Skip to main content

#ಕಾಗೋಡು ತಿಮ್ಮಪ್ಪ ಕಡು ರಾಜಕೀಯ ವಿರೋದಿಯಾಗಿ ಅವರ ಬಗ್ಗೆ ನನ್ನ ಸಧಭಿಪ್ರಾಯ ಏಕೆ?#

      ಕಾಗೋಡು ಲೋಹಿಯ ಚಿಂತನೆ, ಶಾಂತವೇರಿ ಮೂಸೆಯಲ್ಲಿ, ಕಾಗೋಡು ಹೋರಾಟದ ರೂವಾರಿ ಗಣಪತಿಯಪ್ಪಾರನ್ನ ವಿರೋದಿಸುತ್ತಾ ಸಮಾಜವಾದಿ, ಜನತಾ ಪಕ್ಷದಿಂದ ಮುಂದೆ ಗುಂಡೂರಾಯರ ಪ್ರೇರಣೆಯಿಂದ ಸಾರೆಕೊಪ್ಪದ ಬಂಗಾರಪ್ಪನವರ ವಿರೋಧ ರಾಜಕಾರಣ ಮಾಡಿದವರು, ಅವರ ವಿರುದ್ಧ 1999ರ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೆತರನಾಗಿ ಸ್ಪದಿ೯ಸಿ ಶೇಕಡ 10 ಮತ ಪಡೆದದ್ದರಿಂದ 22 ಕೇಸು, ಗೂಂಡಾ ಕಾಯ್ದೆಯಲ್ಲಿ ಅವರು ನನ್ನನ್ನ ಸಿಲುಕಿಸಿದರೂ ಅವರ ಬಗ್ಗೆ ನನ್ನ ಅಭಿಪ್ರಾಯ ಕೇಳಿ.
ಅವರಿಗೆ ಬಡವರ, ರೈತರ ಬಗ್ಗೆ ನೈಜ ಕಾಳಜಿ ಇದೆ, ಮೂಗಿಗೆ ತುಪ್ಪ ಹಚ್ಚುವ ಬೇರೆ ರಾಜಕಾರಣಿಗಿಂತ ಬೇರೆ, ನಿತ್ಯ ಎಲ್ಲಾ ಪತ್ರಿಕೆ ಸ್ವತಃ ಓದುತ್ತಾರೆ, ಹೊಗಳಿದರೆ ಉಬ್ಬುವುದಿಲ್ಲ, ಮಲೆನಾಡಿನ ರೈತರ ಸಮಸ್ಯೆ ಬೇರೆಯವರಿಗೆ ಅಥ೯ವಾಗುವುದಿಲ್ಲ, ಪರಿಸರ ವಿರೋದಿ ಅಲ್ಲ, ಲಂಚಕ್ಕೆ ಬೆಂಬಲ ಇಲ್ಲ ಆದರೆ ರೈತನನ್ನ ಒಕ್ಕಲೆಬ್ಬಿಸುವುದಕ್ಕೆ ಅವರ ವಿರೋದ ಯಾವತ್ತೂ ಇದೆ.
ಬಂಗಾರಪ್ಪ ಬಗರ್ ಹುಕುಂ ಜಾರಿಗೊಳಿಸಿದಾಗ ರಾಜ್ಯದ ಮೊದಲ ಹಕ್ಕು ಪತ್ರ ನನ್ನ ಊರಲ್ಲಿ ನೀಡಲು ಅವರು ನೀಡಿದ ಪ್ರೊತ್ಸಾಹ ಮರೆಯಲಾರೆ, ಪರಿಶಿಷ್ಟ ಜಾತಿ ಅಲೆಮಾರಿ ಕೊರಮರು, ಕುಂಬಾರರು ಸೇರಿ ಎಲ್ಲಾ ಜಾತಿಯವರಿಗೆ ಹಕ್ಕು ಪತ್ರ ನೀಡಿದೆವು ಇದರಿಂದ ಕಾಗೋಡು ನನಗೆ ಹೊಗಳಿದ್ದರಿಂದ ಬಗಲಿಗಳು ಪಿಟ್ಟಿ೦ಗ್ ಇಟ್ಟು ನನ್ನ ದೂರ ಮಾಡಿದರು ಇವರ ಅಣ್ಣನ ಮಗ ಅಣ್ಣಾಜಿ ಕೂಡ ಕೈ ಜೋಡಿಸಿದರು ಹಾಗಾಗಿ ನನ್ನ ಅವರ ಬದ್ಧ ದ್ವೇಷದ ರಾಜಕಾರಣ ಆಯಿತು.
       ಆದರೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇವರಂತವರು ಬೇಕು ಆದರೆ ಇವರೇ ಕೊನೆಯವರು ಅನ್ನಿಸುತ್ತೆ.
ಸಾಗರದ DFO ಆಗುವವರು ಐ.ಎಪ್.ಎಸ್.ಕೇಡರ್ ಮಾತ್ರ ಆಗಿರ ಬೇಕು ಆದರೆ ಇದಾವುದು ಅಲ್ಲದ ಗಂಗೊಳ್ಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಿದರು ಅವರು ದುರುಪಯೋಗ ಪಡಿಸಿಕೊಂಡರು, ಕೆಲವು ಪತ್ರಕತ೯ರು, ಕಾಗೋಡು ತಿಮ್ಮಪ್ಪರ  ಆಪ್ತರೂ ಗOಗೊಳ್ಳಿಯನ್ನ ಬಹಿರಂಗ ಬೆಂಬಲಿಸಿದರು, ಕಾಗೋಡರೂ ನಂಬಿದರು.

     ಇದರಿಂದನೂ ಕಾಗೋಡರಿಗೆ ಸೋಲಾಯಿತು, ಸ್ವಪಕ್ಷದ ತಾಲ್ಲೂಕ್ ಪಂಚಾಯತನಲ್ಲಿ ಗಂಗೋಳಿ ವಿರುದ್ಧ ಠರಾವು ಮಾಡಿದರೂ ಕಾಗೋರರನ್ನ ಅವರ ಪಕ್ಷದವರು ಹಾದಿ ತಪ್ಪಿಸಿದರು.
ಒಬ್ಬ ರಾಜಕಾರಣಿ ಪ್ರಾಮಾಣಿಕ ಆಗಿದ್ದರೂ ಹಣ, ಪ್ರಭಾವಗಳ ಶಿಷ್ಯ ವ್ಯಂದ ನಾಯಕನ ಹಾದಿ ತಪ್ಪಿಸುವ ನೈಜ ಘಟನೆಗೆ ಕಾಗೋಡು ಉಧಾಹರಣೆ ಆದರು.

    ಏನೇ ಆಗಲಿ ವಯೋವೃದ್ದ ಸಮಾಜವಾದಿ ಸಿದ್ದಾಂತದ ಕಾಗೋಡು ತಿಮ್ಮಪ್ಪರನ್ನ ಗೌರವಿಸಲು ಸಾವಿರಾರು ಕಾರಣ ಇದೆ, ಮೂಡನಂಬಿಕೆ ವಿರೋದಿ, ಹೊಗಳಿಕೆ ಜನರಿಂದ ದೂರ, ಸ್ವತಃ ಕಾನೂನು ತಿಳುವಳಿಕೆ ಇವರಿಗಿದೆ.
     1999 ರಿಂದ ನನಗೂ ಅವರಿಗೂ ರಾಜಕಾರಣ ಸಂಬಂದ ಇಲ್ಲದೆಯೂ ಅವರನ್ನ ಈ ಮೂಲಕ ಶ್ಲಾಘಿಸುತ್ತೇನೆ.

Comments

  1. Dear Arun, you are impartial, objective. It shows your magnanimity. It is not easy to praise a person who is instrumental for personal suffering and pain

    ReplyDelete

Post a Comment

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...