# ಪರಿಸರ ಉಳಿಸುವುದರಲ್ಲೂ ಎಡ ಮತ್ತು ಬಲ ಸರಿ ಅಲ್ಲ#
ಕಳೆದ ವಷ೯ ದುಬೈ ಉದ್ಯಮಿ ಬಿ.ಆರ್. ಶೆಟ್ಟಿ ಜೋಗ ಅಭಿವೃದ್ಧಿ ಯೋಜನೆಯಲ್ಲಿ ಜೋಗ ಜಲಪಾತ ಸವ೯ರುತುವಿನ ಜಲಪಾತಕ್ಕಾಗಿ ನೀರು ಮರು ಪೂರಣ ಯೋಜನೆಗೆ ಸಾಗರದ ನಾ.ಡಿಸೋಜರಾದಿಯಾಗಿ ಅನೇಕರು ವಿರೋದ ಮಾಡಿದರು ಆದರೆ ಅನಂತ ಹೆಗಡೆ ಅಶೀಸರ ಈ ಬಗ್ಗೆ ವಿರೋದಿಸಲಿಲ್ಲ.
ಈಗ ಶರಾವತಿ ಕಣಿವೆಯಲ್ಲಿ ಭೂಗಭ೯ ವಿದ್ಯುತ್ ಯೋಜನೆ ಒಂದು (ವರಾಹಿ ಯೋಜನೆಯಂತೆ) ಪ್ರಾರಂಭವಾಗಲಿದ್ದು ಇದಕ್ಕೆ ಅನಂತ ಹೆಗಡೆ ಅಶೀಸರರ ನೇತೃತ್ವದ ಸಂಘಟನೆ ವಿರೋದಿಸುತ್ತಿದೆ ಆದರೆ ನಾ.ಡಿಸೋಜರ ಒಡನಾಡಿಗಳು ವಿರೋದಿಸುತ್ತಿಲ್ಲ.
ಇದೇ ರೀತಿ ಅರಣ್ಯ ಭೂಮಿ ಸಕ್ರಮದಲ್ಲಿ ಕೂಡ ಎರೆಡು ಗುಂಪಾಗಿದ್ದು ಒಂದು ಪರ ಇನ್ನೊಂದು ವಿರೋದ.
ಒಂದೊಂದು ರಾಜಕೀಯ ಪಕ್ಷಗಳ ಪರಿಸರ ಹೋರಾಟದ ದಿಕ್ಕು ಒಂದೊಂದು ಕಡೆ ಮುಖ ಮಾಡಿದೆ ಇದರಿ೦ದ ರಾಜಕೀಯ ಪಕ್ಷಕ್ಕೆ ಲಾಭವಾಗಬಹುದೇ ಹೊರತು ಪರಿಸರಕ್ಕಲ್ಲ.
ಪಶ್ಚಿಮ ಘಟ್ಟದ ಪರಿಸರ ಉಳಿವಿಗೆ ಎಲ್ಲರ ಕಾಳಜಿ ಸ್ವಾಗತೀಯ ಆದರೆ ಪಕ್ಷ, ದಮ೯ಗಳ ಆಧಾರದಲ್ಲಿ ಪರಿಸರ ಹೋರಾಟ ವಿಭಜನೆಯಾಗಿ ಸಾಗುತ್ತಿರುವುದು ಬೇಸರದ ಸಂಗತಿ.
ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ) ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ. ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ. ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ. ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ. ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...
ಸ್ಪಷ್ಟನೆ:
ReplyDeleteಇದು ತಪ್ಪು ಅರುಣ್ ಪ್ರಸಾದ್ ಜೀ. ನಾ.ಡಿಯವರ ಗಮನಕ್ಕೆ ತರಲಾಗಿದ್ದು, ಅವರೂ ಕೂಡಾ ಇದರ ವಿರೋಧವಿದ್ದಾರೆ. ಪಶ್ಚಿಮಘಟ್ಟದಲ್ಲಿ ಯಾವುದೇ ಯೋಜನೆಗಳೇ ಬೇಡ ಎಂದು ಹೇಳಿದ್ದಾರೆ. ಈ ಯೋಜನೆಯ ವಿರುದ್ಧವಾಗಿ ಮೊದಲು ಧ್ವನಿ ಎತ್ತಿದ್ದೇ ನಾನು ಮತ್ತು ಸಂಗಡಿಗರು. ಇದರ ವಿರುದ್ಧ ಮಾತನಾಡಿದ ವರದಿ "ದ ಹಿಂದೂ" ಪತ್ರಿಕೆಯ ಎಲ್ಲಾ ಆವೃತ್ತಿಯಲ್ಲೂ ಬಂದಿತ್ತು. ಇದಕ್ಕೆ ಕೆ.ಪಿ.ಸಿ. ಎಂ.ಡಿ.ಯವರು ಜನರ ವಿರೋಧ ಇದ್ದಲ್ಲಿ ಯೋಜನೆಯನ್ನು ಜಾರಿಗೊಳಿಸುವುದಿಲ್ಲ ಎಂದು ಹೇಳಿದ್ದರು. ಈ ಹೆಗಡೆಯವರು ಮತ್ತೆ ಸುದ್ಧಿಯೆತ್ತಿದ್ದಾರೆ ಅಷ್ಟೆ.