Skip to main content

ಸಾಗರ ತಾಲ್ಲೂಕಿನ ಅರಲುಗೋಡಿನಲ್ಲಿ ಮOಗನ ಕಾಯಿಲೆ ಪೀಡಿತರಿಗೆ ಪರಿಹಾರ ಏನು ?

#ಪ್ರಸಕ್ತ ರಾಜಕಾರಣದ ಒಳಗುಟ್ಟು#
ಲೋಕ ಸಭಾ
ಚುನಾವಣಾ ಅಂಕಣ ಭಾಗ-8
(ಕೆ.ಆರುಣ್ ಪ್ರಸಾದ್)

ಮಲೆನಾಡಿನ ಸಮಸ್ಯೆಗೆ ಸಕಾ೯ರದ ನಿಲ೯ಕ್ಷ.
  ಇವತ್ತು ಮಂಡ್ಯಯದ ಚುನಾವಣೆಯಲ್ಲಿನ ಪ್ರಚಾರದ ಅ೦ತಿಮ ದಿನ ಹೆಚ್ಚು ಚಚೆ೯ ಆದ ವಿಷಯ ಬಸ್ ನಾಲೆಗೆ ಬಿದ್ದು 30 ಜನ ಮೃತರಾದದ್ದು.
  ಮುಖ್ಯಮಂತ್ರಿ ಕುಮಾರ ಸ್ವಾಮಿ ತಾವು ತಕ್ಷಣ ಸ್ಥಳಕ್ಕೆ ಬಂದು ಪರಿಹಾರ ಕಾಮಗಾರಿ ಪರಿಶೀಲಿಸಿ ಮೃತರಾದವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ್ದೆ ಆಗ ಪಕ್ಷೇತರ ಅಭ್ಯಥಿ೯ ಸುಮಲತ ಅಂಬರೀಶ್ ಎಲ್ಲಿದ್ದರು ಅಂತ.
   ಸುಮಲತರ ಸಭೆಯಲ್ಲಿ ಅಂದು ಸಂಜೆ 4ರ ಹೊತ್ತಿಗೆ ಟಿವಿ ಚಾನಲ್ ಗೆ ಪೋನ್ ನಲ್ಲಿ  ಅಂಬರೀಶ್ ಕೆಮ್ಮುತ್ತಾ ಈ ದುರಂತ ನನ್ನ ಎದೆಯಲ್ಲಿ ಉರಿ ಉಂಟು ಮಾಡಿದೆ ಎಂದವರು ರಾತ್ರಿ 9ಕ್ಕೆ ಇಹಲೋಕ ತ್ಯಜಿಸಿದಾಗ ಸುಮಲತ ಹೇಗೆ ಬರಲು ಸಾಧ್ಯ? ಎಂದು ಬಹಿರಂಗ ಚಚೆ೯ ಆಗಿದೆ.
ಶಿವಮೊಗ್ಗ ಲೋಕ ಸಭಾ ಚುನಾವಣಾ ಪ್ರಚಾರಕ್ಕೆ ನಾಳೆ ಮುಖ್ಯಮಂತ್ರಿ ಕುಮಾರ ಸ್ವಾಮಿ ಬರುತ್ತಿದ್ದಾರೆ ಅವರಿಗೆ ಈ ಲೋಕ ಸಭಾ ಕ್ಷೇತ್ರದ ಸಾಗರ  ತಾಲ್ಲೂಕಿನ ಅರಲಗೋಡಿನಲ್ಲಿ 20ಕ್ಕೂ ಹೆಚ್ಚು ಜನ ಮೃತರಾಗಿದ್ದಾರೆ ಅವರಿಗೆ ಏನು ಪರಿಹಾರ ನೀಡಿದೀರಿ? ಉಸ್ತುವಾರಿ ಸಚಿವರ ಜವಾಬ್ದಾರಿ ಏನು? ಅಂತ ಯಾರಾದರು ಪ್ರಶ್ನೆ ಮಾಡುತ್ತಾರಾ?
ಮOಗನ ಕಾಯಿಲೆಯ ಚುಚ್ಚುಮದ್ದು ತಯಾರಿಸುವ ಲ್ಯಾಬ್ ಗೆ 5 ಕೋಟಿ ಬಜೆಟ್ ನಲ್ಲಿ ಮೀಸಲಿರಿಸುವ ಕಥೆ ಹೇಳುತ್ತಾರೆ ಆದರೆ ಮುಖ್ಯಮಂತ್ರಿ ಈ ಪ್ರದೇಶಕ್ಕೆ ಏಕೆ ಬೇಟಿ ನೀಡಿಲ್ಲ? ಉಸ್ತುವಾರಿ ಸಚಿವರು ಯಾಕೆ ಬೇಟಿ ನೀಡುತ್ತಿಲ್ಲ?ಮಂಡ್ಯಕ್ಕೆ ಒಂದು ನೀತಿ, ಶಿವಮೊಗ್ಗಕ್ಕೆ ಒಂದು ನೀತಿಯೇ?
  ಈ ಎಲ್ಲಾ ಪ್ರಶ್ನೆ ಪತ್ರಕತ೯ರು ಕೇಳಬಹುದು, ವಿರೋದ ಪಕ್ಷಗಳು ಸಾವ೯ಜನಿಕವಾಗಿ ಪ್ರಶ್ನೆ ಮಾಡಬಹುದು ಆದರೆ ಪ್ರಜ್ಞಾವಂತ ಶಿವಮೊಗ್ಗ ಜಿಲ್ಲೆಯಲ್ಲಿ ಅಂತಹ ಪ್ರಯತ್ನ ಕಂಡು ಬರುತ್ತಿಲ್ಲ.
  ಕಳೆದ ಉಪ ಚುನಾವಣೆಯಲ್ಲಿ ಸಾಗರ ತಾಲ್ಲೂಕಿನಲ್ಲಿ ಸಮ್ಮಿಶ್ರ ಅಭ್ಯಥಿ೯ಗೆ 6 ಸಾವಿರ ಮತದ ಲೀಡ್ ದೊರಕಿತ್ತು ಆದರೆ ಯಾರೂ ಈ ಭಾಗದ ಸಮಸ್ಯೆಯ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.
ಮುಖ್ಯ ಮಂತ್ರಿ ಕುಮಾರಸ್ವಾಮಿ ಮಂಗನ ಕಾಯಿಲೆ ಪೀಡಿತ ಮೃತರಿಗೆ ಪರಿಹಾರ ಕೊಡಲು ಸಾಧ್ಯವಿಲ್ಲ ನಾಳೆ ವಾಂತಿ ಬೇಧಿ ಆಗಿ ಸತ್ತವರು ಪರಿಹಾರ ಕೇಳುತ್ತಾರೆ ಎಂಬ ಮಾತು ಆಡಿದ್ದು ಕೂಡ ಅವರ ಬಗ್ಗೆ ಭರವಸೆ ಹುಸಿ ಆಗಿದೆ.
  ಮಂಗನ ಕಾಯಿಲೆ ಪೀಡಿತರಿಗೆ ಪರಿಹಾರ, ಪುನವ೯ಸತಿ ಹಾಗಾದರೆ ಯಾರ ಜವಾಬ್ದಾರಿ? ಕೇವಲ ಚುನಾವಣೆಯಲ್ಲಿ ಗೆಲ್ಲುವುದು ಮಾತ್ರಕ್ಕೆ ಮುಖ್ಯ ಮಂತ್ರಿಗಳ ಹೊಣೆಯೆ?
ನಾಳೆ ಜಿಲ್ಲೆಗೆ ಬರುವ ಮುಖ್ಯಮಂತ್ರಿಯನ್ನ ಮಂಗನ ಕಾಯಿಲೆ ಪೀಡಿತ ಅರಳುಗೋಡಿಗೆ ಕರೆತರಲು ಜಿಲ್ಲೆಯ ಮುಖಂಡರಿಗೆ ಸಾಧ್ಯವಿಲ್ಲವೆ? ಇದು ಸ್ಥಳಿಯರ ಪ್ರಶ್ನೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...