Skip to main content

Posts

Showing posts from February, 2017

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ್ರಾ ದೇಣಿಗೆಯಲ್ಲಿ ಅವ್ಯವಹಾರ ಆಗಿದೆ ಎಂಬ ದೂರು ನೀಡಲಾಗಿತ್ತೆ೦ದು ಕೆಳದಿ ಸಂಶೋದಕರಾ

ಶ್ರೀಧರ ಸ್ವಾಮಿ ವರದಳ್ಳಿ ಪವಾಡ ಪುರುಷರು.

   ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ವರದಳ್ಳಿಯ ತಪಸ್ವಿ ಶ್ರೀಧರ ಸ್ವಾಮಿಗಳು.   ವರದಳ್ಳಿ ಶ್ರೀಧರ ಸ್ವಾಮಿಗಳ ಬಗ್ಗೆ ಕೇಳಿದ್ದು, ಓದಿದ್ದು ಮತ್ತು ಅವರ ಒಡನಾಡಿಗಳನ್ನ ಭೇಟಿ ಮಾಡಿದ್ದು ಬಿಟ್ಟರೆ ಅವರನ್ನ ಪ್ರತ್ಯಕ್ಷವಾಗಿ ನೋಡಿಲ್ಲ.     ನಾವು ಚಿಕ್ಕವರಿದ್ದಾಗ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುವಾಗ ಆಗಿನ ಕಾಲದ ಖ್ಯಾತ ಚಲನಚಿತ್ರ ನಟ ಉದಯ ಕುಮಾರ್ ಅರಳಿ ಮರದ ಗ್ಯಾರೇಜ್ ಹತ್ತಿರ ಬಂದಿದ್ದಾರೆ ಅಂತ ಊರಿನ ಜನರೆಲ್ಲ ಗುಂಪು ಗುಂಪಾಗಿ ಓಡುತ್ತಿದ್ದರು, ನಾವು ಚಿಕ್ಕ ಮಕ್ಕಳೆಲ್ಲ ಅವರನ್ನ ಹಿಂಬಾಲಿಸಿದೆವು.       ಅಲ್ಲಿ ಒಂದು ಬಿಳಿ ಅಂಬಾಸಡರ್ ಕಾರು ನಿಂತಿದ್ದು ಅದರ ಅಡಿಯಲ್ಲಿ ಮಲಗಿ ಮೆಕ್ಯಾನಿಕ್ ದುರಸ್ತಿ ಮಾಡುತ್ತಿದ್ದರೆ ಎತ್ತರದ ಮಣ್ಣು ದಿಬ್ಬದ ಮೇಲೆ ನಮ್ಮ ನಟ ಉದಯ ಕುಮಾರ್ ಸಿಗರೇಟು ಸೇದಿ ಹೊಗೆ ಬಿಡುತ್ತಿದ್ದರು. ಯಾರೂ ಅವರ ಹತ್ತಿರ ಮಾತಾಡುವ ದೈಯ೯ ವಹಿಸಲಿಲ್ಲ ಆದರೆ ನೆರೆದ ಜನ ಮಾತಾಡಿಕೊಳ್ಳುತ್ತಿದ್ದ ಮಾತಿನ ಸಾರಾಂಶವೆಂದರೆ ವರದಳ್ಳಿಯಲ್ಲಿ ತಪಸ್ಸು ಮಾಡುತ್ತಿದ್ದ ಶ್ರೀಧರ ಸ್ವಾಮಿಗಳು ದೇಹತ್ಯಾಗ ಮಾಡಿದ್ದಾರೆ ಅದನ್ನ ಕೇಳಿ ಅವರ ಭಕ್ತ ಮತ್ತು ಶಿಷ್ಯರಾದ ಖ್ಯಾತ ಚಿತ್ರ ನಟ ಉದಯ ಕುಮಾರ್ ಬರುವಾಗ ಕಾರು ಹಾಳಾಗಿ ದುರಸ್ತಿಗಾಗಿ ನಿಂತಿದ್ದಾರೆ, ದುಃಖದಲ್ಲಿ ಇರೋದರಿಂದ ಆ ರೀತಿ ಸಿಗರೇಟು ಸೇದಿ ಬೂದಿ ಮಾಡುತ್ತಿದ್ದಾರೆ ಅವರ ಹತ್ತಿರ ಯಾರೂ ಮಾತಾಡ ಬೇಡಿ ಅಂತ ಸೀನಿಯರ್ ಗಳು ಹೇಳುತ್ತಿದ್ದರು, ಬಹುಶಃ ಆಗಿನ ಸಿನಿಮಾದಲ್ಲಿ ವಿಲನ