# ಪ್ರಖ್ಯಾತ ವ್ಯಂಗ್ಯ ಚಿತ್ರಕಾರ ಮತ್ತು ಹೋರಾಟಗಾರ ನಿರ೦ಜನ ಕುಗ್ವೆ.#
ನಾನು ಇವರ ಚಿತ್ರ ಮತ್ತು ಹೋರಾಟಗಳನ್ನ ನೋಡಿ ಇವರ ಅಭಿಮಾನಿ ಆಗಿದ್ದೆ ಆದರೆ ಇವರ ನನ್ನ ಬೇಟಿ ಇವತ್ತಿನವರೆಗೆ ಆಗಿರಲಿಲ್ಲ, ಇವತ್ತು ಸಂಜೆ ಒಂದು ಕೈಯಲ್ಲಿ ಕೆಂಪು ಹೆಲ್ಮೆಟ್ ಹಿಡಿದು ಕೊಂಡು, ಬಗಲಲ್ಲಿ ಚೀಲ ಏರಿಸಿಕೊಂಡು ದಿಡೀರ್ ಆಗಿ ನನ್ನ ಆಪೀಸಿಗೆ ಬಂದು ನನ್ನ ಗುರುತು ಸಿಕ್ಕಿತಾ? ಎಂಬ ಪ್ರಶ್ನೆ ಮಾಡಿದಾಗ ತಕ್ಷಣ ನಿರಂಜನ ಕುಗ್ವೆ ಅಂದೆ.
ಇವರು ಸಾಗರ ತಾಲ್ಲೂಕಿನ ಕುಗ್ವೆಯವರು, ಚಿತ್ರಕಲಾ ಶಿಕ್ಷಕರಾಗಿ ಭದ್ರಾವತಿ ತಾಲ್ಲೂಕ್ನಲ್ಲಿ ಕೆಲಸ ಮಾಡುತ್ತಿದ್ದಾರೆ, ಇತ್ತೀಚಿಗೆ ಇವರ ವ್ಯಂಗ್ಯಚಿತ್ರ ಹವ್ಯಕ ಸಮಾಜದಲ್ಲಿ ಭಾರೀ ಹವಾ ಸೃಷ್ಟಿ ಮಾಡಿತ್ತು, ಇವರ ಸಮಾಜದ ಮಠದಲ್ಲಿನ ಕನ್ಯಾ ಸಂಸ್ಕಾರ ಎಂಬ ಅಪ್ರಾಪ್ತ ಹೆಣ್ಣು ಮಕ್ಕಳ ಲೈಂಗಿಕ ಶೋಷಣೆಯನ್ನ ವಿರೋದಿಸಿ ಇವರು ಬರೆದ ವ್ಯಂಗ್ಯಚಿತ್ರಗಳು ಮಠದವರನ್ನ ಕೆರಳಿಸಿತ್ತು ಹಾಗಾಗಿ ಇವರನ್ನ ಸುಳ್ಳು ದೂರಿನಿಂದ ಪೋಲಿಸ್ ಕೇಸ್, ಜೈಲಿಗೆ ಕಳಿಸಿ ಇವರ ಕೈ ಕಟ್ಟಿ ಹಾಕುವ ಪ್ರಯತ್ನ ನಡೆಸಿದ್ದರು.
ಈ ಸಂದಭ೯ದಲ್ಲಿ ಈ ಹೋರಾಟಗಾರರನ್ನ ಸುಳ್ಳು ದೂರಿನಿಂದ ಜೈಲಿಗೆ ಕಳಿಸುವುದನ್ನ ವಿರೋದಿಸಿದ್ದೆ, ನಂತರ ಇವರು ಇನ್ನೂ ಹೆಚ್ಚು ಚಿತ್ರ ಬರೆದು ಜನಜಾಗೃತಿ ಮಾಡಲು ಪ್ರಾರಂಬಿಸಿದ್ದರಿಂದ ವಿರೋದಿಗಳಿಗೆ ಸಿಂಹ ಸ್ವಪ್ನ ಆಗಿದ್ದಾರೆ.
ಇವರ ಹೋರಾಟಕ್ಕೆ ಈಗ ಹವ್ಯಕ ಸಮಾಜದಲ್ಲೇ ಹೆಚ್ಚು ಬೆಂಬಲ ವ್ಯಕ್ತವಾಗಿದೆ, ಹವ್ಯಕರ ಸ್ವಣ೯ವಲ್ಲಿ ಸ್ವಾಮೀಜಿ ಕೂಡ ವಿಶ್ವ ಹವ್ಯಕ ಸಮ್ಮೇಳನದಿಂದ ದೂರ ಉಳಿದಿದ್ದು ಇವರೆಲ್ಲರ ಹೊರಾಟಕ್ಕೆ ತಿರುವು ಬಂದಿದೆ.
ಇವರ ನನ್ನ ಬೇಟಿಯ ನೆನಪಿಗಾಗಿ ರೈತ ಸಂಘದ ಪ್ರೊ.ನಂಜುOಡ ಸ್ವಾಮಿಯವರ ಬಗ್ಗೆ ಬಂದಿರುವ "ರೈತ ಹೋರಾಟ ಮತ್ತು ಬಾರು ಕೋಲು " ಪುಸ್ತಕ ನೀಡಿದೆ.
ಹಣ, ಅದಿಕಾರ, ಅಂದ ಭಕ್ತರಿಂದ ವಿಷವತು೯ಲದಿಂದ ಸುತ್ತುವರಿದ ಮಠ ಒಂದು ತನ್ನ ಜಾತಿಯ ಹೆಣ್ಣು ಮಕ್ಕಳನ್ನೆ ಅತ್ಯಚಾರ ಮಾಡಿದ್ದನ್ನ, ಲೈಂಗಿಕ ದುರುಪಯೋಗ ಮಾಡಿದ್ದನ್ನ ವಿರೋದಿಸುವುದು ಅಷ್ಟು ಸುಲಭವಲ್ಲ.
ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ) ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ. ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ. ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ. ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ. ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...
ತಮ್ಮಂತ ಮೇರು ವ್ಯಕ್ತಿತ್ವದ ಆದರ್ಶ ವ್ಯಕ್ತಿಗಳು ಈ ಪುಟ್ಟ ಕಲಾವಿದನನ್ನ ಬೆನ್ನು ತಟ್ಟಿ ಪ್ರೋತ್ಸಾಹಿಸುತ್ತಿರುವುದಲ್ಲದೇ ಸಾಮಾಜಿಕ ಕಳಕಳಿಯ ಆಶಯದಲ್ಲಿ ನಾವು ನಡೆಸುತ್ತಿರುವ ಹೋರಾಟಕ್ಕೂ ಬೆಂಬಲ ನೀಡುತ್ತಾ ಬಂದಿರುವಿರಿ...
ReplyDeleteಒಬ್ಬ ಕಲಾವಿದನಿಗಾಗಲೀ ಹೋರಾಟಗಾರರಿಗಾಗಲೀ ಪ್ರೇರಣೆ, ಆತ್ಮ ಬಲ ತುಂಬುವ ತಮ್ಮಂತ ಆತ್ಮ ಬಂಧುಗಳು ಬೆನ್ನಹಿಂದಿರುವಾಗ ಸಾಧನೆಯಲ್ಲಿ ಸಾಪಲ್ಯ ಕಾಣುತ್ತೇವೆಂಬ ವಿಶ್ವಾಸ ಮತ್ತಷ್ಟು ಇಮ್ಮಡಿಗೊಳ್ಳುತ್ತದೆ..
ತಮ್ಮಂತವರ ಒಡನಾಟ ನನಗೆ ಸಿಕ್ಕಿರುವುದು ನನ್ನ ಭಾಗ್ಯ...
ತಮ್ಮ ಆದರ , ಪ್ರೀತಿಗೆ ಬದಲಾಗಿ ಕೃತಜ್ಞತೆಯನ್ನಷ್ಟೇ ಈ ಪುಟ್ಟ ಕಲಾವಿದ ನೀಡಲು ಸಾಧ್ಯ...
ಅನಂತ ಧನ್ಯವಾದಗಳು ಸರ್..
ಶಹಬ್ಬಾಸ್ ಮಾಸ್ಟರ್ ಜೀ
ReplyDelete