ಭಾಗ_ಎರಡು #ಸಂಸದರಾದ_ಮಾಜಿ_ಮುಖ್ಯಮಂತ್ರಿ_ಬಂಗಾರಪ್ಪನವರನ್ನೇ_ಬಿಟ್ಟು_ಹೋದ #ಹೊಳೆಬಾಗಿಲು_ಲಾಂಚ್_ಸಿಬ್ಬಂದಿಗಳು. #sharavathirivet #sagar #govtofkarnataka #govtofindia #ambargodlu #kalasavalli #siganduru #cablebridge #SBangarappa #shivamogga #parlimentmember 1996ರಲ್ಲಿ ಬಂಗಾರಪ್ಪನವರು ಮಾಜಿ ಮುಖ್ಯಮಂತ್ರಿಗಳು ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಿದರು. ಆಗ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕರಾದ ಕಾಗೋಡು ತಿಮ್ಮಪ್ಪನವರ ಲಕ್ಷ್ಮಣ ರೇಖೆ ದಾಟಲು ಸಾಧ್ಯವಿರಲಿಲ್ಲ. ಅವರೆಲ್ಲ ಚುನಾವಣೆಯಲ್ಲಿ ಬಂಗಾರಪ್ಪನವರಿಗೆ ವಿರುದ್ಧವಾಗಿ ಕಾಂಗ್ರೇಸ್ ಅಭ್ಯರ್ಥಿ ಕೆ.ಜಿ. ಶಿವಪ್ಪನವರ ಪರವಾಗಿ ಕೆಲಸ ಮಾಡಿದ್ದರು. ಸಾಗರ ತಾಲೂಕಿನಲ್ಲಿ ಹರುನಾಥರಾವ್, ಮೊಹಮ್ಮದ್ ಕೊಯಾ, ಮೊಹಮದ್ ಖಾಸಿಂ,ಕಾಗೋಡು ಹೋರಾಟದ ನೇತಾರಗಣಪತಿಯಪ್ಪ ಮತ್ತು ಅನೇಕರ ಜೊತೆ ನಾನು ಸೇರಿ ಬಂಗಾರಪ್ಪನವರ ಗೆಲುವಿಗೆ ಕಟಿಬದ್ಧರಾಗಿ ಚುನಾವಣೆ ಮಾಡಿದೆವು ಚುನಾವಣೆಯಲ್ಲಿ ಬಂಗಾರಪ್ಪನವರು ಗೆಲ್ಲುತ್ತಾರೆ ಸಾಗರ ತಾಲೂಕಿನಲ್ಲಿ ಅವರಿಗೆ ಲೀಡ್ ಬರುತ್ತದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಂಗಾರಪ್ಪನವರಿಗೆ ವಿರುದ್ಧ ಆಗಿದ್ದರೂ ಮತದಾರರು ಬಂಗಾರಪ್ಪನವರ ಕೈ ಬಿಡಲಿಲ್ಲ. ಸಂಸದರಾಗಿ ಆಯ್ಕೆ ಆದ ಬಂಗಾ...
ಭಾಗ_ಒಂದು. #ಅಂಬಾರಗೋಡ್ಲು_ಕಳಸವಳ್ಳಿ_ಸೇತುವೆ_ಉದ್ಘಾಟನೆಯ_ಕ್ಷಣಗಣನೆಯಲ್ಲಿ #ನಾನು_ಮೊದಲ_ಬಾರಿಗೆ_ಹೊಳೆಬಾಗಿಲು_ಲಾಂಚ್_ನೋಡಿದ್ದು_ದಾಟಿದ್ದು. #sharavathiriver #linganamakkidam #ambargodlu #kalasavalli #cablebridge #prasannakereki #byraghavendra #kagoduthimmappa 1989 ಅಥವ 1990 ರಲ್ಲಿ ನಾನು ಕಾಗೋಡು ತಿಮ್ಮಪ್ಪನವರ ಕಪ್ಪುಅಂಬಾಸಡರ್ ಕಾರಿನಲ್ಲಿ ಮೊದಲ ಬಾರಿಗೆ ಹೊಳೆಬಾಗಿಲು ನೋಡಿದ್ದು ಮತ್ತು ಮೊದಲ ಬಾರಿಗೆ ಲಾಂಚಿನಲ್ಲಿ ದಾಟಿದ್ದು ನೆನಪುಗಳು. ಗುಂಡೂರಾವ್ ಮತ್ತು ಬಂಗಾರಪ್ಪನವರ ರಾಜಕೀಯ ಸಂಘರ್ಷದಲ್ಲಿ ಜನತಾ ಪಕ್ಷದ ಕಾಗೋಡು ತಿಮ್ಮಪ್ಪನವರನ್ನು ಕಾಂಗ್ರೆಸ್ಸಿಗೆ ಸೇರಿಸಿ ವಿಧಾನ ಪರಿಷತ್ ಸದಸ್ಯರನ್ನಾಗಿಸಿ ಮಂತ್ರಿನ್ನಾಗಿಸಿದ್ದು ಇತಿಹಾಸ. ನಂತರ ಸುಮಾರು ವರ್ಷಗಳ ಕಾಲ ಸಾಗರದ ರಾಜಕೀಯ ರಂಗದಲ್ಲಿ ಕಾಗೋಡು ತಿಮ್ಮಪ್ಪನವರು ಇಲ್ಲದ್ದರಿಂದ ಆಗಿನ ಕಾಂಗ್ರೆಸ್ ಪಕ್ಷದ ಕಟ್ಟಾ ಮುಖಂಡರಾದ ಅಹ್ಮದ್ ಅಲಿಖಾನ್ ಸಾಬ್ ಹೇಗಾದರೂ ಮಾಡಿ ಕಾಗೋಡು ತಿಮ್ಮಪ್ಪನವರನ್ನು ಸಾಗರ ತಾಲ್ಲೂಕಿನ ರಾಜಕಾರಣಕ್ಕೆ ಕರೆತರಬೇಕು ಎಂಬ ಪ್ರಯತ್ನ ಪ್ರಾರಂಬಿಸಿದ್ದರು. 1989 ರ ವಿಧಾನಸಭಾ ಚುನಾವಣೆಗೆ ಕಾಗೋಡು ತಿಮ್ಮಪ್ಪನವರನ್ನು ಕರೆ ತರುವ ಪ್ರಸ್ತಾವನೆಯನ್ನು ಮಾಡಿದರು ಇದಕ್ಕೆ ಅವರಿಗೆ ಸಾತ್ ಕೊಟ್ಟವರು ಪುತ್ತೂರಾಯರು ಮತ್ತು ಕುರುಬರ ಲಿಂಗಪ್ಪನವರು. ಆಗ ...