Skip to main content

ದಲಿತ ಸಂಘಷ೯ ಸಮಿತಿ ಸಂಸ್ಥಾಪಕರಾದ ಬಿ.ಕೃಷ್ಣಪ್ಪರಿಂದ ಬೆತ್ತಲೆ ಸೇವೆ ನಿಂತಿತು

ಶಿವಮೊಗ್ಗ ಜಿಲ್ಲೆಯ ಚಂದ್ರಗುತ್ತಿಯ ರೇಣುಕಮ್ಮ, ದೇವಾಲಯದಲ್ಲಿ ಪ್ರತಿ ವಷ೯ ನಡೆಯುತ್ತಿದ್ದ ಬೆತ್ತಲೆ ಸೇವೆಯನ್ನ ನಿಲ್ಲಿಸಲು ಪ್ರಗತಿಪರರು ಮುಂದಾದಾಗ ಅದಕ್ಕೆ ಅನೇಕ ಅಡಚಣೆ ಬ೦ತು, ಗೌರವಾನ್ವತ ಕುಟುಂಬಗಳ ಪ್ರಾಯದ ಹೆಣ್ಣಮಕ್ಕಳು ತಮ್ಮ ಬಾಲ್ಯದಲ್ಲಿ ತಮ್ಮ ಪೋಷಕರು ಮಾಡಿದ ಹರಕೆ ತೀರಿಸಲು ವರದಾ ನದಿಯಲ್ಲಿ ಮಿಂದು ಬೆತ್ತಲೆಯಾಗಿ ನಾಕಾರು ಕಿ.ಮಿ. ನಡೆದು ದೇವಾಲಯಕ್ಕೆ ಹೋಗಿ ಪೂಜೆ ಮಾಡಿಸಬೇಕಿತ್ತು.ಬೆತ್ತಲಾಗಿ ಹೋಗುವ ಸಂಕಟ ಈ ಕುಟುಂಬಗಳದ್ದಾದರೆ ಇವರನ್ನ ನೋಡಲು ಪೋಲಿ ಪಟಾಲಂಗಳು ಕೆಲವು ಸಾವಿರ ಅಲ್ಲಿ ಸೇರುತ್ತಿತ್ತು. ಅವತ್ತಿನ ಲೈಂಗಿಕ ಪತ್ರಿಕೆಗಳಾದ ರತಿ ವಿಜ್ಞಾನ ಮುಂತಾದವು ಆ ಚಿತ್ರಗಳನ್ನ ನೇರವಾಗಿ ಪ್ರಕಟಿಸಿ ಹೆಚ್ಚಿನ ಪ್ರಸಾರ ಪಡೆಯುತ್ತಿದ್ದವು. ಅವತ್ತು ದಲಿತ ಸಂಘಷ೯ ಸಮಿತಿ ಸಂಸ್ಥಾಪಕರಾದ ಬಿ.ಕೃಷ್ಣಪ್ಪ ಇದನ್ನೊಂದು ಸವಾಲಾಗಿ ತೆಗೆದು ಕೊಂಡರು.ಸಕಾ೯ರದಲ್ಲಿ ಆಗ ಮಂತ್ರಿ ಆಗಿದ್ದ ಜೆ.ಹೆಚ್.ಪಟೇಲರು ಸಾತ್ ನೀಡಿದರು ಆದರೆ ಸ್ಥಳಿಯ ಶಾಸಕರಾಗಿದ್ದ ಬಂಗಾರಪ್ಪ ಮತ ಗಳಿಗಾಗಿ ತಟಸ್ಥರಾಗಿದ್ದರು.
ಭಕ್ತರನ್ನ ಇದನ್ನ ತಡೆಯಲು ಪ್ರಯತ್ನಿಸಿದವರ ಮೇಲೆ ಎತ್ತಿಕಟ್ಟಿದರು, ಸಾವಿರಾರು ವರುಷದಿಂದ ನಡೆದುಕೊಂಡ ಪದ್ದತಿ ನಿಲ್ಲಿಸಿದರೆ ದೇವಿಯ ಶಾಪ ಎದುರಿಸಬೇಕಾದೀತೆಂಬ ಪಾಪ ಪ್ರಜ್ಞಾ ಪ್ರಚಾರ ಮಾಡಿದರು, ಇದನ್ನ ಅಡ್ಡಗಟ್ಟುತ್ತಿರುವವರು ದಲಿತರು ಅವರನ್ನ ಅಟ್ಟಾಡಿಸಿ ಹೊಡೆಯಿರಿ ಅಂತ ಭೂಮಾಲಿಕರು, ವೈದಿಕರು ಸುಕುಂ ಮಾಡಿದರು,ಜೋಗಪ್ಪಗಳ ದೊಡ್ಡ ಗುಂಪಿಗೆ ಪ್ರಚೋದನೆ ಮಾಡಿ ಬಿಟ್ಟರು ನಂತರ ಸುಯೋ೯ದಯದಿಂದ ಸೂಯಾ೯ ಸ್ತದ ತನಕ ನಡೆದಿದ್ದು ಅಮಾನಿಯ ದೌಜ೯ನ್ಯ ಚಳವಳಿಗಾರರನ್ನ ಜೀವ ಸಹಿತ ಬಿಟ್ಟಿದ್ದೆ ಪುಣ್ಯ ನಂತರ ಪ್ರಚೋದಿತ ಗುಂಪು ರಣೋಲ್ಲಾಸದಲ್ಲಿ ಮೈಮರೆತು ರಕ್ಷಣೆಗೆ ನಿಯೋಜಿತರಾದ ಪೋಲಿಸರನ್ನೂ ಬಿಡಲಿಲ್ಲ ನಂತರದ್ದು ಇತಿಹಾಸ, ಈಗ ಬೆತ್ತಲೆ ಸೇವೆ ನಿಂತಿದೆ.
ಹೀಗೆ ಜನಪರ ಹೋರಾಟ ಹಲವು ಆಯಾಮ ದಾಟಿಯೇ ಗುರಿ ಮುಟ್ಟುತ್ತದೆ ಆದರೆ ಕಾಲದ ವೇಗದಲ್ಲಿ ಎಲ್ಲವೂ ಮರೆಯುತ್ತೇವೆ.
ಬಿ. ಕೃಷ್ಣಪ್ಪರ ಈ ಹೋರಾಟ ಒಮ್ಮೆಯೂ ಯಾರೂ ನೆನಪು ಮಾಡಿಕೊಳ್ಳದಿರುವುದು ವಿಷಾದನೀಯ, ಅವರು ಈ ಹೋರಾಟದಲ್ಲಿ ಅಹಿಂಸೆ, ಕಾನೂನು ಬೆಂಬಲ ಪಡೆದಿದ್ದರು.
ಸಾವ೯ಜನಿಕ ಸ್ಥಳದಲ್ಲಿ ಜಾತಿ ಆಚರಣೆ ನಿವಾರಣೆಗೆ ಇದೇ ರೀತಿ ಚಳವಳಿ ಅಗತ್ಯವಿದೆ. ಈಗ ಪರಸ್ಪರ ಕೆಸರರಚಾಟ ನೋಡಿದರೆ ಬೇಸರ ಅನ್ನಿಸುತ್ತೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...