Skip to main content

# ದೇವಗಂಗೆ, ಬಿದನೂರು ನಗರದಲ್ಲಿರುವ ಕೆಳದಿ ಅರಸರ ರಾಜ ಪರಿವಾರದ ಈಜುಕೊಳಗಳ ಸಂಕೀಣ೯ #

# ಬಿದನೂರು ನಗರದ ಈ ಸು೦ದರ ಈಜು ಕೊಳಗಳ ಸಂಕೀಣ೯ಕ್ಕೆ ಒಮ್ಮೆಯಾದರೂ  ಬೇಟಿ ನೀಡಿ.#
ಬಿದನೂರು ನಗರದ ಕೋಟೆಯಿ೦ದ ಕೊಲ್ಲೂರು ಮಾಗ೯ದಲ್ಲಿ 5-6 ಕಿ.ಮಿ. ಸಾಗಿದರೆ ಅಲ್ಲಿ ಬೈಸೆ ಎಂಬ ಹಳ್ಳಿ ಸಿಗುತ್ತದೆ, ಈ ಹಳ್ಳಿಯ ಬಲ ಬಾಗದಲ್ಲಿ ಕೆಳದಿ ಅರಸರ ಶಿಥಿಲ ಸಮಾದಿಗಳು ಇದೆ.
  ಇಲ್ಲೇ ಒಂದು ರಸ್ತೆ ಬಲಕ್ಕೆ ದೇವಗಂಗೆಗೆ ಹೋಗುತ್ತದೆ, ಇಲ್ಲಿಯೇ ಕೆಳದಿ ಅರಸರ ಅದ್ಬುತ ನಿಮಾ೯ಣದ ಈಜು ಕೊಳಗಳ ಸಂಕೀಣ೯ವಿದೆ.
  ಈಗೆಲ್ಲ ನೈಸಗಿ೯ಕ ಈಜುಕೊಳಗಳ ಬಗ್ಗೆ ವಿದೇಶಗಳಲ್ಲಿ ವಿಪರೀತ ಕಯಾಲಿಪ್ರಾರಂಭ ಆಗಿದೆ ಆದರೆ 350 - 400 ವಷ೯ದ ಹಿಂದೆ ಕೆಳದಿ ಅರಸರು ನಿಮಿ೯ಸಿದ ಈ ನೈಸಗಿ೯ಕ ಈಜು ಕೊಳಗಳ ಸಂಕೀಣ೯ ಸಂಶೋದನೆಗೆ ಆಹ೯ವಾಗಿದೆ.
  ವಷ೯ ಪೂತಿ೯ ಈ ಈಜು ಕೊಳದಲ್ಲಿ ಒಂದೇ ಮಟ್ಟದಲ್ಲಿ ನೀರು ಇರುತ್ತದೆ ಮತ್ತು ನೀರು ಸದಾ ಹರಿಯುತ್ತಿರುತ್ತದೆ.
  ದೊಡ್ಡ ಕೊಳ ಸಂಪೂಣ೯ ಶಿಲೆ ಕಲ್ಲಿನಿಂದ ನಿಮಿ೯ಸಿದ್ದಾರೆ, ಇದರ ಮದ್ಯೆ ರಾಣಿ ಪರಿವಾರದವರಿಗಾಗಿ ಕಲ್ಲಿನ ಸುಂದರ ತೊಟ್ಟಿಲು ಅಲ್ಲಿಗೆ ತಲುಪಲು ಕಲ್ಲಿನ ಸಂಕ ಇದೆ.
  ಈಜು ಕೊಳದ ಸುತ್ತಲೂ ಸುಂದರವಾದ ಕಟಾಂಜನ, ಕೊಳಕ್ಕೆ ಇಳಿಯಲು ವಿಶಾಲವಾದ ಪಾವಟಿಗೆಗಳಿದೆ.
ದೊಡ್ಡ ಕೊಳದ ನೀರು ಹರಿಯುವ ದಿಕ್ಕಿನಲ್ಲಿ ವಿವಿಧ ಆಕೃತಿಯ, ಅಳತೆಯ ಮತ್ತು ಆಳದ 7 ಕೊಳಗಳಿದೆ.
  ವಷ೯ ಪೂತಿ೯ ಈ ಕೊಳಗಳಲ್ಲಿ ನೀರು ಹರಿಯುವುದರಿಂದ ಇದರ ನೀರು ಮಲೀನವಾಗುವುದಿಲ್ಲ, ಈ ಕೊಳಕ್ಕೆ ಬೆಟ್ಟದ ಮೇಲಿನ ದೊಡ್ಡಕೆರೆಯಿOದ ನೀರು ಹರಿದು ಬರಲು ಭೂಮಿ ಆಳದಲ್ಲಿ ಹಿತ್ತಾಳೆಯ ಕೊಳವೆ ಮತ್ತು ಕಲ್ಲಿನ ಕೊಳವೆ ಅಳವಡಿಸಿದ್ದಾರೆ.
  ಈಜು ಕೊಳದ ಸ೦ಕಿಣ೯ ನೆಲದಿಂದ  ಸುಮಾರು 15 ಅಡಿ ಆಳದಲ್ಲಿ ನಿಮಿ೯ಸಿರುವುದು ರಾಣಿ ವಾಸದ ಖಾಸಾಗಿ ತನಕ್ಕಾಗಿ, ದೂರದಿಂದ ಈಜು ಕೊಳ ಕಾಣುವುದಿಲ್ಲ.
  ಕೊಳದ ಒಂದು ಭಾಗದಿಂದ ಪಾವಟಿಗೆ ಹತ್ತಿ ಹೋದರೆ ಸುಂದರವಾದ ಈಶ್ವರ ದೇವಸ್ಥಾನ, ಇನ್ನೊಂದು ಬಾಗದ ಪಾವಟಿಗೆ ಹತ್ತಿ ಮೇಲೆ ಹೋದರೆ ಸುಂದರ ಉದ್ಯಾನವನ ಸುತ್ತಲೂ ಕಲ್ಲು ಪಗಾರವಿದೆ.
  ಇದರ ಸುತ್ತಲೂ ನೂರಾರು ಎಕರೆ ದೇಶ, ವಿದೇಶಗಳ ಹಣ್ಣುಗಳ ಸುಂದರ ತೋಟವಿತ್ತಂತೆ ಅದು ಈಗಿಲ್ಲ.
  ಕೆಳದಿ ಅರಸರು ಕೆಲವು ಶತಮಾನದ ಹಿಂದೆ ನಿಮಿ೯ಸಿರುವ ಈಗಲೂ ಹಾಗೇ ಇರುವ ಈ ನೈಸಗಿ೯ಕ ಈಜು ಕೊಳ ಅಧ್ಯಯನ, ಸಂಶೋದನೆಗೆ ಅಹ೯ವಾಗಿದೆ ಈ ಎಲ್ಲಾ ದೃಷ್ಟಿಕೋನದಿಂದ ಬಿದನೂರು ನಗರದ ದೇವಗಂಗೆ ಸಂದಶಿ೯ಸಿದರೆ ನಿಜಕ್ಕೂ ನೀವು ಪುಳಕಿತರಾಗುತ್ತೀರಿ.
  ನನ್ನ ಬಾಲ್ಯದಲ್ಲಿ ಈಜು ಈ ಕೊಳದಲ್ಲೆ ಕಲಿಯುವ ಅವಕಾಶ ದೊರೆತಿದ್ದು ಕೂಡ ನನಗೆ ಸದಾ ದೇವಗಂಗೆಯ ಒಂದು ನೆನಪು.
 

 https://m.facebook.com/story.php?story_fbid=2210591739162358&id=1649190791795481

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...