Skip to main content

# ಉಡುಪಿಯ ಮಟ್ಟು ಗುಳ್ಳ ಜಿಯೋಗ್ರಾಫಿಕಲ್ ಇಂಡಿಕೇಶನ್ ಟ್ಯಾಗ್ ಹೊಂದಿದೆ.#

# ಉಡುಪಿಯ ಮಟ್ಟು ಗುಳ್ಳದ ಮೂಲ ಬಲ್ಲಿರಾ#
   ಉಡುಪಿ ಗುಳ್ಳ ಎಂದರೆ ದಂಡನೆಯ ಬದನೆಕಾಯಿ ಅಂತ ಎಲ್ಲರಿಗೂ ಗೊತ್ತು ಆದರೆ ಇಲ್ಲಿನ ಮಟ್ಟು ಗುಳ್ಳಕ್ಕೆ ಬೇರೆಯದೇ ಇತಿಹಾಸ, ಆಧ್ಯಾತ್ಮದ ನಂಟು, ರುಚಿ ಇದೆ.
  ಹಾಗಾಗಿಯೆ ಇದಕ್ಕೆ ಜಿಯೋಗ್ರಾಫಿಕಲ್ ಇಂಡಿಕೇಶನ್ ಟ್ಯಾಗ್ ಇದೆ.
  ಉಡುಪಿಯಲ್ಲಿ ಉಡುಪಿ ಗುಳ್ಳ ಅಂತ ಬಕೂ೯ರ್, ಕುಂದಾಪುರದಲ್ಲಿ ಬೆಳೆದ ಗುಳ್ಳಗಳ ಮಾರಾಟ ಜಾಸ್ತಿ ಆದರೆ ಮಟ್ಟು ಗುಳ್ಳ ಮಾತ್ರ ಎಲ್ಲಾ ಕಡೆ ಸಿಗುವುದಿಲ್ಲ.
   ಉಡುಪಿಯಿ೦ದ ಮ೦ಗಳೂರು ರಾಷ್ಟ ಹೆದ್ದಾರಿಯಲ್ಲಿ ಕಟಪಾಡಿಯಿ೦ದ ಬಲಕ್ಕೆ ತಿರುಗಿದರೆ ಮಟ್ಟು ಎಂಬ ಹಳ್ಳಿ ಇದೆ ಇಲ್ಲಿ ಉದ್ಯಾವರ ನದಿ ಮತ್ತು ಸ್ವಣ೯ ನದಿ ಹರಿಯುವ ಪ್ರದೇಶದ ಮದ್ಯದ ಸುಮಾರು 500 ಎಕರೆ ಮರಳು ಮಿಶ್ರ ಮಣ್ಣಿನ ಭೂಮಿ ಈ ಗುಳ್ಳ ಬೆಳೆಯುವ ಪ್ರದೇಶ.
   ಪ್ರತಿ ಹೆಕ್ಟರ್ ಗೆ ಅಂದಾಜು 40 ಟನ್ ಇಳುವರಿ ಬರುವ ಈ ಬೆಳೆ ಸೆಪ್ಟೆಂಬರ್/ಅಕ್ಟೋಬರ್ ನಲ್ಲಿ ಕೊಯ್ಲಗಿ ಬರುತ್ತೆ, ರಾಸಾಯನಿಕ ಬಳಸದೆ ಹೆಚ್ಚು ಮೀನು ಗೊಬ್ಬರದಲ್ಲಿ ಇದನ್ನ ಬೆಳೆಸುತ್ತಾರೆ, ಯಾವುದೇ ವಿಷದ ಕ್ರಿಮಿನಾಶಕ ಬಳಸುವುದಿಲ್ಲ ಹಾಗಾಗಿ ಈ ಮಟ್ಟು ಗುಳ್ಳ ಸಾವಯವ ತರಕಾರಿ ಮತ್ತು ಇದರ ರುಚಿ ಅತ್ಯಂತ ವಿಭಿನ್ನ .
   ಈಗ ಇದನ್ನ ಬೆಳೆಸುವವರ ಸಂಖ್ಯೆ ಕಡಿಮೆ ಆಗಿದೆ, 2011ರಲ್ಲಿ ಇದರ ಪ್ರಾದೇಶಿಕ ವಿಭಿನ್ನತೆ, ಹಿನ್ನೆಲೆಗೆ ಜಿಯಾಗ್ರಾಫಿಕಲ್ ಇಂಡಿಕೇಶನ್ ಟ್ಯಾಗ್ ಹೊಂದಿದ್ದು ಕನಾ೯ಟಕದ ಈ ತರಕಾರಿಗೆ ಹೆಮ್ಮೆಯ ಕಿರೀಟವಾಗಿದೆ.
  ಇದಕ್ಕೆ 400 ವಷ೯ದ ಇತಿಹಾಸವಿದೆ, ಇಲ್ಲಿ ಬೆಳೆದ ಮೊದಲ ಬೆಳೆ ಉಡುಪಿ ಕೃಷ್ಣ ದೇವರಿಗೆ ಸಮಪ೯ಣೆ ಮಾಡುವ ಪರಂಪರೆ ಇದಕ್ಕೆ ಕಾರಣವಾದ ಕಥೆ ಕೂಡ ಇದೆ.
   ಉಡುಪಿ ಅಷ್ಟಮಠದ ವಾದಿರಾಜ ಸ್ವಾಮಿಗಳು ಪ್ರತಿ ದಿನ   ದೇವರಿಗೆ ಹಯಗ್ರೀವ ನೈವೇದ್ಯ ಮಾಡುತ್ತಿದ್ದರಂತೆ ಇವರನ್ನ ನೋಡಿ ಸಹಿಸದ ದೇವಾಲಯದ ಪುರೋಹಿತರು ಒಂದು ವದಂತಿ ಹರಡಿದ್ದರಂತೆ ಅತ್ಯಂತ ರುಚಿಯಾದ ಹಯಗ್ರೀವ ವಾದಿರಾಜರೇ ನೈವೇದ್ಯದ ಹೆಸರಲ್ಲಿ ಬಾಗಿಲು ಹಾಕಿ ತಿನ್ನುತ್ತಾರೆ ಅಂತ.
  ಆದರೆ ಪ್ರತಿ ದಿನ ವಾದಿರಾಜರು ಹಯಗ್ರೀವ ನೈವೇದ್ಯ ಮಾಡಿದಾಗ ದೇವರೇ ಸ್ವೀಕರಿಸಿ ಖಾಲಿ ತಟ್ಟೆ ಇರುತ್ತಿತ್ತಂತೆ ಆದರೆ ಇದನ್ನ ತಪ್ಪಾಗಿ ಅಥ್ತೈ೯ಯಿಸಿದ ಮತ್ತು ಸಹಿಸದ ಪುರೋಹಿತ ವಗ೯ ಹಯಗ್ರೀವದಲ್ಲಿ ವಿಷ ಬೆರೆಸಿದ್ದರಂತೆ, ಇದನ್ನ ತಿಳಿಯದೆ ವಾದಿರಾಜರು ನೈವೇದ್ಯ ಮಾಡಿದ್ದರು ಇದನ್ನ ಸೇವಿಸಿದ ಕೃಷ್ಣ ದಿನದಿಂದ ದಿನಕ್ಕೆ ನೀಲಿ ಆಗಲು ಪ್ರಾರಂಭಿಸಿದನಂತೆ ನಂತರ ಇದಕ್ಕೆ ಕಾರಣ ತಿಳಿದ ವಾದಿರಾಜರು ಶ್ರೀ ಕೃಷ್ಣನಿಂದ ಪರಿಹಾರವಾಗಿ ಈ ವಿಶಿಷ್ಟ ಗುಳ್ಳದ ಬೀಜ ಪಡೆದು ಈ ಮಟ್ಟು ಎಂಬ ಹಳ್ಳಿಯ ಜನಕ್ಕೆ ನೀಡಿ ಬೆಳೆ ಬೆಳೆಸಿ ನಂತರ ಇದನ್ನ ಕೃಷ್ಣನಿಗೆ ಸಮಪ೯ಣೆ ಮಾಡಿದಾಗ ನೀಲಿ ಬಣ್ಣದ ವಿಷ ಹೋಯಿತು ಎಂದು ಇದಕ್ಕೆ ಆಧ್ಯಾತ್ಮದ ಸ್ಥಳ ಪುರಾಣ ಹೇಳುತ್ತಾರೆ.
ಉಡುಪಿ ಅಷ್ಟ ಮಠದಲ್ಲಿ ಈಗಲೂ ಒಳ ಜಗಳ ಇದೆ ಅದೇ ರೀತಿ ಕನಕನ ಕಿಂಡಿ, ಮಟ್ಟುಗುಳ್ಳಗಳ ಪವಾಡದ ಕಥೆಗಳು ಕೂಡ.
  ಮೊನ್ನೆ ಉಡುಪಿಯಲ್ಲಿ ಸಿಕ್ಕಿದ ಮಟ್ಟುಗುಳ್ಳ ತ೦ದು ತಿಂದದ್ದಲ್ಲದೆ ಗೆಳೆಯರಿಗೆಲ್ಲ ಕೊಟ್ಟಿದ್ದೆ ಅವರೆಲ್ಲ ಇದರ ರುಚಿಗೆ ಮನ ಸೋತಿದ್ದಾರೆ ಹಾಗೆ ಅವರು ಪ್ರಶ್ನೆ ಹಾಕುತ್ತಾರೆ ಸೇಬು ಹಣ್ಣಿಗೆ ಹಾಕಿದOಗೆ ಇದಕ್ಕೂ ಸೀಲ್ ಹಾಕಿದ್ದು ಏಕೆ? ಅಂತ. ( ಇದು ಜಿಯೋಗ್ರಾಫಿಕಲ್ ಇಂಡಿಕೇಷನ್ ಟ್ಯಾಗ್) 

MATTU GULLA

THIS IS RARE AND SPECIAL VERITY OF GREEN BRINJAL HAVING GEOGROPHICAL INDICATION TAG CALLED AS MATTU GULLA ONLY CULTIVATING IN SMALL VILLAGE OF UDUPI KARNATAKA STATE.

   SEEDS GIVEN BY LORD KRISHNA WHEN HE POISENED IN HAYAGRIVA AND CURED BY THIS VEG NOW ALSO THESE FARMERS OFFER FIRST CROP TO LORD KRISHNA OF UDUPI.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...