ಕೆ.ಶಿವರಾಂ ಕನ್ನಡದಲ್ಲಿ ಐಎಎಸ್ ಮಾಡಿದ ಮೊದಲಿಗರು.
ಇವರ ಜೀವನ ಒಂದು ಹೊರಾಟ ಯಾಕೆಂದರೆ ಇವರ ಬಾಲ್ಯ ಅತ್ಯಂತ ಬಡತನದ್ದು, ದಲಿತ ಕುಟುಂಬದಲ್ಲಿ ಜನಿಸಿದ ಇವರು ಎಲ್ಲಾ ಸವಾಲುಗಳನ್ನ ಎದುರಿಸಿ ದೊಡ್ಡ ಹುದ್ದೆ ಪಡೆದ ಕಥೆ ಎಲ್ಲರಿಗೂ ಒಂದು ಪ್ರೇರಣೆ ಆಗುತ್ತದೆ.
ಶಿವಮೊಗ್ಗದ ಜಿಲ್ಲಾ ಪಂಚಾಯತ್ ಗೆ ಮುಖ್ಯ ಕಾಯ೯ ನಿವಾ೯ಹಕ ಅಧಿಕಾರಿಯಾಗಿ ಇವರು ಬಂದಾಗ ಜಿಲ್ಲಾ ಪಂಚಾಯತ್ ಸದಸ್ಯರಾದ ನಮಗೆಲ್ಲ ಕುತೂಹಲ ಆಗಷ್ಟೆ ಇವರ ಬಾ ನಲ್ಲೆ ಮದು ಚಂದ್ರಕೆ ಎಂಬ ಸಿನಿಮಾದಿಂದ ಇವರು ಖ್ಯಾತರಾಗಿದ್ದರು, ಬೆಂಗಳೂರು ಬಿಡಿಎ ಅಧಿಕಾರಿ ಆಗಿದ್ದಾಗ ಬೆಂಗಳೂರಲ್ಲಿ ಬಡವರಿಗೆ ಆಶ್ರಯ ನಿವೇಶನ ನೀಡಿ ದಾಖಲೆ ಮಾಡಿದ್ದರು, ಮೈಸೂರಿನಲ್ಲಿ ಕೂಡ ಅಭಿವೃದ್ಧಿ ಮಾಡಿ ಖ್ಯಾತರಾಗಿದ್ದರು.
ಇವರು ಶಿವಮೊಗ್ಗ ಬಂದಾಗಲೇ ನಮ್ಮ ಊರಾದ ಆನಂದಪುರಂನಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳ ಆನಂದಪುರಂನ ಕನ್ನಡ ಸಂಘದ ಆಗಿನ ಅದ್ಯಕ್ಷರಾಗಿದ್ದ ಹಾ.ಮೊ.ಬಾಷ ನೇತೃತ್ವದಲ್ಲಿ ಹಮ್ಮಿಕೊಂಡಿದ್ದೆವು. ಉದ್ಘಾಟನೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪರಿಂದ, ಕಾಗೋಡು ತಿಮ್ಮಪ್ಪ, ಕುಮಾರ್ ಬಂಗಾರಪ್ಪಾ, ಆಗಿನ ಜಿಲ್ಲಾ ಪಂಚಾಯತ ಅಧ್ಯಕ್ಷೆ ಶ್ರೀಮತಿ ಬಲ್ಕಿಶ್ ಬಾನು ಮುಂತಾದವರೆಲ್ಲ ಭಾಗವಹಿಸಿದ್ದರು,.
ಈ ಅದ್ದೂರಿ ಮತ್ತು ಯಶಸ್ವಿ ಯುವಜನ ಮೇಳ ಅತ್ಯಂತ ವಣ೯ಮಯವಾಗಿ ನಡೆಯಲು ಅವತ್ತು ಜಿಲ್ಲಾ ಪಂಚಾಯತ್ ಅಧಿಕಾರಿಯಾಗಿದ್ದ ಕೆ.ಶಿವರಾಂ ಕಾರಣ ಕತ೯ರು.
ಅವರ ಮತ್ತು ನನ್ನ ಗೆಳೆತನ ಅಪೂವ೯, ಅವರ ಜೀವನದ ಬಗ್ಗೆ ಕೇಳಿದಾಗ ಅವರಾಡಿದ ಮಾತುಗಳು .....
ವಾರದ ಮುದ್ದೆ ಊಟದಲ್ಲಿ ವಿದ್ಯಾಭ್ಯಾಸ ಮಾಡಿ ಬೆಂಗಳೂರಿನ ಸೆಂಟ್ರಲ್ ಜೈಲ್ನಲ್ಲಿ FDC ಯಾಗಿ ಕೆಲಸಕ್ಕೆ ಸೇರುತ್ತಾರೆ ಸ್ವಲ್ಪ ದಿನದಲ್ಲಿ ಅವರಿಗೆ ಅಲ್ಲಿನ ಪೋಲಿಸ್ ಅಧಿಕಾರಿಗಳ ನೋಡಿ ತಾನೂ ಡಿವೈಎಸ್ಪಿ ಆಗಬೇಕು ಅಂತ ಅನ್ನಿಸುತ್ತದೆ ಯಾಕೆಂದರೆ ಅವರಿಗೆ ಸಿಗುವ ಗೌರವ, ನಂತರ ಓದಿ ಪರೀಕ್ಷೆ ಬರೆದು Dy SP ಆಗುತ್ತಾರೆ ಮಿರಿ ಮಿರಿ ಮಿಂಚುವ ಕೆಂಪು ಬೂಟಿನಲ್ಲಿ ಜೀಪಿನಲ್ಲಿ ಬಂದಿಳಿಯುತ್ತಾರೆ ಆದರೆ ಸ್ವಲ್ಪ ದಿನದಲ್ಲೇ ಅವರಿಗೆ ಭ್ರಮನಿರಸನ ಆಗುತ್ತೆ IAS ಅಥವ IPS ಆಗಲೇ ಬೇಕು ಅನ್ನುವ ಮಹತ್ವಾಕಾಂಕ್ಷೆ ಮೂಡುತ್ತದೆ.
ಕೊನೆಗೂ ಅದನ್ನ ಸಾದಿಸುತ್ತಾರೆ ಅದು ನಮ್ಮ ರಾಜ್ಯದ ಕನ್ನಡ ಬಾಷೆಯಲ್ಲಿ ಐಎಎಸ್ ಪರೀಕ್ಷೆ ಬರೆದು ಪಾಸು ಮಾಡಿದ ಮೊದಲಿಗರೆಂಬ ದಾಖಲೆಯಲ್ಲಿ.
ಇವರ ಮನೆಯಲ್ಲಿ ರಾಗಿ ಮುದ್ದೆ ಉಪ್ಪು ಸಾರು ಊಟ ಮಾಡಿದ್ದೆ ಇವತ್ತು ನನ್ನ ಅತಿಥಿ ಆಗಿ ಬಿರಿಯಾನಿ ತಿಂದದ್ದು ನನಗೆ ಅತ್ಯಂತ ಸಂತೋಷವಾಯಿತು.
ಇವರ ಜೀವನ ಒಂದು ಸಾದನೆ ಯುವ ಜನರಿಗೆ ಪ್ರೇರಣೆ ಕೂಡ ಪ್ರಯತ್ನ ಮಾಡಿದರೆ ಏನನ್ನು ಸಾದಿಸಬಹುದು ಎಂಬುದಕ್ಕೆ ಒಂದು ಉದಾಹರಣೆ.
ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ) ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ. ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ. ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ. ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ. ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...
Comments
Post a Comment