Skip to main content

# ಮದ್ದು ಹಾಕೋ ಮನೇಲಿ ಉಣಬೇಡ ಕುಡಿಬೇಡ#

# ಮಲೆನಾಡಿನಲ್ಲಿ ಹೊಟ್ಟೆಗೆ ಮದ್ದು ಹಾಕುವರು ಇದ್ದಾರಾ?#
  ಗೋಸುಂಬೆ ಸಾಯಿಸಿ ಅದರ ಬಾಲಕ್ಕೆ ಹಗ್ಗ ಕಟ್ಟಿ ನೇತಾಡಿಸಿಟ್ಟರೆ ಅದು ಕೊಳೆತು ಅದರ ಬಾಯಿ೦ದ ತೊಟಕುವ ರಸಗಳು ಕೆಳಗೆ ಎಲೆಯಲ್ಲಿ ಮುಷ್ಟಿಯಷ್ಟು ಅಕ್ಕಿ ಹರಡಿಟ್ಟು ಅದರ ಮೇಲೆ ಬೀಳುವಂತೆ ಮಾಡಬೇಕು ಪೂಣ೯ ಪ್ರಮಾಣದ ರಸ ಸ್ರವಿಸಿದ ನಂತರ ಈ ಅಕ್ಕಿ ಒಣಗಿಸಿ ನಂತರ ಹಿಟ್ಟು ಮಾಡಿ ಸಂಗ್ರಹಿಸಿ ಇಟ್ಟುಕೊಳ್ಳಬೇಕು, ಯಾರ ಮೇಲಾದರು ಈ ಮದ್ದು ಪ್ರಯೋಗಿಸಬೇಕಾದರೆ ಒಂದು ಹತ್ತಿಯ ದೀಪದ ಬತ್ತಿಯಲ್ಲಿ ಸಂಗ್ರಹಿಸಿದ ಹಿಟ್ಟಲ್ಲಿ ಬತ್ತಿ ಅದ್ದಿ ಅದನ್ನ ಕಾಪಿ, ಟಿಯಲ್ಲಿ ಅಥವ ಊಟ, ಉಪಹಾರದಲ್ಲಿ ಅದ್ದಿದರೆ ಆಯಿತು ಅದನ್ನ ತಿಂದವರು ಕ್ರಮೇಣ ಜೀಣ೯ ಶಕ್ತಿ ಕಳೆದು ಕೊಳ್ಳುತ್ತಾರೆ, ಊಟ ಸೇರುವುದಿಲ್ಲ ದೇಹ ಕೃಷವಾಗುತ್ತೆ, ವೈದ್ಯರ ಹತ್ತಿರ ಹೋದರೆ ಏನೂ ಕಾಯಿಲೆ ಇಲ್ಲ ಅಂತಾರೆ ದಿನದಿಂದ ದಿನಕ್ಕೆ ಆರೋಗ್ಯ ಬಿಗಡಾಯಿಸಿ ಸಾವು ಬರುತ್ತೆ ಇದೊಂದು ಥರ ಸ್ಲೋ ಪಾಯಿಸನ್ ಇದ್ದಂತೆ ಅಂತ ಅವರು ವಿವರಿಸುತ್ತಿದ್ದರು ಹಾಗಾದರೆ ಇದಕ್ಕೆ ಪರಿಹಾರ ಅಂದೆ? .
  ಅವರ ಪ್ರಕಾರ ಹಳ್ಳಿಗಳಲ್ಲಿ ಇದನ್ನ ಪರಿಹರಿಸುವ ಕೆಲ ಪಾರಂಪರಿಕ ಮನೆ ವೈದ್ಯರಿದ್ದಾರೆ ಅವರು ಕಾಯಿ ಅಥವ ಹಣ ಪಡೆದು ಔಷಧ ನೀಡುತ್ತಾರೆ ಅಲ್ಲೇ ಸ್ವಲ್ಪ ಹೊತ್ತಲ್ಲಿ ವಾಂತಿ ಆಗುತ್ತೆ ಯಾವುದರಲ್ಲಿ ಮದ್ದು ಹಾಕಿದ್ದಾರೆ ಅದು ಹೊರಬೀಳುತ್ತೆ ಇದೇ ರೀತಿ ಇನ್ನೊಂದು ರೀತಿ ಮದ್ದು ತೆಗೆಯುವ ಸಂಪ್ರದಾಯವಿದೆ ಒಂದು ಪಾತ್ರೆಯಲ್ಲಿ ನೀರು ಜಾಷದ ಹಾಕಿ ಕೈ ತೊಳೆಸುತ್ತಾರೆ ಆಗ ಪಾತ್ರೆಯಲ್ಲಿ ಯಾವುದರಲ್ಲಿ ಮದ್ದು ಹಾಕಿದ್ದಾರೆ ಆ ಆಕೃತಿ ಬರುತ್ತೆ ಅವತ್ತಿಂದ ಮದ್ದಿನ ಬಾದೆ ಮುಕ್ತಿ ಆಗಿ ರೋಗಿಯ ಜೀಣ೯ ಶಕ್ತಿ ಸರಿ ಆಗಿ ಮೊದಲಿನ ಸ್ಥಿತಿಗೆ ಬರುತ್ತಾರೆ ಅಂದರು.
  ಇದು ನಿಜಾನಾ? ಆದರೆ ಹಳ್ಳಿಗಳಲ್ಲಿ ಈಗಲೂ ಇದನ್ನ ನಂಬುವವರಿದ್ದಾರೆ, ಈ ರೀತಿ ಆದವರು ಅವರಿಗಾಗದವರಾರು ಇದ್ದಾರೋ ಅವರನ್ನ ಅನುಮಾನದಿಂದ ನೋಡುತ್ತಾರೆ.
   ಮದ್ದು ದೊಸೆ, ಹೋಳಿಗೆ ಅಥವ ಇಡ್ಲಿ ರೂಪದಲ್ಲಿ ಹಾಕಿದ್ದು ಅಂತಾದರೆ ಈ ಹಿಂದೆ ಯಾರ ಮನೆಯಲ್ಲಿ ತಿಂದಿದ್ದರೋ ಅವರೆ ಅಪರಾದಿ ಆಗುತ್ತಾರೆ.
  ಇತ್ತೀಚಿಗೆ ಬ್ರಾಹಮಣರ ಬಾಣಂತಿಗೆ ಈ ಸಮಸ್ಯೆ ಆಗಿತ್ತು, ಮದ್ದು ತೆಗೆದವ ದೊಸೆಯಲ್ಲಿ ಮದ್ದು ಹಾಕಿದ್ದು ಅಂದಾಗ ಬಸಿರಿ ಹೆಂಗಸು ಒಮ್ಮೆ ತನ್ನ ಸಂಬಂದಿ ಹತ್ತಿರ ದೊಸೆ ತಿನ್ನುವ ಆಸೆ ಅಂದಾಗ ಅವರು ಮನೆಯಿ೦ದ ಪ್ರೀತಿಯಿ೦ದ ದೊಸೆ ಮಾಡಿ ಒಯ್ದದ್ದರಿಂದ ಅವರೇ ಅಪರಾದಿ ಆಗಿ ಬಿಟ್ಟರು.
  ಇದೆಲ್ಲ ಮೌಡ್ಯನಾ? ಹಾಗಾದರೆ ವಿದ್ಯಾವಂತರು, ಮೇಲ್ಜಾತಿ ಜನರಲ್ಲಿ ಈ ನಂಬಿಕೆ ಯಾಕೆ?ಗೊತ್ತಿಲ್ಲ.
  ಈ ರೀತಿ ಮದ್ದು ಹಾಕುವ ಕಳಂಕ ಹೊತ್ತ ಮನೆಗಳಲ್ಲಿ ಆಹಾರ ಸೇವಿಸಲು ಹೆದರುತ್ತಾರೆ ಹೆಚ್ಚಾಗಿ ಇಂತಹ ಕಳಂಕದ ಕುಟುಂಬಗಳು ಬ್ರಾಹಮಣ, ಲಿಂಗಾಯಿತರಲ್ಲಿ ಇದೆ.
  ನಮ್ಮ ಊರಲ್ಲಿ ಇತ್ತಿಚಿಗೆ ಪ್ರತಿ ಮನೇಲಿ ಒಬ್ಬ ಈ ರೀತಿ ಜಾಷದಿ ಹಾಕಿದ್ದರು ರಿಪ್ಪನ್ ಪೇಟೆ ಹತ್ತಿರದ ಗತಿ೯ ಕೆರೆಯಲ್ಲಿ ತೆಗೆಸಿ ಕೊಂಡು ಸರಿ ಆದೆ ಅನ್ನುವವರು ಸಿಗುತ್ತಾರೆ.
  ನನಗೆ ಈ ಬಗ್ಗೆ ಕುತೂಹಲ ಅನೇಕರಲ್ಲಿ ವಿಚಾರಿಸಿದಾಗ ಇಂತಹ ಒಂದು ವಿಷಪ್ರಾಶನ ಹಿಂದಿನ ಕಾಲದಲ್ಲಿತ್ತು ನಂತರ ಇಲ್ಲವಾಗಿದೆ ಎಲ್ಲೋ ಕೆಲವರು ಈ ವಿದ್ಯ ತಿಳಿದಿರಬಹುದು ಆದರೆ ತಮಗೆ ಆಗದವರ ಮೇಲೆ ಅನುಮಾನ ಮೂಡಿಸಿ ಸಮಾಜದಲ್ಲಿ ಅವರನ್ನ ಒಂದು ರೀತಿಯ ಬಹಿಷ್ಕರಿಸಲು ಈ ರೀತಿ ವದಂತಿ ಬರುತ್ತೆ ಅಂತ ಅವರು ಹೇಳುತ್ತಾರೆ.
   ಹೀಗಿರುವಾಗಲೇ ನಾನು ಮೊನ್ನೆ ಬೇಟಿ ಮಾಡಿದ ಒಬ್ಬ ಪ್ರಸಿದ್ದ ಬ್ರಾಹಮಣ ಮೂಖಂಡರು ತಮಗೆ ತಮ್ಮ ದಾಯಾದಿಗಳಿಂದ ಹೊಟ್ಟೆಗೆ ಮದ್ದು ಬಿದ್ದಿದೆ ತೆಗೆಸಿಕೊಳ್ಳಬೇಕು ಅಂದಾಗ ಇದೆಲ್ಲ ಬರೆಯಬೇಕಾಯಿತು.
  ಇದು ಸತ್ಯನಾ? ಮಿಥ್ಯನಾ? ನಿಮ್ಮ ಅನುಭವ ಬರೆಯಿರಿ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...