Skip to main content

ಭಾಗ 3, ಪ್ರಸಕ್ತ ರಾಜಕಾರಣ

#ಪ್ರಸಕ್ತ ರಾಜಕಾರಣದ ಒಳಗುಟ್ಟು#
ಲೋಕಸಭಾ ಚುನಾವಣ ಅOಕಣ ಭಾಗ -3
(ಕೆ.ಅರುಣ್ ಪ್ರಸಾದ್)

ಪಕ್ಷಾಂತರದ ವಿಪಯಾ೯ಸ ಮತ್ತು ಅಪಹಾಸ್ಯ.
 
ಲೋಕ ಸಭಾ ಚುನಾವಣಾ ಅಖಾಡ ನಿನ್ನೆ ಸಮ್ಮಿಶ್ರ ಅಭ್ಯಥಿ೯ ನಾಮಪತ್ರದೊಂದಿಗೆ ಅಧಿಕೃತವಾಯಿತು.
  ಈ ಚುನಾವಣೆಯಲ್ಲಿ ಪಕ್ಷಾ೦ತರ ಪವ೯ ಬೇರೆ ಚುನಾವಣೆಗಿಂತ ಕಡಿಮೆ ಅನ್ನಿಸುತ್ತದೆ.
  ಅಸಲಿಗೆ ಸ್ಪದೆ೯ಯಲ್ಲಿ ಇರುವವರೆಲ್ಲರೂ ಪಕ್ಷಾಂತರ ಮಾಡಿದವರೆ.
  ಬಿಜೆಪಿಯ ಅಭ್ಯಥಿ೯ ರಾಘವೇಂದ್ರ ಬಿಜೆಪಿಯಿ೦ದ ಕೆಜೆಪಿಗೆ ಹೋಗಿ ಅಲ್ಲಿಂದ ಬಂದವರು, ಮದು ಬಂಗಾರಪ್ಪ ಕಾಂಗ್ರೇಸ್, ಕೆಸಿಪಿ, ಬಿಜೆಪಿ, ಸಮಾಜವಾದಿಯಿಂದ ಈಗ ಜೆಡಿಎಸ್.
  ತೀಥ೯ಳ್ಳಿಯಲ್ಲಿ ಮಾಜಿ ಮಂತ್ರಿ ಕಿಮ್ಮನೆಯವರು ಜೆಡಿಎಸ್ ನಿಂದ ಕಾಂಗ್ರೇಸ್ಗೆ ಬಂದವರು, ಮಂಜುನಾಥ ಗೌಡರು ಬಂಗಾರಪ್ಪ, ಜೆ ಹೆಚ್ ಪಟೇಲರ ಪಕ್ಷದಿಂದ ಯಡೂರಪ್ಪರ ಕೆಜೆಪಿಯಿಂದ ಈಗ ಜೆಡಿಎಸ್ ಗೆ ಬಂದಿದ್ದಾರೆ.
ಅಯನೂರು ಮಂಜುನಾಥರವರು ಬಿಜೆಪಿಯಿಂದ ಜನತಾ ಪಕ್ಷ, ಕಾಂಗ್ರೇಸ್ ಸೇರಿ ಈಗ ಬಿಜೆಪಿಯಲ್ಲಿದ್ದಾರೆ.
ಭದ್ರಾವತಿ ಬಲ್ಕೀಶ್ ಬಾನುರವರು ಜನತಾದಳದಿಂದ ಕಾಂಗ್ರೇಸ್ಗೆ ಬಂದಿದ್ದಾರೆ.
  ಮಾಜಿ ಮಂತ್ರಿ ಸಿ.ಎಂ.ಇಬ್ರಾಹಿಂರವರು ಜೆಡಿಎಸ್ ನಿಂದ ಕಾಂಗ್ರೇಸ್ ಗೆ ಬಂದಿದ್ದಾರೆ.
  ಶಿಕಾರಿಪುರದಲ್ಲಿ ಬಳೆಗಾರ್ ಸಮಾಜವಾದಿ ಪಕ್ಷದಿಂದ ಜೆಡಿಎಸ್ ಗೆ , ಗೋಣಿ ಮಾಲ್ತೇಷ್ ಬಂಗಾರಪ್ಪರ ಜೊತೆ ಪಕ್ಷಾ೦ತರ ಮಾಡಿದವರು.
ಸೊರಬದಲ್ಲಿ ಕುಮಾರ್ ಬಂಗಾರಪ್ಪ ಕೆಸಿಪಿ, ಸಮಾಜವಾದಿ, ಕಾಂಗ್ರೇಸ್ ನಿಂದ ಬಿಜೆಪಿಗೆ ಬಂದವರು, ಇದೇ ರೀತಿ ಶಿವಾನಂದಪ್ಪ, ಶ್ರೀಧರ್, ತಬ್ಬಲಿ ಬಂಗಾರಪ್ಪ.
ಸಾಗರದಲ್ಲಿ ಸಮಾಜವಾದಿಯಿಂದ ಜನತಾ ಪಕ್ಷ, ನಂತರ ಕಾಂಗ್ರೇಸ್ ಗೆ ಕಾಗೋಡು ಬಂದಿದ್ದಾರೆ, ಬಿ.ಆರ್.ಜಯ೦ತ ಜನತಾದಳದಿಂದ ಜೆಡಿಎಸ್, ಬಿಜೆಪಿ, ಕೆಜೆಪಿಯಿ೦ದ ಕಾಂಗೇಸ್ ಗೆ ಬಂದಿದ್ದಾರೆ, ತಾಲ್ಲೂಕ ಪಂಚಾಯತ್ ಅದ್ಯಕ್ಷ ಹಕ್ರೆ ಮಲ್ಲಿಕಾಜು೯ನ ಬಂಗಾರಪ್ಪರ ಕೆಸಿಪಿಯಿಂದ ಕಾಂಗ್ರೇಸ್ ಗೆ, ಮಾಜಿ ಎಂಎಲ್ಸಿ ಪ್ರಫುಲ್ಲಾ ಮಧುಕರ್ ಜನತಾ ದಳದಿಂದ ಕಾಂಗ್ರೇಸ್, ಮಾಜಿ ಶಾಸಕ ಎಲ್.ಟಿ. ತಿಮ್ಮಪ್ಪ ಮತ್ತು ಅವರ ಮಗ ತಿಮ್ಮಪ್ಪ ಕಾಂಗ್ರೇಸ್, ಬಿಜೆಪಿ, ಜೆಡಿಎಸ್ ನಿಂದ ಕಾಂಗ್ರೇಸ್ ಗೆ ಬಂದಿದ್ದಾರೆ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಬಿಜೆಪಿ, ಜೆಡಿಎಸ್ ನಿಂದ ಕಾಂಗ್ರೇಸ್ಗೆ ಬಂದಿದ್ದಾರೆ.
ಹೊಸನಗರದ ಮಾಜಿ ಶಾಸಕ ಸ್ವಾಮಿ ರಾವ್ ಸೋಷಿಲಿಸ್ಟ್, ಕ್ರಾಂತಿ ರಂಗ, ಕಾಂಗ್ರೇಸ್ ನಿಂದ ಬಿಜೆಪಿಗೆ ಬಂದಿದ್ದಾರೆ.
  ಈಶ್ವರಪ್ಪ, ಆರಗ ಜ್ಞಾನೇ0ದ್ರರನ್ನ ಹೊರತು ಪಡಿಸಿದರೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪಕ್ಷದ ರಾಜಕಾರಣಿಗಳು ಪಕ್ಷಾ೦ತರ ಮಾಡಿದವರೆ, ಆಯಾ ಪಕ್ಷದ ವೇದಿಕೆಯಲ್ಲಿ ಅವತ್ತಿನ ಅವರ ನಾಯಕರನ್ನ ಹೊಗಳಿದ್ದು, ಆಗ ಅವರಿಗೆ ವಿರೋದ ಪಕ್ಷಆಗಿದ್ದವರನ್ನ ವಾಚಾರಗೋಚರವಾಗಿ ನಿಂದಿಸಿದ್ದು ಎಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಬರುತ್ತಿದೆ ಆದರೆ ಈ ನಾಯಕರು ಈಗ ಬದಲಾಗಿ ತೆಗಳಿದವರಿಗೆ ಹೊಗಳುತ್ತಾ, ಹೊಗಳಿದವರಿಗೆ ತೆಗುಳುತ್ತಾ ಅಪಹಾಸ್ಯಕ್ಕೆ ಈಡಾಗುತ್ತಿರುವುದು ವಿಪಯಾ೯ಸ.
  ಮಂಡ್ಯದಲ್ಲಿ ಉಪ ಚುನಾವಣೆಯಲ್ಲಿ ಕಾಂಗ್ರೇಸ್ ನಿಂದ ಜೆಡಿ ಎಸ್ ಸೇರಿ ಸಂಸದ ರಾಗಿ ಆಯ್ಕೆ ಆಗಿ ಈಗ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರರ ಪರ ಪ್ರಚಾರ ಮಾಡುತ್ತಾ ಅಂಬರೀಶ್ ರನ್ನ ಅವರ ಪತ್ನಿಯನ್ನ ಟೀಕಿಸುತ್ತಿರುವ ಶಿವರಾಮೇ ಗೌಡರು ಉಪ ಚುನಾವಣೆಯಲ್ಲಿ ಅಂಬರೀಶ್ರ ಕಾಲು ಹಿಡಿದು ಬೇಡಿಕೊಂಡ ಪೋಟೋ ಮಂಡ್ಯದಲ್ಲಿ ವೈರಲ್ ಆಗಿದೆ ನೋಡಿ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...