Skip to main content

# ಪ್ರೊಪೆಸರ್ ನಂಜುಂಡಸ್ವಾಮಿಯವರು 1999ರಲ್ಲಿ ಹೇಳಿದ್ದು 20 ವಷ೯ದಲ್ಲಿ ಸತ್ಯ ಸಾಬೀತಾಗಿದೆ.#

1999 ರಲ್ಲಿ ಒಂದು ಬೆಳಿಗ್ಗೆ ಹಸಿರು ದೀಪದ ದೊಡ್ಡ ಕಾರು ನಮ್ಮ ಮನೆ ಅಂಗಳದಲ್ಲಿ ಬಂದು ನಿಂತಿತು, ಕೆಂಪು ದೀಪ ಮಂತ್ರಿ ಮಹೋದಯರದ್ದು ಎಂಬುದು ಗೊತ್ತಿತ್ತು ಆದರೆ ಇದು ಹಸಿರು ದೀಪ ಪತ್ರಿಕೆ ಓದುತ್ತಿದ್ದ ನನಗೆ ಕುತೂಹಲ, ಕಾರಿಂದ ಇಳಿದ ವರು ಹಸಿರು ಶಾಲು ಹೊದ್ದ ಪ್ರೊಪೆಸರ್ ನಂಜುಂಡಸ್ವಾಮಿ, ಕೋಡಿ ಹಳ್ಳಿ ಚಂದ್ರಶೇಖರ್ ಮತ್ತು ಸಾಗರದ ರೈತ ಹೋರಾಟ ಪತ್ರಿಕೆ ಸಂಪಾದಕರಾದ ವಸಂತ ಕುಮಾರ್.
  ಅವತ್ತು ನನಗಾದ ಸಂತೋಷ ಹೇಳಲಿಕ್ಕೆ ಸಾಧ್ಯವಿಲ್ಲ, ನನ್ನ ತಂದೆ ರೈತ ಹೋರಾಟದ ಹಸಿರು ಶಾಲು ಹೊದ್ದವರು, ಪೋಪೆಸರ್ ಜೈಲ್ ಬರೋ ಕರೆಯಿಂದ ಪ್ರೇರೇಪಿತರಾಗಿ ಜೈಲಿಗೆ ಹೋಗಿ ಬಂದವರು, ಅವರು ಜಿಲ್ಲೆಯಲ್ಲಿ ನಂಜುOಡಸ್ವಾಮಿಯವರ ಸಭೆ ಎಲ್ಲೇ ಇದ್ದರು ಹೋಗಿ ಕೇಳಿ ಬಂದು ಅದನ್ನ ಬಹಳ ದಿನ ವಿಮಷೆ೯ ಮಾಡುತ್ತಿದ್ದರು ಇದೆಲ್ಲ 1983ರ ಹಾಗೂ 1986ರ ಘಟನೆಗಳು.
  ನನ್ನ ತಂದೆಯ ಆರಾಧ್ಯ ರೈತ ನಾಯಕರು ಮನೆಗೆ ಬಂದದ್ದು ಕಾಯಿಲೆ ಮತ್ತು ವೃದ್ದಾಪ್ಯದ ಅವರಿಗೆ ಲವಲವಿಕೆ ಉತ್ಸಾಹ ಉಂಟು ಮಾಡಿತು, ಗಣ್ಯರು ಬಂದಾಗ ಅವರಿಗೆ ಅಪಿ೯ಸುವ ಹಾರ ತಂದು ಪ್ರೊಪೆಸರ್ಗೆ ಹಾಕಿದರು ಆ ಸಂದಭ೯ದಲ್ಲಿ ಹಾರ ಹಾಕಿಸಿಕೊಂಡ ಪ್ರೊಪೆಸರ್ ಹೇಳಿದ್ದು ನಾನು ಯಾರಿಂದಲೂ ಹಾರ ಹಾಕಿಸಿ ಕೊಳ್ಳುವುದಿಲ್ಲ ಆದರೆ ಇವತ್ತು ನಿಮ್ಮ ತಂದೆ ಅಭಿಮಾನಕ್ಕೆ ನಿರಾಕರಿಸಲಾಗಲಿಲ್ಲ.
  ಚಹಾ, ಸಿಗರೇಟು ಸೇವನೆಯ ಜೊತೆ ನಡೆದ ಸಂಬಾಷಣೆ ಇವತ್ತು ನಿಮ್ಮ ಪಶು ಸಂಗೋಪನೆ ಲೆಕ್ಕಾಚಾರ ನೋಡಿದಾಗ ನೆನಪಾಯಿತು.
  ಅವರು ಹೇಳಿದ್ದು 1999ರಲ್ಲಿ "ಇವತ್ತು ಭತ್ತ ಬೆಳೆಯುವ ರೈತ ಎಕರೆಗೆ 2500 ನಷ್ಟ ಮಾಡಿ ಕೊಳ್ಳುತ್ತಿದ್ದಾನೆ ಆದರೆ ಅವನಿಗೆ ಖಚು೯ ವೆಚ್ಚದ ಅರಿವೆ ಇಲ್ಲ, ಅವನ ಕೂಲಿ, ಗೊಬ್ಬರ, ಎತ್ತಿನ ಬೇಸಾಯ ಲೆಖ್ಕ ಮಾಡುತ್ತಿಲ್ಲ ಆದರೆ ಮುಂದಿನ ದಿನದಲ್ಲಿ ರೈತನ ಮಗ ಕಂಪ್ಯೂಟರ್ ಬಳಸುತ್ತಾನೆ ಪ್ರತಿಯೊಂದು ಪೈಸೆಗೂ ಲೆಖ್ಕ ಬರೆಯುತ್ತಾನೆ ಆಗ ಅವನಿಗೆ ಈ ನಷ್ಟ ಅರಿವಾಗುತ್ತಾನೆ ಆಗ ಅವನು ಭತ್ತ ಬೆಳೆಯುವುದು ನಿಲ್ಲಿಸುತ್ತಾನೆ" ಅಂದಿದ್ದರು ಇದು ಇವತ್ತು ನನ್ನ ಎದುರು ಸತ್ಯವಾಗಿ ಕೃಷಿ ಅಲ್ಲದಿದ್ದರೂ ಕೃಷಿಯ ಬಾಗವಾದ ಹೈನುಗಾರಿಕೆಯಲ್ಲಿ ನಿಮ್ಮಿ೦ದ ನೆನಪಾಯಿತು.
  ಇದಕ್ಕೆ ಪರಿಹಾರ?ಅನ್ನುವ ನನ್ನ ಪ್ರಶ್ನೆಗೆ ಅವರ ಉತ್ತರ " ಬೀಳುಬೀಳುವ ಸಾವಿರಾರು ಎಕರೆ ಸಾಗುವಳಿ ಮಾಡುವ ಕಾಪೊ೯ರೇಟ್ ಕಂಪನಿಗಳು ಖರೀದಿಸುತ್ತವೆ ಅಲ್ಲಿ ನಮ್ಮ ರೈತ ಕೂಲಿಯಾಗಿ ಕೆಲಸಕ್ಕೆ ಸೇರುತ್ತಾನೆ ಅದಕ್ಕೆ ಅನುಕೂಲವಾದ ಕಾನೂನು ನಮ್ಮ ಪ್ರತಿನಿದಿಗಳು ಮಾಡುತ್ತಾರೆ".
  ಪ್ರೊಪೆಸರ್ ನಂಜುಂಡಸ್ವಾಮಿ ಎಂಬ ರೈತ ನಾಯಕರ ಚಿಂತನೆ ನಿಜವಾಗುತ್ತಿರುವ ಸೂಚನೆಗಳ ನೋಡಿ ನನಗೆ ಭಯ ಆಗುತ್ತಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...