Skip to main content

ಬೆಂಕಿ ಚೆಂಡಿನ೦ತ ಪೂಯಾ೯ ನಾಯಕ್

ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ಪೂರ್ಯಾ ನಾಯಕರು 1995 ರಿಂದ 2000 ಅವದಿಯಲ್ಲಿ ನನ್ನ ಜೊತೆಗಾರರು ಆದರೆ ಅವದಿಗೂ ಮುನ್ನ ಅವರು ದೆಹಲಿಯಲ್ಲಿ ಇಹಲೋಕ ತ್ಯಜಿಸಿದರು, ಅವರು ದೆಹಲಿಗೆ ಹೋಗಿದ್ದು ಮತ್ತು ಅವರ ಸಾವಿನ ರಹಸ್ಯ ಇವತ್ತಿಗೂ ಗೊತ್ತಾಗಲಿಲ್ಲ.
   ಮ್ರತ ದೇಹ ದೆಹಲಿಯಿ೦ದ ತರಲು ಆಗಿನ ಮುಖ್ಯಮಂತ್ರಿ ಪಟೇಲರು ವಿಶೇಷ ಸಹಾಯ ಮಾಡಿದ್ದು ಮರೆಯುವಂತಿಲ್ಲ, ಅವತ್ತು ಅಂಜನಾಪುರದ ಅವರ ಮೂಲ ಮನೆಯಲ್ಲಿ ಅಂತಿಮ ದಶ೯ನಕ್ಕೆ 20 ಸಾವಿರಕ್ಕೂ ಅಧಿಕ ಜನ ಸೇರಿದ್ದು ನಾನೇ ಕಣ್ಣಾರೆ ಕಂಡಿದ್ದ ಸತ್ಯ.
   ಈಗಲೂ ಇವರ ಅಭಿಮಾನಿಗಳಲ್ಲಿ ಒಂದು ಅನುಮಾನ ಹಾಗೆ ಉಳಿದಿದೆ, ರಾಜಕೀಯವಾಗಿ ಅವರನ್ನ ಕೊಲೆ ಮಾಡಲಾಗಿದೆ ಅಂತ ಆದರೆ ಅದರ ಸತ್ಯಾಸತ್ಯತೆ ದೇವರಿಗೆ ಗೊತ್ತು.
   ಶಿಕಾರಿಪುರ ಕ್ಷೇತ್ರದಿಂದ ಶಾಸಕರಾಗಬೇಕೆಂಬ ಅವರ ಬಯಕೆ ಈಡೇರಲಿಲ್ಲ ಆದರೆ ಅವರ ಪತ್ನಿ ಶ್ರೀಮತಿ ಶಾರದಾ ಪೂಯಾ೯ನಾಯಕರು ಶಿವಮೊಗ್ಗ ಗ್ರಾಮಾಂತರದಿಂದ ಜೆ.ಡಿ.ಎಸ್.ಶಾಸಕರಾಗಿರುವುದು ಅವರ ಆತ್ಮಕ್ಕೆ ಖಂಡಿತಾ ನೆಮ್ಮದಿ ತಂದಿರ ಬಹುದು.
    ನೇರ, ದಿಟ್ಟ ಸ್ವಭಾವದ ನಾಯಕರು ಆ ಸಂದಭ೯ದಲ್ಲಿ ನಮಗೆಲ್ಲ ನಮ್ಮ ಹೋರಾಟದಲ್ಲಿ ಬೆಂಬಲಿಸುತ್ತಿದ್ದರು, ಯಾರನ್ನಾದರೂ ಎದುರಿಸಬಹುದು ಆದರೆ ನಮ್ಮ ನಮ್ಮ ತಾಲ್ಲೂಕಿನ ಆಡಳಿತರೂಡ ರಾಜಕಾರಣಿಗಳನ್ನ ಎದುರಿಸುವುದು ಕಷ್ಟ ಅಂತ ನನ್ನ ಮತ್ತು ಕಾಗೋಡರ ಸಂಘಷ೯ದಲ್ಲಿ ಎಚ್ಚರಿಸುತ್ತಿದ್ದರು.
    ಶಾಲೆಗಳು, ಪೆಟ್ರೋಲ್ ಪಂಪ ,ಜಲ್ಲಿ ಕ್ರಷರ್ ಹೊಂದಿದ್ದ ಅವರು ಶಿವಮೊಗ್ಗದಲ್ಲಿ ಸ್ವಂತ ಮನೆ ಹೊಂದಿದ್ದರು ಅವರ ನಿಧನ ನಂತರ ಅವರ ಕುಟುಂಬ ಎಲ್ಲಾ ಕಷ್ಟಗಳನ್ನ ಎದುರಿಸಿ ಉತ್ತಮ ಸ್ಥಿತಿಯಲ್ಲಿರುವುದು ಪೂಯಾ೯ ನಾಯಕರ ಅಭಿಮಾನಿಗಳಿಗೆಲ್ಲ ಹೆಮ್ಮೆ.
   ಇವತ್ತು ವಿಜಯವಾಣಿ ದಿನಪತ್ರಿಕೆಯಲ್ಲಿ ಅವರ 18 ನೆ ವಷ೯ದ ಪುಣ್ಯತಿಥಿಯ ಜಾಹಿರಾತು ಹಳೇ ನೆನಪುಗಳನ್ನ ನೆನಪಿಸಿತು, ಶಿವಮೊಗ್ಗದ ಶ್ರOಗೇಶರ ಜನ ಹೋರಾಟ ದಿನಪತ್ರಿಕೆಯಲ್ಲಿ ಒಳಗುಟ್ಟು ಅಂತ ಕಾಲಮ್ನಲ್ಲಿ ಬರೆಯುವಾಗ ನಾಯಕರ ಬಗ್ಗೆ ಒಂದು ಲೇಖನ ಬರೆದಿದ್ದೆ "ಬೆಂಕಿ ಚೆಂಡಿನಂತ ಪೂಯ೯ ನಾಯಕರು" ಅಂತ ಹೆಡ್ಡಿO ಗ್ನಲ್ಲಿ ಅವರ ಪತ್ನಿ ಆಗ ಶಾಸಕಿ ಆಗಿರಲಿಲ್ಲ, ಪತ್ರಿಕಾ ಕಚೇರಿಯನ್ನ ಸಂಪಕಿ೯ಸಿ ನನ್ನ ಸೆಲ್ ಪೋನ್‌ಗೆ ಕರೆ ಮಾಡಿ ದನ್ಯವಾದ ಹೇಳಿದ್ದರು.
     ಆಗೆಲ್ಲ ನಾವು ಶಿವಮೊಗ್ಗ ಜಿಲ್ಲಾ ಪಂಚಾಯತ್ ಸದಸ್ಯರು ಜಿಲ್ಲಾ ಪಂಚಾಯತ್ ಕಚೇರಿಗೆ ಸಮೀಪದ ನಾಯಕರ ಮನೆಗೆ ಗುಂಪಾಗಿ ಹೋಗುತ್ತಿದ್ದೆವು ಆಗೆಲ್ಲ ಬಂದ ಅತಿಥಿಗಳಿಗೆ ಚಹಾ ಒಳಬಾಗಿಲಿ೦ದ ನೀಡುತ್ತಿದ್ದ ನಾಯಕರ ಶ್ರೀಮತಿ ಶಾರದಾ ಈಗ ರಾಜಕಾರಣದಲ್ಲಿ ಮುಂಚೂಣಿಗೆ ಅನಿವಾಯ೯ವಾಗಿ ಬರಬೇಕಾಯಿತು ಹಾಗೂ ಒಳ್ಳೆಯ ರಾಜಕಾರಣಿ ಎಂಬ ಹೆಸರು ಪಡೆದಿದ್ದು ನಮಗೆಲ್ಲ ಸಂತೋಷದ ವಿಷಯ.

Comments

  1. After preparing the medicine after boiling, a foam layer formed on the medicine after 2 days.Is that normal?

    ReplyDelete
  2. Nice articles and your information valuable and good articles thank for the sharing information vaccination drive for stray dogs

    ReplyDelete

Post a Comment

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...