Skip to main content

# ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯತಗಳ ಸುದಾರಿಸದ ಸ್ವಚ್ಚತೆ#

#ಗ್ರಾಮ ಪಂಚಾಯತಗಳು ಗ್ರಾಮ ಸ್ವಚ್ಚತೆಗೆ ಪ್ರಾಮುಖ್ಯತೆ ನೀಡದಿರಲು ಕಾರಣಗಳು.#
  ಹಿಂದೆ ವಿಲೇಜ್ ಪಂಚಾಯತಗಳು ಅಸ್ತಿತ್ವದಲ್ಲಿ ಇದ್ದಾಗ ಹಳ್ಳಿಯ ಮುಖ್ಯ ಭಾಗಗಳನ್ನ ನಿತ್ಯ ಗುಡಿಸಿ ಕಸ ವಿಲೇವಾರಿಗೆ ಜನರನ್ನ ನೇಮಿಸಲು ಅವರಿಗೆ ಸಂಬಳ ನೀಡಲು ಅವಕಾಶ ಇತ್ತು, ಅವರುಗಳು ಹಳ್ಳಿಯಲ್ಲಿ ಸತ್ತ ನಾಯಿ, ದನಗಳನ್ನು ತೆಗೆದು ಹಳ್ಳಿಯ ನೈಮ೯ಲ್ಯ ಕಾಪಾಡುತ್ತಿದ್ದರು ಆದರೆ ಪಂಚಾಯತ್ ರಾಜ್ ಕಾಯ್ದೆ ಬಂದು ಗ್ರಾಮ ಪಂಚಾಯತ್ ಅಸ್ತಿತ್ವಕ್ಕೆ ಬಂದ ಮೇಲೆ ಹಳ್ಳಿಯ ಸ್ವಚ್ಚತೆಗೆ ಯಾರನ್ನೂ ನೇಮಿಸಲು ಅಥವ ಈ ಬಗ್ಗೆ ಹಣ ಖಚು೯ ಮಾಡಲು ಅವಕಾಶವಿಲ್ಲ.
   ಆದರೆ ಕಂದಾಯ ವಶೀಲಿಗೆ, ರೋಜಗಾರ ಯೋಜನೆ ಅನುಷ್ಟಾನಕ್ಕೆ, ನೀರು ಸರಬರಾಜು ಮಾಡಲು ನೌಕರರ ನೇಮಕಾತಿಗೆ ಅವಕಾಶವಿದೆ ಇದರಿಂದ ಯಾವುದೇ ಹಳ್ಳಿಗೆ ಹೋಗಿ ರಸ್ತೆ ಬದಿಯಲ್ಲಿ ಸತ್ತ ನಾಯಿ, ದನ ಅಲ್ಲೆ ಕೊಳೆತು ಕರಗಿ ಮಣ್ಣಾಗಿ ಹೋಗುವ ದೃಷ್ಯ ಕಾಣಬಹುದು.
   ಇದರ ಮಧ್ಯ ಗ್ರಾಮ ಪಂಚಾಯತಗಳಿಗೆ ಸ್ವಚ್ಚತೆಗಾಗಿ ಪ್ರಶಸ್ತಿ ನೀಡುವ ಕೇಂದ್ರ ಸಕಾ೯ರ, ರಾಜ್ಯ ಸಕಾ೯ರ ಮತ್ತು ಜಿಲ್ಲಾ ಪಂಚಾಯತಗಳು ಯಾವ ಮಾನದಂಡದಲ್ಲಿ ಪ್ರಶಸ್ತಿ ನೀಡುತ್ತದೆ ಎಂಬುದು ಉತ್ತರವಿಲ್ಲದ ಪ್ರಶ್ನೆ.
   ಇತ್ತೀಚಿಗೆ ಪಟ್ಟಣ ಪ್ರದೇಶದಲ್ಲಿ ಪ್ಲಾಸ್ಟಿಕ್ ಬಳಕೆ ರದ್ದಾಗಿದೆ ಆದರೆ ಅಲ್ಲಿ ಮಾರಾಟ ಮಾಡಲು ಅನುಮತಿ ರದ್ದಾಗಿರುವ ಪ್ಲಾಸ್ಟಿಕಗಳು ಹಳ್ಳಿಗಳ ಅಂಗಡಿಗಳಲ್ಲಿ ಸ್ವಚ್ಚOದವಾಗಿ ಲಭ್ಯವಿದೆ.
  ಸಕಾ೯ರ ನಿಷೇದಿಸಿದ ಗುಟ್ಕ, ತಂಬಾಕು, ಗಾಂಜಾ ಕಳಪೆ ಮದ್ಯಗಳು ನಮ್ಮ ಹಳ್ಳಿಗಳಲ್ಲಿ ರಾಜಾರೋಷವಾಗಿ ಸಿಗುತ್ತದೆ.
  ಪಂಚಾಯತಿಗಳು ಆದಾಯಕ್ಕಾಗಿ ಯಾವುದೇ ಮಾನದಂಡ ಅಳವಡಿಸದೆ ಕೋಳಿ, ಕುರಿಮಾಂಸ ಮತ್ತು ಮೀನಿನ ಮಾರುಕಟ್ಟೆಗೆ ಅನುಮತಿ ನೀಡುತ್ತಿದೆ ಅಲ್ಲಿ ಸಾವ೯ಜನಿಕರ ಆರೋಗ್ಯದ ಯಾವುದೇ ಭರವಸೆ ಇರುವುದಿಲ್ಲ ತೀರಾ ಕೊಳಕಾಗಿ ಮಾಂಸಗಳನ್ನ ರಸ್ತೆಗೆ ಕಾಣುವಂತೆ ನೇತಾಡಿಸಿರುತ್ತಾರೆ ರಸ್ತೆಯ ದೂಳು, ನೊಣಗಳು ಇದಕ್ಕೆ ಹತ್ತಿರುತ್ತದೆ ಅಷ್ಟೆ ಅಲ್ಲ ಈ ಅಂಗಡಿಗಳು ಮಾಂಸದ ತ್ಯಾಜ್ಯ, ಕೋಳಿ ಪುಕ್ಕಗಳನ್ನ ಸರಿಯಾದ ಕ್ರಮದಲ್ಲಿ ವಿಲೇವಾರಿ ಮಾಡದೆ ಹಳ್ಳಿಯ ಹೆದ್ದಾರಿಗಳ ಪಕ್ಕದಲ್ಲಿ ಹಾಕುತ್ತಾರೆ ಇದರಿಂದ ಬೀದಿ ನಾಯಿ ಕಾಟ ಮತ್ತು ನೊಣಗಳ ಕಾರಾಸ್ತಾನವಾಗಿದೆ.
ಇದನ್ನೆಲ್ಲ ಯಾರಿಗೆ ದೂರು ನೀಡ ಬೇಕು? ಸ್ಥಳೀಯ ಗ್ರಾಮ ಪಂಚಾಯತ ಸದಸ್ಯರಿಗೆ ಹೇಳಿದರೆ PDO ಗಳಿಗೆ ಹೇಳಿ ಅನ್ನು ತ್ತಾರೆ ಆದರೆ ಪಂಚಾಯತ ಕೇಂದ್ರ ಸ್ಥಾನದಲ್ಲಿ ಯಾವತ್ತೂ ವಾಸ ಮಾಡದ, ತಾಲ್ಲೂಕ ಕೇಂದ್ರದಲ್ಲಿ ಮನೆ ಮಾಡಿ ವಾಸ ಮಾಡುವ ಇವರುಗಳು ಹಳ್ಳಿಗಳ ಅಭಿವೃದ್ಧಿಗೆ ಆಷ್ಟು ಆಸಕ್ತಿವಹಿಸುವುದಿಲ್ಲ ಅವರಿಗೆ ಇರುವ ಕೆಲಸವೇ ಮಾಡಲಾಗುಗುವುದಿಲ್ಲ ಆದರೆ ಸಕಾ೯ರ ಇನ್ನೂ ಹೆಚ್ಚುವರಿ ಇಲಾಖಾ ಕೆಲಸ ಇವರಿಗೆ ಹಂಚುತ್ತಿದೆ.
  ಕೇಂದ್ರ ಸಕಾ೯ರದ ಆರೋಗ್ಯ ಸುರಕ್ಷಯೋಜನೆ (Health Safety Licence) ಜಾರಿ ಇದೆ ಅವರಾರು ಅಂತಹ ಸುರಕ್ಷೆ ವಹಿಸಿದ ಉದಾಹರಣೆ ಇಲ್ಲ.
  ಹಳ್ಳಿಯಲ್ಲಿ ಪರಿಸರ ಮಾಲಿನ್ಯ ಮಾಡಬೇಡಿ, ಎಲ್ಲೆಂದರಲ್ಲಿ ಕಸ ಹಾಕ ಬೇಡಿ ಅಂತ ಹೇಳಲು ಭಯಪಡುವ ಕಾಲ ಬಂದಿದೆ ಸಂಬಂದಪಟ್ಟವರೇ ಕೇಳಲ್ಲ ನೀನ್ಯಾರು ದೊಣ್ಣೆ ನಾಯಕ ಅಂತ ಮರುಪ್ರಶ್ನೆ ಬರುತ್ತೆ.
  ಒಂದಕೊಂದು ಸಂಬಂದವಿಲ್ಲದ ಇಲಾಖೆಗಳು, ನಿಯಂತ್ರಣ ಮಾಡಲು ಪ್ರಯತ್ನ ಮಾಡದ ಅಧಿಕಾರಿಗಳು, ಹಳ್ಳಿಗಳ ಅಭಿವೃದ್ಧಿ ಕಾಳಜಿ ಇಲ್ಲದ ಆಯ್ಕೆ ಆಗಿರುವ ಜನಪ್ರತಿನಿಧಿಗಳು ಇವರಿಂದ ಹಳ್ಳಿಗಳು ಬೇರೆಯ ದಾರಿಯಲ್ಲಿ ಸಾಗುತ್ತಿದೆ.
ಆಡಳಿತ ವಿಕೇ೦ದ್ರಿಕರಣದಿಂದ ಅಧಿಕಾರ ಮತ್ತು ಅಭಿವೃದ್ದಿ ಹಣ ಹಳ್ಳಿ ತಲುಪಿ ಹಳ್ಳಿಗಳ ಅಭಿವೃದ್ದಿ ಆಗುತ್ತೆ ಎಂಬ ಜ್ಯೋತಿ ಬಸು, ರಾಮಕೃಷ್ಣ ಹೆಗ್ಗಡೆಯವರ ಕನಸು, ಪಂಚಾಯತ ರಾಜ್ ಕಾಯ್ದೆ ಜಾರಿ ತಂದು ನನಸು ಮಾಡಿದ ಪ್ರದಾನಿ ರಾಜೀವ್ ಗಾಂಧಿ ಯೋಜನೆ ಹಳ್ಳ ಹಿಡಿದಿದೆ, ಇಡೀ ದೇಶದ ಹಳ್ಳಿಗಳ ಅಭಿವೃದ್ಧಿ ಕನಸಾಗಿಯೇ ಉಳಿಯುವ ಭ್ರಷ್ಟಾಚಾರದ ವಿಕೇ೦ದ್ರಿಕರಣ ಎನ್ನುವಷ್ಟು ಅಪಹಾಸ್ಯವಾಗಿದೆ.
  ಎಲ್ಲೋ ಒಮ್ಮೆ ಮೈದೊಳಲು ಗ್ರಾಮ ಪಂಚಾಯತಿಯ ರೀತಿ ಅನಾಹುತವಾದಾಗ ಸುದ್ದಿ ಆಗಿ ಮರೆತು ಬಿಡುತ್ತೇವೆ ಆದರೆ ಹಳ್ಳಿಗಳ ನೈಮ೯ಲ್ಯ ಯಾರ ಜವಾಬ್ದಾರಿ ?.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...