ಬಿಳಿ ವಸ್ತ್ರದ ಶುಭ್ರ ಮನಸ್ಸಿನ ಸಮಾಜವಾದಿ ಪುಟ್ಟಯ್ಯ
ಇವರನ್ನು ಸನ್ಮಾನಕ್ಕೆ ಅದಾವ ರೀತಿ ಒಪ್ಪಿಸಿದರೋ ಭಗವಂತನೆ ಬಲ್ಲ.ದಕ್ಷಿಣ ಕನ್ನಡ ಜಿಲ್ಲೆಯ ಪೆರ್ಡೂರಿನಿಂದ ಶಿವಮೊಗ್ಗಕ್ಕೆ ಬಂದವರಿಗೆ ಸಮಾಜವಾದಿ ಚಳುವಳಿ ಕೈಬೀಸಿ ಕರೆಯಿತು. ಡಾ,ಲೋಹಿಯಾರವರ ಆಂಗ್ರೇಜಿ ಹಟಾವೋ ಚಳುವಳಿಯಲ್ಲ ಸಕ್ರಿಯರಾದರು. ಇದಕ್ಕೂ ಮೊದಲು ಮಲ್ಲಾಡಿ ಹಳ್ಳಿಯ ರಾಘವೇಂದ್ರ ಸ್ವಾಮೀಜಿಯವರಿಂದ ಪ್ರೇರೇಪಿತರಾಗಿ ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಎಂಬ ಹಳ್ಳಿಯಲ್ಲಿ ಶಾಲೆಯೊಂದನ್ನು ಆರಂಭಿಸಿದರು.ಅಲ್ಲೇ ಹಾಸ್ಟೆಲ್ ಆರಂಭಿಸಿ ಹಿಂದುಳಿದವರ ಮಕ್ಕಳು ಶಾಲೆಗೆ ಬರುವಂತೆ ಮಾಡಿದರು. ಶಿವಮೊಗ್ಗ ಸಿಟಿಯಲ್ಲಿ ಬೆಳಗ್ಗಿನ ನಾಲ್ಕು ಗಂಟೆಗೆ ಬೇರೆ ಬೇರೆ ಊರುಗಳಿಗೆ ಉದಯವಾಣಿ ಪತ್ರಿಕೆಗಳನ್ನು ವಿಂಗಡಿಸುತ್ತಾ ರಾಜಕಾರಣವನ್ನು ಶುದ್ದಗೊಳಿಸುವ ಬಗ್ಗೆ ಯೋಚಿಸತೊಡಗಿದರು.ಇವರು ತೆರೆದಿದ್ದ ಪ್ರಕೃತಿ ಪ್ರಿಂಟರ್ಸ್ ಹಲವು ಚಳುವಳಿಗಳಿಗೆ ಪ್ರೇರಕವಾಯಿತು. ಸಮಾಜವಾದಿ ಚಳುವಳಿಗಾಗಾರರಂತೂ ಇವರ ಪ್ರಿಂಟಿಂಗ್ ಪ್ರೆಸ್ ಗೆ ಬಹು ಹತ್ತಿರ. ಜನತಾದಳ ಅಧಿಕಾರಕ್ಕೆ ಬಂದಾಗ ಬಹಳ ಮಂದಿ ಸಮಾಜವಾದಿಗಳು ಅಧಿಕಾರದ ಸವಿಯುಂಡರು.ಆದರೆ ಪುಟ್ಟಯ್ಯ ಅದರ ಹತ್ತಿರವೂ ಸುಳಿಯಲಿಲ್ಲ.ಜೆ.ಹೆಚ್ ಪಟೇಲ್ ಮುಖ್ಯಮಂತ್ರಿಯಾಗಿದ್ದಾಗ ಇವರಿಗೆ ಅಧಿಕಾರದ ರುಚಿಯಡುಗೆ ತಿನ್ನುವ ಬಹಳಷ್ಟು ಅವಕಾಶಗಳಿದ್ದವು. ಎಲ್ಲವನ್ನು ನಿರಾಕರಿಸಿದರು. ಅದಕ್ಕಿಂತ ಮುಖ್ಯುವಾಗಿ ಅದರ ಹತ್ತಿರವೂ ಹೋಗಲಿಲ್ಲ. ಭಾರತ ರತ್ನದಂತಹ ಅತ್ಯುಚ್ಚವಾದ ಪ್ರಶಸ್ತಿಗಳನ್ನು ಸಚಿನ್ ತೆಂಡೂಲ್ಕರ್ ತರದ ಆಟಗಾರರಿಗೆ ಕೊಟ್ಟ ಬಗ್ಗೆ ಇವರಿಗೆ ಖೇದವಿದೆ. ತನ್ನ ದೇಹದಲ್ಲಿ ಉಸಿರನ್ನು ಮಾತ್ರ ಇಟ್ಟಕೊಂಡಿರುವ ಜಾಜ್F ಫರ್ನಾಂಡೀಸ್ ರಂತಹ ಸರಳತೆ ಮತ್ತು ಪ್ರಾಮಾಣಿಕತೆ ಮೈವೆತ್ತಿಕೊಂಡಿದ್ದ , ಮತ್ತು ದೇಶಕ್ಕಾಗಿ ಜೀವ ತೇದಂತವರಿಗೆ ಭಾರತ ರತ್ನ ಹುಡುಕಿಕೊಂಡು ಬಾರದಿರುವ ಬಗ್ಗೆ ಇವರಿಗೆ ಬೇಸರವಿದೆ.ನಿನ್ನೆ ದಿನ ಇವರನ್ನು ಸನ್ಮಾನಿಸಲು ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಸ್ವರಾಜ್ ಅಭಿಯಾನ ಸಂಘಟನೆ ಇವರನ್ನು ಒತ್ತಾ ಪೂರ್ವಕವಾಗಿ ಸನ್ಮಾನಿಸಿತು.ಇಡೀ ಶಿವಮೊಗ್ಗದ ಹತ್ತಾರು ಪರಿಶುದ್ದ ಮನಸ್ಸುಗಳಿಗೆ ಖುಷಿಯಾಯಿತು. ಸ್ವರಾಜ್ ಇಂಡಿಯಾ ಕಾರ್ಯಕರ್ತರು ಇವರನ್ನು ಸನ್ಮಾನಕ್ಕೆ ಒಪ್ಪಿಸಿದ್ದಾದರೂ ಹೇಗೆ ಎಂಬ ಪ್ರಶ್ನೆ ಮತ್ತೊಮ್ಮೆ ಹಾಕುತ್ತೇನೆ.ಸನ್ಮಾನಿಸಿದ ದೇವನೂರು ಮಹದೇವರವರಿಗೆ ವಂದನೆಗಳು
ಲೇಖನ :ನೆಂಪೆ ದೇವರಾಜ್ ತೀಥ೯ಹಳ್ಳಿ
ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ) ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ. ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ. ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ. ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ. ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...
Comments
Post a Comment