Skip to main content

ಕೆ.ವಿ.ಸುಬ್ಬಣ್ಣ ಹೆಸರಲ್ಲಿ ರಂಗಮಂದಿರ ನಿಮಿ೯ಸಿದ್ದು ಒಂದು ಅನುಭವ.

   ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಖ್ಯಾತ ಕೆ.ವಿ. ಸುಬ್ಬಣ್ಣ ರಂಗಮಂದಿರ.

        ಸಾಗರ ತಾಲ್ಲೂಕಿನ ಖ್ಯಾತ ರಂಗ ಕಮಿ೯, ಬರಹಗಾರ, ಚಿಂತಕ, ವಿಚಾರವಾದಿ, ಪರಿಸರವಾದಿ, ಸಮಾಜವಾದಿ ಮತ್ತು ಅಂತರಾಷ್ಟ್ರ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಹೆಗೋಡಿನ ಕೆ.ವಿ. ಸುಬ್ಬಣ್ಣ ತಮ್ಮ ಊರಲ್ಲಿ ಪ್ರಖ್ಯಾತ ಸಾಹಿತಿ, ಪರಿಸರವಾದಿ, ಯಕ್ಷಗಾನ ತಜ್ಞ ಡಾಕ್ಟರ್ ಶಿವರಾಮ ಕಾರಂತರ ಹೆಸರಲ್ಲಿ ರಂಗ ಮಂದಿರ ಕಟ್ಟಿದ್ದಾರೆ, ನೀನಾಸಂ ಹೆಸರಲ್ಲಿ ಇದು ದೇಶ ಅಂತರ್ ದೇಶದಲ್ಲಿ ಹೆಸರುವಾಸಿ ಆಗಿದೆ.
        ಹೆಗೋಡಿನಲ್ಲಿ ಅವರು ನಿಮಿ೯ಸಿದ ರಂಗಮಂದಿರಕ್ಕೆ ಶಿವರಾಮ ಕಾರಂತರ ಹೆಸರಿಡಲು ಆವರು ನಡೆಸಿದ ಪತ್ರ ಸಂವಾದ ಸುಬ್ಬಣ್ಣರ ಪುಸ್ತಕದಲ್ಲಿ ನಮೂದಿಸಿದ್ದಾರೆ, ಇವರು ಶಿವರಾಮ ಕಾರ೦ತರ ಹೆಸರಿಡಲು ತೀಮಾ೯ನಿಸಿ ಅವರ ಒಪ್ಪಿಗೆ ಗಾಗಿ ಪತ್ರಿಸುತ್ತಾರೆ ಅದಕ್ಕೆ ಕಾರಂತರ ಉತ್ತರ ಪ್ರತ್ಯುತ್ತರ ಆ ಪುಸ್ತಕದಲ್ಲಿದೆ.
         ಜಿಲ್ಲಾ ಪಂಚಾಯತ ಸದಸ್ಯನಾದ ನಂತರ ಅವರ ಒಡನಾಟ ಕಾಗೋಡು ಹೋರಾಟದ ನೇತಾರ ಗಣಪತಿಯಪರಿಂದ ಹೆಚ್ಚಾಯಿತು ಅದಕ್ಕೂ ಮೊದಲು ಸುಬ್ಬಣ್ಣರ ಬಗ್ಗೆ ಓದಿ ತಿಳಿದಿದ್ದೆ, ಕೇಳಿ ಅರಿತಿದ್ದೆ ಹಾಗೂ ದೂರದಿಂದ ನೋಡಿ ಬಲ್ಲಿದ್ದೆ.

      ಒಮ್ಮೆ ಸಾಗರದಿಂದ ಆನಂದಪುರಕ್ಕೆ ರಾತ್ರಿ ಹೋಗುವಾಗ ಆ ಬಸ್ಸಲ್ಲಿ ಸುಬ್ಬಣ್ಣ ಇದ್ದರು ಎದರು ಸೀಟಿನಲ್ಲಿ ಒಬ್ಬ ಪ್ರಯಾಣಿಕ ಸಿಗರೇಟು ಸೇದಿ ಹೋಗೆ ಬಿಡುತ್ತಿದ್ದ ಈ ಘಟನೆ 1985 ರಲ್ಲಿ ನಡೆದಿದ್ದು ಬಸ್ ಲ್ಲಿ ಇದ್ದವರು ಅವನನ್ನ ತಡೆಯಲು ಪ್ರಯತ್ನಿಸಿ ವಿಫಲರಾದರು ಆದರೆ ಸುಬ್ಬಣ್ಣ ಅವನನ್ನ ತರಾಟೆಗೆ ತೆಗೆದು ಕೊಂಡರು ಆತ ಡ್ರೈವರ್ ಕಡೆ ಕೈ ತೋರಿಸಿ ಹಾಸ್ಯ ಮಾಡಿದ ಅಲ್ಲಿ ಬಸ್ ಚಾಲಕ ಕೂಡ ಸಿಗರೇಟು ಸೇಯುತ್ತಾ ಬಸ್ ಚಾಲನೆ ಮಾಡುತ್ತಿದ್ದ!! ಆಗೆಲ್ಲ ಸಾವ೯ಜನಿಕ ಸ್ಥಳದಲ್ಲಿ ದೂಮಪಾನ ನಿಷೇದ ಬಹುಮತದ ಆಧಾರದಲ್ಲಿತ್ತು, ಅಂತ್ಯ ದಲ್ಲಿ ಸುಬ್ಬಣ್ಣ ಇಬ್ಬರೂ ಸಿಗರೇಟು ಸೇದದಂತೆ ಮಾಡಿದರು.

   1983ರಲ್ಲಿ ನಮ್ಮ ಊರಿಂದ ನಾವೆಲ್ಲ ಗೆಳೆಯರು ಸೈಕಲ್ ಮೇಲೆ ಹೆಗೋಡಿಗೆ ಹೋಗಿ ಅಲ್ಲಿ ಮಸಣದ ಬಟ್ಟೆ ಎಂಬ ನಾಟಕ ನೋಡಿದ ನೆನಪು, ಸಾಗರದಲ್ಲಿ ಚಿನ್ನದ ಗಣಿ ವಿರೋದಿ ಹೋರಾಟದಲ್ಲಿ ಅವರ ಭಾಷಣ, ಗುಟ್ಕರದ್ದು ಮಾಡುವ ವಿಚಾರದಲ್ಲಿ ಅವರ ಅಚಲ ನಿದಾ೯ರ ಕ್ಯಾನ್ಸರ್ಗೆ ಕಾರಣವಾದ ಗುಟ್ಕ ರದ್ದತಿಗೆ ಸ್ವತಃ ಅಡಿಕೆ ಬೆಳೆಗಾರರಾದರೂ ಸಾವ೯ಜನಿಕರ ಆರೋಗ್ಯದ ಪರ ವಾದ ಹೀಗೆ ಹತ್ತಾರು ವಿಚಾರ ನನಗೆ ಸುಬ್ಬಣ್ಣರ ಬಗ್ಗೆ ಅಭಿಮಾನಕ್ಕೆ ಕಾರಣವಾಯಿತು.

     ಹಾಗಾಗಿ ನನಗೆ ಅವರ ಹೆಸರಲ್ಲಿ ರಂಗ ಮಂದಿರ ನಿಮಿ೯ಸಲು ಯೋಚಿಸಿದ್ದೆ, ಆನಂದಪುರಂ ಸಮೀಪದ ಮುರುಘಾಮಠದ ಸಕಾ೯ರಿ ಶಾಲಾವರಣದಲ್ಲಿ ಜಿಲ್ಲಾ ಪಂಚಾಯತ್ ಅನುದಾನದಲ್ಲಿ ರಂಗ ಮಂದಿರ ನಿಮಿ೯ಸಿದೆವು, ಆನಂದಪುರದ JCB ಚಂದ್ರಶೇಖರ್ ಅಂಬಲಿಗೋಳ ಹಣ ಮಂಜೂರಾಗದಿದ್ದರೂ ನಮ್ಮ ಒಳ್ಳೆಯ ಉದ್ದೇಶ ಅರಿತು ಕಾಮಗಾರಿ ಮುಗಿಸಿದರು.

    ಉದ್ಘಾಟನೆಗಾಗಿ ಸುಬ್ಬಣ್ಣರ ಬೇಟಿ ಮಾಡಿದೆ, ತಮ್ಮ ಸ್ವ೦ತ ಹೆಸರಿನ ರಂಗಮಂದಿರ ಅ೦ದಾಗ ಸ್ವಲ್ಪ ಗಂಭೀರವಾದರು ಆಗ ಅವರ ಮತ್ತು ಶಿವರಾಮ ಕಾರಂತರ ಪತ್ರ ಸಂವಾದ ಅವರು ನಿಮಿ೯ಸಿದ ರಂಗಮಂದಿರದ ನಾಮ ಕರಣಕ್ಕಾಗಿ ನಡೆದಿದ್ದು ಓದಿದ ಬಗ್ಗೆ ನೆನಪಿಸಿದೆ ಆಗ ಅವರು ನನ್ನ ಓದಿನ ಹವ್ಯಾಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು, ಹಾಗೆಯ ಅವರ ಹೆಸರನ್ನ ನಮ್ಮ ಮುರುಘಾ ಮಠದ ರಂಗ ಮಂದಿರಕ್ಕೆ ಇಡಲು ಒಪ್ಪಿಕೊಂಡರು, ಲಿಖಿತ ಅನುಮತಿ ಪಡೆದೆ ಆದರೆ ಭಾಗವಹಿಸಲು ಇಷ್ಟಪಡಲಿಲ್ಲ.

     ಅವತ್ತು ನಾವೆಲ್ಲ ಸೇರಿ ಉದ್ಘಾಟಿಸಿದ ಕೆ.ವಿ.ಸುಬ್ಬಣ್ಣ ರಂಗ ಮಂದಿರ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರಂ ಹೋಬಳಿಯ ಮುರುಘಾಮಠದ ಸಕಾ೯ರಿ ಆವರಣದಲ್ಲಿರುವುದು ನಾವೆಲ್ಲ ಆ ಮಹಾನ್ ಸಾದಕರಿಗೆ ನೀಡಿದ ಗೌರವ ಮಾತ್ರ, ಇವತ್ತು ಆನಂದಪುರಂನ ಜಿಲ್ಲಾ ಪಂಚಾಯತ ಸದಸ್ಯರಾದ ಶ್ರೀಮತಿ ಅನಿತಾಕುಮಾರಿ ಕೆ.ವಿ.ಸುಬ್ಬಣ್ಣ ರಂಗ ಮಂದಿರದ ವೀಕ್ಷಣೆಯ ಪೋಟೋ ಪೇಸ್ ಬುಕ್ನನಲ್ಲಿ ಪೋಸ್ಟ್ ಮಾಡಿದ್ದು ನೋಡಿ ಇದೆಲ್ಲ ನೆನಪಾಯಿತು.

   ಇದೇ ರೀತಿ ಆನಂದಪುರಂ ಪದವಿ ಪೂವ೯ ಕಾಲೇಜು ಆವರಣದಲ್ಲಿ ಹಾಸ್ಯ ನಟ ಬಾಲಕೃಷ್ಣ ರಂಗಮಂದಿರ ನಿಮಿ೯ಸಿ ರಾಜ್ಯ ಮಟ್ಟದ ಹಾಸ್ಯ ನಾಟಕ ಸ್ಪದೆ೯ ನಡೆಸಿದ್ದು, ಆನಂದಪುರO ನ ಕನ್ನಡ ಸಂಘದ ಆವರಣದಲ್ಲಿ ಸಾಹಿತಿ ನಾ .ಡಿಸೋಜರ ಹೆಸರಲ್ಲಿ ರಂಗಮಂದಿರ ನಿಮಿ೯ಸಿ ಕಡಿದಾಳು ಶಾಮಣ್ಣರಿಂದ ಉದ್ಘಾಟಿಸಿದ್ದು, ಯಡೇಹಳ್ಳಿಯ ಸಕಾ೯ರಿ ಶಾಲೆ ಆವರಣದಲ್ಲಿ ಕಾಗೋಡು ಹೋರಾಟದ ನೇತಾರ ಗಣಪತಿಯಪರ ಹೆಸರಲ್ಲಿ ರಂಗಮಂದಿರ ನಿಮಿ೯ಸಿ ಸಾಹಿತಿ ಕೊಣಂದೂರು ವೆಂಕಪ್ಪ ಗೌಡರಿಂದ ಉದ್ಘಾಟಿಸಿದ್ದು ಎಲ್ಲಾ ಈ ಸಂದಭ೯ದಲ್ಲಿ ನೆನಪಾಯಿತು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...