#ಸಾಗರ ತಾಲ್ಲೂಕಿನ ಕಾಂಗ್ರೇಸ್ ನೇತಾರರಾದ ಪ್ರೀತಿಯ ಖಾನ್ ಸಾಹೇಬರು#
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ನವರು ಲೋಕಸಭೆಗೆ ಕಾಂಗ್ರೇಸ್ ವಿರುದ್ಧ ಸ್ಪದಿ೯ಸಿದಾಗ ಹೇಳುತ್ತಿದ್ದರು ಯಾರಾದರೂ ಬದಲಾಗಿ ಬೇರೆ ಪಕ್ಷಕ್ಕೆ ಓಟು ನೀಡ ಬಹುದು ಆದರೆ ಆ ಸಾಗರದ ಖಾನ್ ಮತ್ತು ಪೈ (ಪುತ್ತೂರಾಯರ ಬಗ್ಗೆ) ಮಾತ್ರ ಕೈ ಬಿಟ್ಟು ಬರೊಲ್ಲ ಅಂತ.
ಅದಕ್ಕೆ ಕಾರಣವೂ ಇದೆ, ಗುಂಡೂರಾಯರ ಕಾಲದಲ್ಲಿ ಬಂಗಾರಪ್ಪರನ್ನ ಹಣಿಯಲು ಜನತಾ ಪಕ್ಷದಿಂದ ಕಾಗೋಡರನ್ನ ತಂದು ವಿದಾನ ಪರಿಷತ್ ಸದಸ್ಯರನ್ನಾಗಿಸಿ ಮಂತ್ರಿ ಮಾಡಿದ ಕಾಯ೯ದಲ್ಲಿ ಆಹಮದ್ ಆಲೀ ಖಾನ್ ಸಾಹೇಬರ ಕೆಲಸ ದೊಡ್ಡದು.
ಸ್ವಾತಂತ್ರ್ಯ ನಂತರದ 1952 ರಿಂದ ಪ್ರಾರಂಭವಾದ ಚುನಾವಣೆಯಿಂದ ಈ ವರೆಗಿನ ಚುನಾವಣೆ ವರೆಗೆ ನೇರ ನೋಡಿದವರು, ರಾಜಕಾರಣ ಮಾಡಿದವರು ಇವರು, ಸಾಗರ ತಾಲ್ಲೂಕಿನ ಕಾಂಗ್ರೇಸ್ ಅಧ್ಯಕ್ಷರಾಗಿ ಪಕ್ಷ ಸಂಘಟಿಸಿದವರು, ಪುರಸಭಾ ಅಧ್ಯಕ್ಷರೂ ಆದವರು.
1989ರಲ್ಲಿ ಸಾಗರ ವಿಧಾನ ಸಭೆಗೆ ಕಾಗೋರರನ್ನ ಪುನಃ ಕರೆ ತಂದವರು ಆಗಲೇ ನಮ್ಮಂತವರನ್ನೆಲ್ಲ ಹಿಡಿದು ತಂದು ಕಾಂಗ್ರೇಸ್ಗೆ ಸೇರಿಸಿ ಕೊಂಡವರು, ಇವರ ಮಾಗ೯ದಶ೯ನದಿಂದಲೇ ನಾನು ಗ್ರಾ.ಪಂ., ಜಿ.ಪಂ ಗೂ ಹೋಗುವ೦ತಾಯಿತು, ಸಾಗರ ತಾಲ್ಲೂಕಿನಲ್ಲಿ ಇವರ ಗರಡಿಯಲ್ಲಿ ತಯಾರಾದ ನಾಯಕರು ನೂರಾರು.
ಈಗ 86 ರ ವಯೋಮಾನದ ಇವರು ನಿವೃತ್ತ ಜೀವನ ಮಾಡುತ್ತಿದ್ದಾರೆ, ಯೋಗ್ಯರಾದ ಮಕ್ಕಳು, ಮೊಮ್ಮಕ್ಕಳು ಮತ್ತು ಮರಿ ಮಕ್ಕಳ ಒಂದಿಗೆ ಸಂತೃಪ್ತ ಜೀವನ ಅವರದ್ದು.
ಇತ್ತೀಚಿಗೆ ಅನಾರೋಗ್ಯದಿಂದ ಮಣಿಪಾಲದಲ್ಲಿ 15 ದಿನ ಚಿಕಿತ್ಸೆ ಪಡೆದು ಬಂದಿದ್ದಾರೆಂದು ತಿಳಿದು ಮೊನ್ನೆ ಸಂಜೆ ಇವರನ್ನ ಬೇಟಿ ಮಾಡಲು ಸಾಗರಕ್ಕೆ ಹೋಗಿದ್ದೆ, ಈ ಇಳಿ ವಯಸ್ಸಿನಲ್ಲೂ ಬಂದವರ ಆತಿಥ್ಯ ಮರೆಯದೆ ನಮಗೆ ಬ್ಲಾಕ್ ಟೀ ಮತ್ತು ಬಿಸ್ಕತ್ ನೀಡಿದರು, ಅವತ್ತೆ ಬೆಳಿಗ್ಗೆ ಕಾಗೋಡು ತಿಮ್ಮಪ್ಪನವರು ಬಂದು ಹೋಗಿದ್ದರು.
ಇವರ ಸಣ್ಣ ಮಗ ಮೊಹಿಸಿನ್ ಖಾನ್ ಜೊತೆ ಇದ್ದಾರೆ, ಮೊಹಿಸಿನ್ ನನ್ನ ಕ್ಲಾಸ್ ಮೇಟ್ ಕೂಡ ಈಗ ಅವರು ಶುಂಠಿ ಮತ್ತು ಅಡಕೆ ವ್ಯಾಪಾರಿಗಳು, ದೊಡ್ಡ ಮಗ ಮನ್ಜೂರ್ ಖಾನ್ ನಗರಸಭಾ ಸದಸ್ಯರು, ಇನ್ನಿಬ್ಬರು ಮತೀನ್ ಖಾನ್ ಮತ್ತು ಮೆಹರ್ ಖಾನ್.
ಸಾಗರದ ಕಾಂಗ್ರೇಸ್ ಕಚೇರಿ ಗಾಂಧಿ ಮಂದಿರದಲ್ಲಿ ಮೊದಲ ಚುನಾವಣೆಯಿಂದ ಈವರೆಗೂ ಪಕ್ಷಾಂತರ ಮಾಡದ ಏಕೈಕ ವ್ಯಕ್ತಿ ಇವರೊಬ್ಬರೇ.
#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ. ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ. ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ. #ದೀರ್ಘವಾದರೂ_ಪೂರ್ಣ_ಲೇಖನ_ಓದಿ #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ
Comments
Post a Comment