ಕೆ.ಶಿವರಾಂ ಕನ್ನಡದಲ್ಲಿ ಐಎಎಸ್ ಮಾಡಿದ ಮೊದಲಿಗರು.
ಇವರ ಜೀವನ ಒಂದು ಹೊರಾಟ ಯಾಕೆಂದರೆ ಇವರ ಬಾಲ್ಯ ಅತ್ಯಂತ ಬಡತನದ್ದು, ದಲಿತ ಕುಟುಂಬದಲ್ಲಿ ಜನಿಸಿದ ಇವರು ಎಲ್ಲಾ ಸವಾಲುಗಳನ್ನ ಎದುರಿಸಿ ದೊಡ್ಡ ಹುದ್ದೆ ಪಡೆದ ಕಥೆ ಎಲ್ಲರಿಗೂ ಒಂದು ಪ್ರೇರಣೆ ಆಗುತ್ತದೆ.
ಶಿವಮೊಗ್ಗದ ಜಿಲ್ಲಾ ಪಂಚಾಯತ್ ಗೆ ಮುಖ್ಯ ಕಾಯ೯ ನಿವಾ೯ಹಕ ಅಧಿಕಾರಿಯಾಗಿ ಇವರು ಬಂದಾಗ ಜಿಲ್ಲಾ ಪಂಚಾಯತ್ ಸದಸ್ಯರಾದ ನಮಗೆಲ್ಲ ಕುತೂಹಲ ಆಗಷ್ಟೆ ಇವರ ಬಾ ನಲ್ಲೆ ಮದು ಚಂದ್ರಕೆ ಎಂಬ ಸಿನಿಮಾದಿಂದ ಇವರು ಖ್ಯಾತರಾಗಿದ್ದರು, ಬೆಂಗಳೂರು ಬಿಡಿಎ ಅಧಿಕಾರಿ ಆಗಿದ್ದಾಗ ಬೆಂಗಳೂರಲ್ಲಿ ಬಡವರಿಗೆ ಆಶ್ರಯ ನಿವೇಶನ ನೀಡಿ ದಾಖಲೆ ಮಾಡಿದ್ದರು, ಮೈಸೂರಿನಲ್ಲಿ ಕೂಡ ಅಭಿವೃದ್ಧಿ ಮಾಡಿ ಖ್ಯಾತರಾಗಿದ್ದರು.
ಇವರು ಶಿವಮೊಗ್ಗ ಬಂದಾಗಲೇ ನಮ್ಮ ಊರಾದ ಆನಂದಪುರಂನಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳ ಆನಂದಪುರಂನ ಕನ್ನಡ ಸಂಘದ ಆಗಿನ ಅದ್ಯಕ್ಷರಾಗಿದ್ದ ಹಾ.ಮೊ.ಬಾಷ ನೇತೃತ್ವದಲ್ಲಿ ಹಮ್ಮಿಕೊಂಡಿದ್ದೆವು. ಉದ್ಘಾಟನೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪರಿಂದ, ಕಾಗೋಡು ತಿಮ್ಮಪ್ಪ, ಕುಮಾರ್ ಬಂಗಾರಪ್ಪಾ, ಆಗಿನ ಜಿಲ್ಲಾ ಪಂಚಾಯತ ಅಧ್ಯಕ್ಷೆ ಶ್ರೀಮತಿ ಬಲ್ಕಿಶ್ ಬಾನು ಮುಂತಾದವರೆಲ್ಲ ಭಾಗವಹಿಸಿದ್ದರು,.
ಈ ಅದ್ದೂರಿ ಮತ್ತು ಯಶಸ್ವಿ ಯುವಜನ ಮೇಳ ಅತ್ಯಂತ ವಣ೯ಮಯವಾಗಿ ನಡೆಯಲು ಅವತ್ತು ಜಿಲ್ಲಾ ಪಂಚಾಯತ್ ಅಧಿಕಾರಿಯಾಗಿದ್ದ ಕೆ.ಶಿವರಾಂ ಕಾರಣ ಕತ೯ರು.
ಅವರ ಮತ್ತು ನನ್ನ ಗೆಳೆತನ ಅಪೂವ೯, ಅವರ ಜೀವನದ ಬಗ್ಗೆ ಕೇಳಿದಾಗ ಅವರಾಡಿದ ಮಾತುಗಳು .....
ವಾರದ ಮುದ್ದೆ ಊಟದಲ್ಲಿ ವಿದ್ಯಾಭ್ಯಾಸ ಮಾಡಿ ಬೆಂಗಳೂರಿನ ಸೆಂಟ್ರಲ್ ಜೈಲ್ನಲ್ಲಿ FDC ಯಾಗಿ ಕೆಲಸಕ್ಕೆ ಸೇರುತ್ತಾರೆ ಸ್ವಲ್ಪ ದಿನದಲ್ಲಿ ಅವರಿಗೆ ಅಲ್ಲಿನ ಪೋಲಿಸ್ ಅಧಿಕಾರಿಗಳ ನೋಡಿ ತಾನೂ ಡಿವೈಎಸ್ಪಿ ಆಗಬೇಕು ಅಂತ ಅನ್ನಿಸುತ್ತದೆ ಯಾಕೆಂದರೆ ಅವರಿಗೆ ಸಿಗುವ ಗೌರವ, ನಂತರ ಓದಿ ಪರೀಕ್ಷೆ ಬರೆದು Dy SP ಆಗುತ್ತಾರೆ ಮಿರಿ ಮಿರಿ ಮಿಂಚುವ ಕೆಂಪು ಬೂಟಿನಲ್ಲಿ ಜೀಪಿನಲ್ಲಿ ಬಂದಿಳಿಯುತ್ತಾರೆ ಆದರೆ ಸ್ವಲ್ಪ ದಿನದಲ್ಲೇ ಅವರಿಗೆ ಭ್ರಮನಿರಸನ ಆಗುತ್ತೆ IAS ಅಥವ IPS ಆಗಲೇ ಬೇಕು ಅನ್ನುವ ಮಹತ್ವಾಕಾಂಕ್ಷೆ ಮೂಡುತ್ತದೆ.
ಕೊನೆಗೂ ಅದನ್ನ ಸಾದಿಸುತ್ತಾರೆ ಅದು ನಮ್ಮ ರಾಜ್ಯದ ಕನ್ನಡ ಬಾಷೆಯಲ್ಲಿ ಐಎಎಸ್ ಪರೀಕ್ಷೆ ಬರೆದು ಪಾಸು ಮಾಡಿದ ಮೊದಲಿಗರೆಂಬ ದಾಖಲೆಯಲ್ಲಿ.
ಇವರ ಮನೆಯಲ್ಲಿ ರಾಗಿ ಮುದ್ದೆ ಉಪ್ಪು ಸಾರು ಊಟ ಮಾಡಿದ್ದೆ ಇವತ್ತು ನನ್ನ ಅತಿಥಿ ಆಗಿ ಬಿರಿಯಾನಿ ತಿಂದದ್ದು ನನಗೆ ಅತ್ಯಂತ ಸಂತೋಷವಾಯಿತು.
ಇವರ ಜೀವನ ಒಂದು ಸಾದನೆ ಯುವ ಜನರಿಗೆ ಪ್ರೇರಣೆ ಕೂಡ ಪ್ರಯತ್ನ ಮಾಡಿದರೆ ಏನನ್ನು ಸಾದಿಸಬಹುದು ಎಂಬುದಕ್ಕೆ ಒಂದು ಉದಾಹರಣೆ.
#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ. ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ. ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ. #ದೀರ್ಘವಾದರೂ_ಪೂರ್ಣ_ಲೇಖನ_ಓದಿ #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ
Comments
Post a Comment