Skip to main content

ಪ್ರಸಕ್ತ ಲೋಕಸಭಾ ಚುನಾವಣೆ ಭಾಗ 2

#ಪ್ರಸಕ್ತ ರಾಜಕಾರಣದ ಒಳಗುಟ್ಟು#
ಲೋಕಸಭಾ ಚುನಾವಣಾ ಅಂಕಣ ಭಾಗ -2.
(ಕೆ.ಆರುಣ್ ಪ್ರಸಾದ್‌)

ಶಿವಮೊಗ್ಗ ಜಿಲ್ಲೆಯ ಕಾಂಗ್ರೇಸ್ ಪಕ್ಷದಲ್ಲಿ ಸಂಘಟನೆ ಯಾಕೆ ಕುಗ್ಗಿದೆ?
  ಒಂದು ಕಾಲದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿದ್ದ ಕಾಂಗ್ರೇಸ್ ಪಕ್ಷದ ಸಂಘಟನೆ ಈಗ ಏಕಿಲ್ಲ ಎಂದು ಪರಿಶೀಲಿಸಿದರೆ ಪರಸ್ಪರ ಕಾಲು ಏಳೆಯುವ, ಕುತಂತ್ರ ಮಾಡುವವರಿಂದ ಪಕ್ಷ ಹೀನಾಯ ಸ್ಥಿತಿಗೆ ತಲುಪಿದೆ.
  ಸಮಥ೯ರನ್ನ, ಅಹ೯ರನ್ನ ಸದಾ ಮೂಲೆಗುಂಪು ಮಾಡಲು ಒಂದು ಗುಂಪು ತಯಾರಾಗಿ ಬಿಡುತ್ತದೆ ಅದನ್ನ ಅಧಿಕಾರ ಇದ್ದವರು ಪೋಷಿಸುತ್ತಾರೆ.
  ಶಿವಮೊಗ್ಗ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾಗಿದ್ದ ತೀ.ನಾ.ಶ್ರೀನಿವಾಸ್ ರನ್ನ ತರಾತುರಿಯಿಂದ  ಕೆಳಗಿಳಿಸಿದರು ಇದಕ್ಕೆ ಯಾವುದೇ ಕಾರಣ ತಿಳಿಸಲಿಲ್ಲ, ಲೋಕ ಸಭಾ ಮಧ್ಯOತರ ಚುನಾವಣೆಯಲ್ಲಿ ಸ್ಪದಿ೯ಸಲು ಅಭ್ಯಥಿ೯ಯೇ ಇಲ್ಲ ಎಂಬ ತೀಮಾ೯ನ ಮಾಡಿಬಿಟ್ಟರು.
  ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯಥಿ೯ ಮಂಜುನಾಥ ಭಂಡಾರಿ ಸ್ಪದಿ೯ಸಿದ್ದಾಗ ಕಾ೦ಗ್ರೇಸ್ ಮುಖಂಡರುಗಳೇ ಜೆಡಿಎಸ್ ಅಭ್ಯಥಿ೯ ಗೀತಾ ಶಿವರಾಜ್ ಕುಮಾರರಿಗೆ ಬೆಂಬಲಿಸಿದ್ದರು.
  ಈಗಿನ ಲೋಕಸಭಾ ಚುನಾವಣಾ ಸಂದಭ೯ದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅದ್ಯಕ್ಷರುಗಳನ್ನ ದಿಡೀರ್ ಆಗಿ ಬದಲಾಯಿಸಿದ್ದು ಅಲ್ಲಿ ಬಿನ್ನಮತಕ್ಕೆ ಕಾರಣ ಆಗಿದೆ.
  ಜಿಲ್ಲೆಯ ಏಕೈಕ ಕಾಂಗ್ರೇಸ್ ಶಾಸಕ ಭದ್ರಾವತಿಯ ಸಂಗಮೇಶರಿಗೆ ಮಂತ್ರಿ ಸ್ಥಾನ ದೊರೆಯದಂತೆ ಮಾಡಿ ಮೂಲೆಗುOಪು ಮಾಡಲಾಗಿದೆ.
  ಮುಖಂಡರುಗಳು ಜಿಲ್ಲಾ ಕೇಂದ್ರದಲ್ಲಿ ಪತ್ರಿಕಾ ಗೋಷ್ಟಿ, ಸಭೆ ಸಮಾರಂಭದಲ್ಲಿ ಮುಖ ತೋರಿಸಿದರೆ, ಕಾಯ೯ಕತ೯ರು ಸೋಷಿಯಲ್ ಮೀಡಿಯಾದಲ್ಲಿ ಮುಖ ತೊರಿಸುತ್ತಾರೆ.
  ಶಿವಮೊಗ್ಗ ಲೋಕ ಸಭಾ ಕ್ಷೇತ್ರದಲ್ಲಿ ಭದ್ರಾವತಿ ವಿಧಾನಸಭಾ ಕ್ಷೇತ್ರ ಬಿಟ್ಟರೆ ಬೇರೆಲ್ಲ ಕ್ಷೇತ್ರಗಳನ್ನ ಕಳದು ಕೊಂಡಿರುವ ಕಾಂಗ್ರೇಸ್ ಪಕ್ಷಕ್ಕೆ 1775 ಬೂತ್ ಗಳಲ್ಲಿ ಸರಿಯಾಗಿ ಸಮಿತಿಗಳನ್ನು ಕೂಡ ರಚಿಸಲಾಗಿಲ್ಲವೆಂದರೆ ಇನ್ನು ಚುನಾವಣೆ ಹೇಗೆ ನಡೆಸ ಬಹುದು?
  ಕಾಯ೯ಕತ೯ರಲ್ಲೂ ತಮ್ಮ ಪಕ್ಷದ ಅಭ್ಯಥಿ೯ ಇಲ್ಲದೇ ಇರುವುದು ಅವರ ಉತ್ಸಾಹಕ್ಕೆ ಭಂಗ ಬಂದಿದೆ, ಸಮ್ಮಿಶ್ರ ಅಭ್ಯಥಿ೯ಯ ಪಕ್ಷ ಒಂದೇ ಒಂದು ವಿಧಾನಸಭಾ ಕ್ಷೇತ್ರದಲ್ಲೂ ಇಲ್ಲದಿರುವುದು, ಅನೇಕ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷದ ಕಚೇರಿಯೂ ಇಲ್ಲದಿರುವುದು ಕಾಂಗ್ರೇಸ್ ಕಾಯ೯ಕತ೯ರಿಗೆ ಹುಮ್ಮಸ್ಸು ತರುತ್ತಿಲ್ಲ.
ಗ್ರಾಮೀಣ ಪ್ರದೇಶ, ಪರಿಶಿಷ್ಟ ಕಾಲೊನಿಗಳಲ್ಲೂ ಮೋದಿ ಹವಾ, ಯುವ ಜನಾಂಗಗಳಲ್ಲಿ ಸಜಿ೯ಕಲ್ ಸ್ಟೈಕ್ ಉOಟು ಮಾಡಿರುವ ಮೊದಿ ಅಲೆ ಜಿಲ್ಲೆಯ ಕಾ೦ಗ್ರೇಸ್ ಕಾಯ೯ಕತ೯ರಿಗೆ ಚುನಾವಣೆ ಕಬ್ಬಿಣದ ಕಡಲೆ ಆಗಿದೆ.
ವಾಸ್ತವಾoಶ ಮರೆಮಾಚಿ ನಾವೇ ಗೆಲ್ಲುತ್ತೇವೆ, ಡಿಕೆ ಶಿವಕುಮಾರ್ ಮ್ಯಾಜಿಕ್ ಮಾಡುತ್ತಾರೆ, ನಮ್ಮದೆ ಸಕಾ೯ರ, ಕೊನೆಯ ದಿನದಲ್ಲಿ ಹಣದ ಶಕ್ತಿ ಎಂತಲ್ಲ ಹೇಳುತ್ತಾರಾದರೂ ಗ್ರಾಮೀಣ ಕಾಂಗ್ರೇಸ್ ಕಾಯ೯ಕತ೯ನಿಗೆ ಇರುವ ಅನುಮಾನ ಅಪನಂಬಿಕೆ ಹಾಗೇ ಉಳಿದು ಬಿಟ್ಟಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...