪ್ರಾರಂಭವಾಗಿ ಅರ್ದಕ್ಕೆ ನಿಂತು ಹೋಗಿತ್ತು,ಆ ಸಿನಿಮಾದಲ್ಲಿ ರಾಣಿ ಚೆನ್ನ ಬೈರಾದೇವಿ ಪಾತ್ರ ನಟಿ #ಶೃತಿ ಆಯ್ಕೆ ಆಗಿದ್ದರು. ಆಗ ನಮ್ಮ ಗೇರುಸೊಪ್ಪೆಯ ರಾಣಿ ತೆರೆಗೆ ಬರುತ್ತಾರೆಂದು ನಾವೆಲ್ಲ ಆಸೆ ಪಟ್ಟಿದ್ದೆವು ಆದರೆ ಚಿತ್ರಿಕರಣ ಅರ್ಧದಲ್ಲೇ ನಿಂತು ಹೋಯಿತು ಇದು ಇತಿಹಾಸ ಆಸಕ್ತರಿಗೆ ತುಂಬಾ ನಿರಾಸೆ ಮಾಡಿತ್ತು. ಈಗ 13 ವರ್ಷಗಳ ನಂತರ #ಬಂದನ ಸಿನಿಮಾ ಖ್ಯಾತಿಯ #ರಾಜೇಂದ್ರಸಿಂಗ್_ಬಾಬು ನಟಿ #ರಮ್ಯಾರನ್ನ ರಾಣಿ ಚೆನ್ನ ಬೈರಾದೇವಿ ಪಾತ್ರಕ್ಕೆ ಆಯ್ಕೆ ಮಾಡಿ ಸಿನಿಮಾ ಮಾಡಲಿದ್ದಾರೆ. ರಾಣಿ ಚೆನ್ನ ಬೈರಾದೇವಿಯ ಎರಡನೆ ಸಿನಿಮಾ ಯಾವುದೇ ಅಡೆ ತಡೆ ಇಲ್ಲದೆ ಚಿತ್ರಿಕರಣ ಮುಗಿಸಿ ತೆರೆಯ ಮೇಲೆ ಬರಲಿ ಎಂದು ಹಾರೈಸೋಣ. ಕನ್ನಡ ಚಿತ್ರರಂಗದಲ್ಲಿ ಸಾಹಸ ಸಿಂಹ #ವಿಷ್ಣುವರ್ಧನ್ ಅವರ ಆಪ್ತರಾಗಿದ್ದ ಖ್ಯಾತ ನಿರ್ದೇಶಕ #ಬಿ_ರಾಮಮೂರ್ತಿ ಅವರು 2013 ರಲ್ಲಿ #ರಾಣಿ_ಚೆನ್ನಭೈರಾದೇವಿ' ಎಂಬ ಐತಿಹಾಸಿಕ ಸಿನಿಮಾವನ್ನು ನಿರ್ದೇಶಿಸಲು ಯೋಜನೆ ರೂಪಿಸಿದ್ದರು. ಕನ್ನಡದ ಹಿರಿಯ ನಟಿ ಶ್ರುತಿ ಅವರು ಈ ಚಿತ್ರದಲ್ಲಿ ರಾಣಿ ಚೆನ್ನಭೈರಾದೇವಿಯ ಪ್ರಧಾನ ಪಾತ್ರದಲ್ಲಿ ನಟಿಸಲು ಆಯ್ಕೆಯಾಗಿದ್ದರು. ಗೇರುಸೊಪ್ಪೆಯ ರಾಣಿಯಾಗಿದ್ದ ಚೆನ್ನಭೈರಾದೇವಿ ಕರಾವಳಿ ಕರ್ನಾಟಕವನ್ನು ಬರೋಬ್ಬರಿ 54 ವರ್ಷಗಳ ಕಾಲ ಆಳಿದ ಧೀರ ಮಹಿಳೆ. ...
ಪ್ರೆಸ್_ಕ್ಲಬ್_ಪ್ರೆಸ್_ಮೀಟ್ ಬೆಂಗಳೂರಿನ ಪ್ರತಿಷ್ಟಿತ ಪ್ರೆಸ್ ಕ್ಲಬ್ ನಲ್ಲಿ ಪ್ರಖ್ಯಾತ ನಟ ಮತ್ತು ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಪತ್ರಿಕಾಗೋಷ್ಟಿಯಲ್ಲಿ ಮಾಧ್ಯಮದವರು ಶಿಸ್ತು ಕಾಪಾಡಿಕೊಳ್ಳದಿರುವುದು ಇಡೀ ಪತ್ರಿಕಾ ವ್ಯವಸ್ಥೆಯ ದೊಡ್ಡ ಲ್ಯಾಪ್ಸ್ ಆಗಿದೆ. ಅತಿಥಿಗಳು ಪತ್ರಕರ್ತರ ಪ್ರಶ್ನೆಗಳಿಗೆ ಗೌರವ ನೀಡದಿದ್ದರೆ ಅದು ಪತ್ರಿಕಾ ಸ್ವಾತಂತ್ರ್ಯದ ಅವಮಾನ ಅದೇ ರೀತಿ ಪತ್ರಕರ್ತರು ವೃತ್ತಿಪರತೆ ಮರೆತು ವರ್ತಿಸಿದರೆ ಅದು ಮಾಧ್ಯಮ ರಂಗ ತನಗೆ ತಾನೇ ಮಾಡಿಕೊಳ್ಳುವ ಅವಮಾನ. ಪತ್ರಿಕಾಗೋಷ್ಠಿಯ ಯಶಸ್ಸು ಅಡಗಿರುವುದು ಪಾರದರ್ಶಕತೆಯಲ್ಲಿ,ಸಂಘಟಕರು ಯಾವುದೇ ಮುಚ್ಚುಮರೆಯಿಲ್ಲದೆ ಮಾಹಿತಿ ನೀಡುವುದು ಮತ್ತು ಪತ್ರಕರ್ತರು ಯಾವುದೇ ಪೂರ್ವಾಗ್ರಹವಿಲ್ಲದೆ ವಸ್ತುನಿಷ್ಠವಾಗಿ ಪ್ರಶ್ನೆ ಕೇಳಿದಾಗ ಮಾತ್ರ ಪತ್ರಿಕಾಗೋಷ್ಠಿಯ ನೈಜ ಉದ್ದೇಶ ಸಫಲವಾಗುತ್ತದೆ. ಹಾಗಾದರೆ ಆ ಪತ್ರಿಕಾಗೋಷ್ಟಿಯಲ್ಲಿ ಬೆಂಗಳೂರು ಫ್ರೆಸ್ ಕ್ಲಬ್ ನ ನಿಯಮ ಉಲ್ಲಂಘನೆ ಆಯಿತಾ... ಇದರಿಂದ ಬೆಂಗಳೂರಿನ ಪ್ರೆಸ್ ಕ್ಲಬ್ ಈಗ ಕೈಗೊಂಡ ನಿರ್ಧಾರಗಳು ಏನು?... ಕರ್ನಾಟಕದಲ್ಲಿ ಅಥವಾ ಯಾವುದೇ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿ ನಡೆಸಲು ಮತ್ತು ಅದರಲ್ಲಿ ಭಾಗವಹಿಸಲು ಕೆಲವು ನಿರ್ದಿಷ್ಟ ನಿಯಮಗಳು ಹಾಗೂ ಶಿಷ್ಟಾಚಾರಗಳನ್ನು ಪಾಲಿಸಬೇಕಾಗುತ್ತದೆ. ಇವುಗಳನ್ನು ಆಯಾ ಪ್ರೆಸ್ ಕ...