# ಅರಸಾಳು ರೈಲು ನಿಲ್ದಾಣ ಇನ್ನು ಮುಂದೆ ಮಾಲ್ಗುಡಿ ರೈಲು ನಿಲ್ದಾಣ #
ಅರಸಾಳು ಎಂಬ ಸಣ್ಣ ಹಳ್ಳಿ ಶಿವಮೊಗ್ಗ ಹೊಸನಗರ ಮಧ್ಯದ ದಟ್ಟ ಅರಣ್ಯದಲ್ಲಿತ್ತು, ಸ್ವಾತಂತ್ರ ಪೂವ೯ದಲ್ಲಿ ಜೋಗ ಜಲಪಾತ ಸಂಪಕಿ೯ಸಲು ರೈಲು ಮಾಗ೯ ನಿಮಾ೯ಣ ಪ್ರಾರಂಭವಾದಾಗ ಅರಸಾಳು ರೈಲು ನಿಲ್ದಾಣದ ಪ್ರಸ್ತಾಪ ಇರಲಿಲ್ಲ.
ರಿಪ್ಪನ್ ಪೇಟೆ ರೈಲು ನಿಲ್ದಾಣ ಪ್ರಸ್ತಾವನೆಯಲ್ಲಿ ಸೇರಿತ್ತು ಅಲ್ಲಿಂದ ಆನಂದಪುರಂ, ಸಾಗರ, ತಾಳಗುಪ್ಪ ರೈಲು ಮಾಗ೯ದ ಯೋಜನೆ ಆಗಿತ್ತು.
ಇದೇ ಸಂದಭ೯ದಲ್ಲಿ ವೈಸ್ ರಾಯ್ ಲಾಡ್೯ ರಿಪ್ಪನ್ ಈ ಮಾಗ೯ದಲ್ಲಿ ಬಂದಾಗ ಈ ಭಾಗದ ಪ್ರಮುಖರೆಲ್ಲ ಸೇರಿ ಸನ್ಮಾನಿಸಿ ಅವರ ಬೇಟಿಯ ಸವಿ ನೆನಪಿಗಾಗಿ ಲಾಡ್೯ ರಿಪ್ಪನ್ ರ ಹೆಸರನ್ನ ಚಿರಸ್ಥಾಯಿಗೊಳಿಸಲು ತಮ್ಮ ಹಳ್ಳಿಗೆ ರಿಪ್ಪನ್ ಪೇಟೆ ಎಂದು ನಾಮಕರಣ ಮಾಡಿಸುತ್ತಾರೆ, ಇದರಿಂದ ಸಂಪ್ರೀತರಾದ ವೈಸ್ ರಾಯರಿಗೆ ತಮ್ಮ ಊರಿಗೆ ಯಾವುದೇ ಕಾರಣಕ್ಕೂ ರೈಲು ಮಾಗ೯ ಹಾಕಬಾರದಾಗಿ ಮನವಿ ಮಾಡುತ್ತಾರೆ ಅದಕ್ಕೆ ಸಕಾರಣವಾಗಿ ರೈಲು ಮಾಗ೯ದಿಂದ ರೈಲು ನಿಲ್ದಾಣ ಆದರೆ ಬರುವ ಪ್ರಯಾಣಿಕರಿಂದ ಪ್ಲೇಗ್ ರೋಗ ಬಂದು ಹರಡುವುದರಿಂದ ಸಾವು ನೋವು ಉಂಟಾಗುತ್ತೆ ಎ೦ದು ವಿನಂತಿಸುತ್ತಾರೆ.
ಈ ರೀತಿ ಮೂಡ ನಂಬಿಕೆ ಲಾಡ್೯ ರಿಪ್ಪನ್ ಗೆ ಇರದಿದ್ದರು ಜನರ ಪ್ರೀತಿಗಾಗಿ ರೈಲು ಮಾಗ೯ ಅರಸಾಳಿನಿಂದಲೇ ಕೆಂಚನಾಲಮಾಗ೯ವಾಗಿ ಆನಂದಪುರಂಗೆ ಸಂಪಕಿ೯ಸುವ ಬದಲಿ ಮಾಗ೯ ನಿಮಿ೯ಸುತ್ತಾರೆ ಹಾಗಾಗಿ ಅರಸಾಳು ರೈಲು ನಿಲ್ದಾಣ ಮಾಡುತ್ತಾರೆ.
ಅರಸಾಳು ಈಗಲೂ ಮೀಸಲು ಅರಣ್ಯದ ಮದ್ಯ ಇದೆ, 1970ರ ದಶಕದಲ್ಲಿ ಖೆಡ್ಡಮಾಡಿ ಪುಂಡು ಆನೆ ಹಿಡಿದಿದ್ದರು, ಬ್ರಿಟಿಷರು ನಿಮಿ೯ಸಿರುವು ಬೃಹತ್ ಸಾಗುವಾನಿ ಪ್ಲಾಂಟೇಶನ್ ಇದೆ, ಅರಣ್ಯ ಅಧಿಕಾರಿಗಳ ಬಿಡದಿ, ಕಚೇರಿಗಳಿದೆ, ಚಚ್೯ ಇದೆ. ಈಗ ಅರಸಾಳು ಗ್ರಾಮ ಪಂಚಾಯಿತಿ ಕೇಂದ್ರವಾಗಿದೆ ಮತ್ತು ಈ ಮಾಗ೯ದ ಪ್ರಮುಖ ಊರಾಗಿದೆ.
ಈ ಊರನ್ನ ಕನ್ನಡದ ಖ್ಯಾತ ನಟ, ನಿದೇ೯ಶಕ ಶಂಕರ್ ನಾಗ್ ಹಿಂದಿ ಮತ್ತು ಇಂಗ್ಲೀಷ್ ನಲ್ಲಿ ಕನ್ನಡಿಗ R.K.ನಾರಾಯಣ್ ರ ಮಾಲ್ಗುಡಿ ಡೇಸ್ ಎಂಬ ಕಥೆಯನ್ನ ದೂರದಶ೯ನಕ್ಕೆ ದಾರಾವಾಹಿ ಮಾಡಿದಾಗ ಚಿತ್ರಿಕರಣಕ್ಕೆ ಬಳಸಿಕೊಂಡಿದ್ದರು.
ಕನ್ನಡದ ನಟ ಸಾವ೯ ಬೌಮ ಡಾ.ರಾಜ್ ಕುಮಾರರ ಅಕಸ್ಮಿಕ ಸಿನಿಮಾ ಕೂಡ ಇಲ್ಲಿ ಚಿತ್ರಿಕರಣ ಮಾಡಿದ್ದರು.
ನಂತರ ಮೀಟರ್ ಗೇಜ್ ರದ್ದು ಮಾಡುವ ಪೂವ೯ದಲ್ಲಿ ಅರಸಾಳು ರೈಲು ನಿಲ್ದಾಣವನ್ನ ರದ್ದು ಮಾಡಿದ್ದರು, ಬ್ರಾಡ್ ಗೇಜ್ ಪರಿವತ೯ನೆಗೆ ರೈಲ್ವೇ ಇಲಾಖೆ ಈ ಮಾಗ೯ ನಷ್ಟ ಅಂತ ರೈಲು ಮಾಗ೯ವನ್ನ ರದ್ದು ಮಾಡಿತ್ತು, ನಂತರ ಜನರ ಹೋರಾಟ ಒತ್ತಾಯಗಳಿಗೂ ರೈಲ್ವೇ ಇಲಾಖೆ ಮಣಿಯಲಿಲ್ಲ ಆಗ ಮುಖ್ಯಮಂತ್ರಿಗಳಾಗಿದ್ದ ನಮ್ಮ ಜಿಲ್ಲೆಯವರೆ ಆದ ಯಡೂರಪ್ಪ ಕೆ-ರೈಡ್ ಯೋಜನೆಯಲ್ಲಿ ರಾಜ್ಯ ಸಕಾ೯ರದ ಸಹಭಾಗಿತ್ವದಲ್ಲಿ ಶಿವಮೊಗ್ಗ ತಾಳಗುಪ್ಪ ಬ್ರಾಡ್ ಗೇಜ್ ಮಾಗ೯ ನಿಮಿ೯ಸಲು ಕಾರಣಕತ೯ರಾದರು.
ಈಗ ಅವರ ಮಗ ರಾಘವೇಂದ್ರ ಸಂಸದರಾಗಿ ಎಲ್ಲಾ ರೈಲು ನಿಲ್ದಾಣಗಳ ಮೇಲ್ದಜೆ೯ಗೇರಿಸುತ್ತಿದ್ದು ಅರಸಾಳು ರೈಲು ನಿಲ್ದಾಣ ಕೂಡ ನವೀಕರಣಗೊಳಿಸಿ ಮಾಲ್ಗುಡಿ ಡೇಸ್ ಸ್ಮರಣಾಥ೯ ಅರಸಾಳು ನಿಲ್ದಾಣ "ಮಾಲ್ಗುಡಿ ಅರಸಾಳು" ಎ೦ದು ಪುನರ್ ನಾಮಕರಣ ಆಗಲಿದೆ.
ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ) ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ. ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ. ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ. ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ. ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...
Comments
Post a Comment