Skip to main content

ಮ್ಯಾಗ್ಸಸೈ ಪ್ರಶಸ್ತಿ ವಿಜೇತ ಕೆ.ವಿ.ಸುಬ್ಬಣ್ಣರೊಡನೆ.

ಹೆಗೋಡಿನ ನಿನಾಸಂ ಸಂಸ್ಥೆ ನಾಟಕ ಮತ್ತು ಸಿನಿಮಾ ಜನರಿಗೆ ಹೇಗೆ ಚಿರಪರಿಚಿತ ಹಾಗೆ ಇದರ ಸಂಸ್ಥಾಪಕ ಕೆ.ವಿ.ಸುಬ್ಬಣ್ಣ ತಮ್ಮ ವಿಚಾರ ಮತ್ತು ಬರವಣಿಗೆಯಿಂದ ವಿಶ್ವವಿಖ್ಯಾತರು, ಅಂತರಾಷ್ಟ್ರೀಯ ಮ್ಯಾಗ್‌ ಸೆಸೆ ಪ್ರಶಸ್ತಿ ವಿಜೇತರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಣ್ಣ ಹಳ್ಳಿ ಹೆಗೋಡುನವರು ನಮ್ಮ ತಾಲ್ಲೂಕಿನವರು ಅಂತ ನಮಗೆಲ್ಲ ಹೆಮ್ಮೆ.
     ಒಮ್ಮೆ ನೀನಾಸಂ ಸಭಾ0ಗಣದಲ್ಲಿ ಸುಬ್ಬಣ್ಣನವರ ಜೊತೆ ಸಭೆ ಒಂದರಲ್ಲಿ ಅತಿಥಿಯಾಗಿ ಭಾಗವಹಿಸಿದ್ದೆ, ದೇವಾಡಿಗ ಜಾತಿಯ (ವೀರಪ್ಪ ಮೊಯ್ಲ್ ) ಜಾತಿ ಸಮಾವೇಶವದು, ಸಂಘಟಕರು ನನ್ನನ್ನ ಕರೆದಾಗ ನನಗೆ ನಂಬಲಿಕ್ಕೆ ಆಗಲಿಲ್ಲ, ಸಣ್ಣ ಜಾತಿ ಸಮಾವೇಶಕ್ಕೆ ಸುಬ್ಬಣ್ಣ ಬರುವುದು ಅನುಮಾನ ಅಂದೆ. ಇಲ್ಲ ಒಪ್ಪಿದಾರೆ ಸಬಾo ಗಣ ಉಚಿತವಾಗಿ ನೀಡಿದಾರೆ ಅಂದರು.
      ಅವತ್ತಿನ ಸಭೆಯಲ್ಲಿ ಸುಬ್ಬಣ್ಣರ ಬಾಷಣ ಸಣ್ಣ ಜಾತಿಯ ಶೂದ್ರರಿಗೆ ಒ೦ದು ಆಶಾದಾಯಕ ನೀತಿ ಪಾಠವಾಗಿತ್ತು, ಸಮಾಜವಾದದ ಅನುಯಾಯಿ ಆಗಿದ್ದ ಸುಬ್ಬಣ್ಣ ಲೋಹಿಯ ವಿಚಾರಧಾರೆ ಹೊಂದಿದವರು ಹಾಗಾಗಿ ಅವರ ಮಾತನ್ನ ಗಮನವಿಟ್ಟು ಆಲೈಸುತ್ತಿದ್ದೆ..........
     " ದೇಶದಲ್ಲಿ ಮೇಲ್ಜಾತಿಗಳು ಸಂಘಟನೆಗಳು ಅವಶ್ಯವಿಲ್ಲ ಅದರಿಂದ ಸಮಾಜಕ್ಕೆ ಮಾರಕ ಆದರೆ ಅಸಂಘಟಿತ ಸಣ್ಣ ಸಣ್ಣ ಜಾತಿಗಳು ತಮ್ಮ ಹಕ್ಕು ಮತ್ತು ಸವಲತ್ತುಗಳಿಗಾಗಿ ಸಂಘಟಿತರಾಗಬೇಕು " ಎಂಬ ಮಾತು ಸ್ವತಃ ಬ್ರಾಹಮಣರಾದ ಹಾಗೂ ವಿಚಾರವಾದಿ ಸುಬ್ಬಣ್ಣರ ಬಾಯಲ್ಲಿ ಬ೦ದಿದ್ದರ ತಾತ್ಪಯ೯ ಅವರಿಂದಲೆ ಕೇಳಬೇಕೆಂದುಕೊಂಡೆ.
      ಸಬೆಯ ಮಧ್ಯದಲ್ಲಿ ಅವರು ವಿರಾಮದ ಮೂಡಿನಲ್ಲಿ ಇದ್ದಾಗ ಸುಬ್ಬಣ್ಣ ಮೇಲ್ಜಾತಿಗಳು ಯಾಕೆ ಸಂಘಟಿತರಾಗಬಾರದು, ಸಂಘಟಿತರಾದರೆ ಸಮಾಜಕ್ಕೆ ಯಾವ ರೀತಿ ಮಾರಕ ? ನನಗೆ ಸರಿಯಾಗಿ ಅಥ೯ವಾಗಿಲ್ಲ ಅಂದೆ, ಬ್ರಾಹ್ಮಣರು ಸಾವಿರಾರು ವಷ೯ದಿಂದ ತಮ್ಮ ಆಚರಣೆಗಳಿಂದ ಸಂಘಟಿತರಾಗೇ ಇದ್ದಾರೆ ಅವರಿಗೆ ಸಣ್ಣ ಜಾತಿಗಳ0ತೆ ಅವರ ಹಕ್ಕು, ಸವಲತ್ತುಗಳಿಗಾಗಿ ಹೋರಾಟ ಮಾಡುವ ಅವಶ್ಯಕತೆ ಇಲ್ಲ, ಇಂತಹ ಉದ್ದೇಶದ ಸಂಘಟನೆ ಪ್ರಾರಂಭಿಸಿದರೆ ದೇಶದ ಇತರ ಜಾತಿಗಳನ್ನ ಅವು ಶೋಶಣೆ ಮಾಡಲು ಕಾರಣವಾಗುತ್ತೆ ಆದ್ದರಿಂದ ಅದರ ಅವಶ್ಯಕತೆ ಇಲ್ಲ ಆದರೆ ಸಣ್ಣ ಸಣ್ಣ ಜಾತಿಗಳು ತಮ್ಮ ಹಕ್ಕುಗಳಿಗಾಗಿ ಸವಲತ್ತುಗಳಿಗಾಗಿ ಸಂಘಟಿತರಾಗದಿದ್ದರೆ ಸಂಘಟಿತ ದೊಡ್ಡ ಜಾತಿಗಳಿಂದ ಉಳಿಗಾಲ ಇಲ್ಲ ಅಂದರು.
    ಅವರ ಮಾತು ಸರಿಯಾಗಿ ಚಿಂತನೆ ಮಾಡಿದರೆ ಎಷ್ಟು ಅಥ೯ಗಬಿ೯ ಅಂತ ಅಥ೯ ಆಗುತ್ತೆ

 ಕೆ.ವಿ.ಸುಬ್ಬಣ್ಣ 1982ರಲ್ಲಿ ನಡೆದ ಹವ್ಯಕ ಜಾಾತಿ ಸಮಾಾವೇಶದಲ್ಲಿ ಪ್ರಕಟಿಸಿದ ಪತ್ರ ಪ್ರತಿ ಇಲ್ಲಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...