ಬಿಳಿ ವಸ್ತ್ರದ ಶುಭ್ರ ಮನಸ್ಸಿನ ಸಮಾಜವಾದಿ ಪುಟ್ಟಯ್ಯ
ಇವರನ್ನು ಸನ್ಮಾನಕ್ಕೆ ಅದಾವ ರೀತಿ ಒಪ್ಪಿಸಿದರೋ ಭಗವಂತನೆ ಬಲ್ಲ.ದಕ್ಷಿಣ ಕನ್ನಡ ಜಿಲ್ಲೆಯ ಪೆರ್ಡೂರಿನಿಂದ ಶಿವಮೊಗ್ಗಕ್ಕೆ ಬಂದವರಿಗೆ ಸಮಾಜವಾದಿ ಚಳುವಳಿ ಕೈಬೀಸಿ ಕರೆಯಿತು. ಡಾ,ಲೋಹಿಯಾರವರ ಆಂಗ್ರೇಜಿ ಹಟಾವೋ ಚಳುವಳಿಯಲ್ಲ ಸಕ್ರಿಯರಾದರು. ಇದಕ್ಕೂ ಮೊದಲು ಮಲ್ಲಾಡಿ ಹಳ್ಳಿಯ ರಾಘವೇಂದ್ರ ಸ್ವಾಮೀಜಿಯವರಿಂದ ಪ್ರೇರೇಪಿತರಾಗಿ ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಎಂಬ ಹಳ್ಳಿಯಲ್ಲಿ ಶಾಲೆಯೊಂದನ್ನು ಆರಂಭಿಸಿದರು.ಅಲ್ಲೇ ಹಾಸ್ಟೆಲ್ ಆರಂಭಿಸಿ ಹಿಂದುಳಿದವರ ಮಕ್ಕಳು ಶಾಲೆಗೆ ಬರುವಂತೆ ಮಾಡಿದರು. ಶಿವಮೊಗ್ಗ ಸಿಟಿಯಲ್ಲಿ ಬೆಳಗ್ಗಿನ ನಾಲ್ಕು ಗಂಟೆಗೆ ಬೇರೆ ಬೇರೆ ಊರುಗಳಿಗೆ ಉದಯವಾಣಿ ಪತ್ರಿಕೆಗಳನ್ನು ವಿಂಗಡಿಸುತ್ತಾ ರಾಜಕಾರಣವನ್ನು ಶುದ್ದಗೊಳಿಸುವ ಬಗ್ಗೆ ಯೋಚಿಸತೊಡಗಿದರು.ಇವರು ತೆರೆದಿದ್ದ ಪ್ರಕೃತಿ ಪ್ರಿಂಟರ್ಸ್ ಹಲವು ಚಳುವಳಿಗಳಿಗೆ ಪ್ರೇರಕವಾಯಿತು. ಸಮಾಜವಾದಿ ಚಳುವಳಿಗಾಗಾರರಂತೂ ಇವರ ಪ್ರಿಂಟಿಂಗ್ ಪ್ರೆಸ್ ಗೆ ಬಹು ಹತ್ತಿರ. ಜನತಾದಳ ಅಧಿಕಾರಕ್ಕೆ ಬಂದಾಗ ಬಹಳ ಮಂದಿ ಸಮಾಜವಾದಿಗಳು ಅಧಿಕಾರದ ಸವಿಯುಂಡರು.ಆದರೆ ಪುಟ್ಟಯ್ಯ ಅದರ ಹತ್ತಿರವೂ ಸುಳಿಯಲಿಲ್ಲ.ಜೆ.ಹೆಚ್ ಪಟೇಲ್ ಮುಖ್ಯಮಂತ್ರಿಯಾಗಿದ್ದಾಗ ಇವರಿಗೆ ಅಧಿಕಾರದ ರುಚಿಯಡುಗೆ ತಿನ್ನುವ ಬಹಳಷ್ಟು ಅವಕಾಶಗಳಿದ್ದವು. ಎಲ್ಲವನ್ನು ನಿರಾಕರಿಸಿದರು. ಅದಕ್ಕಿಂತ ಮುಖ್ಯುವಾಗಿ ಅದರ ಹತ್ತಿರವೂ ಹೋಗಲಿಲ್ಲ. ಭಾರತ ರತ್ನದಂತಹ ಅತ್ಯುಚ್ಚವಾದ ಪ್ರಶಸ್ತಿಗಳನ್ನು ಸಚಿನ್ ತೆಂಡೂಲ್ಕರ್ ತರದ ಆಟಗಾರರಿಗೆ ಕೊಟ್ಟ ಬಗ್ಗೆ ಇವರಿಗೆ ಖೇದವಿದೆ. ತನ್ನ ದೇಹದಲ್ಲಿ ಉಸಿರನ್ನು ಮಾತ್ರ ಇಟ್ಟಕೊಂಡಿರುವ ಜಾಜ್F ಫರ್ನಾಂಡೀಸ್ ರಂತಹ ಸರಳತೆ ಮತ್ತು ಪ್ರಾಮಾಣಿಕತೆ ಮೈವೆತ್ತಿಕೊಂಡಿದ್ದ , ಮತ್ತು ದೇಶಕ್ಕಾಗಿ ಜೀವ ತೇದಂತವರಿಗೆ ಭಾರತ ರತ್ನ ಹುಡುಕಿಕೊಂಡು ಬಾರದಿರುವ ಬಗ್ಗೆ ಇವರಿಗೆ ಬೇಸರವಿದೆ.ನಿನ್ನೆ ದಿನ ಇವರನ್ನು ಸನ್ಮಾನಿಸಲು ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಸ್ವರಾಜ್ ಅಭಿಯಾನ ಸಂಘಟನೆ ಇವರನ್ನು ಒತ್ತಾ ಪೂರ್ವಕವಾಗಿ ಸನ್ಮಾನಿಸಿತು.ಇಡೀ ಶಿವಮೊಗ್ಗದ ಹತ್ತಾರು ಪರಿಶುದ್ದ ಮನಸ್ಸುಗಳಿಗೆ ಖುಷಿಯಾಯಿತು. ಸ್ವರಾಜ್ ಇಂಡಿಯಾ ಕಾರ್ಯಕರ್ತರು ಇವರನ್ನು ಸನ್ಮಾನಕ್ಕೆ ಒಪ್ಪಿಸಿದ್ದಾದರೂ ಹೇಗೆ ಎಂಬ ಪ್ರಶ್ನೆ ಮತ್ತೊಮ್ಮೆ ಹಾಕುತ್ತೇನೆ.ಸನ್ಮಾನಿಸಿದ ದೇವನೂರು ಮಹದೇವರವರಿಗೆ ವಂದನೆಗಳು
ಲೇಖನ :ನೆಂಪೆ ದೇವರಾಜ್ ತೀಥ೯ಹಳ್ಳಿ
#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ. ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ. ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ. #ದೀರ್ಘವಾದರೂ_ಪೂರ್ಣ_ಲೇಖನ_ಓದಿ #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ
Comments
Post a Comment