# ನನ್ನ ಇವತ್ತಿನ ವಿಶೇಷ ಅತಿಥಿ ಮಾಜಿ ಕಾನೂನು ಸಚಿವ ಹಾಲಿ ರಾಜಾಜಿ ನಗರದ ಶಾಸಕರಾದ ಶ್ರೀ ಸುರೇಶ್ ಕುಮಾರ್#
ಕನಾ೯ಟಕ ರಾಜ್ಯದಲ್ಲಿ ಸಜ್ಜನ ರಾಜಕಾರಣಿ ಅಂತ ಎಲ್ಲಾ ಪಕ್ಷದವರಿಂದ ಕರೆಸಿಕೊಳ್ಳುವ S. ಸುರೇಶ್ ಕುಮಾರ್ ಗೆ ರಾಜ್ಯದಾದ್ಯಂತ ಅಭಿಮಾನಿಗಳಿದ್ದಾರೆ.
ನಾನು ಅವರ ಅಭಿಮಾನಿ, ಪೇಸ್ ಬುಕ್ ನಲ್ಲಿ ಅವರನ್ನ ಹಿಂಬಾಲಿಸುತ್ತೇನೆ, ಅವರ ಯಾವುದೇ ಹೇಳಿಕೆ ಇದ್ದರೂ ತಪ್ಪದೇ ಓದುತ್ತೇನೆ.
ಸರಳ ಜೀವನ, ಆಹಾರ ಉಡುಪುಗಳ ಸುರೇಶ್ ಕುಮಾರ್ ಕೊಡಗಿನ ಹಿಂದಿನ ಚುನಾವಣೆಯಲ್ಲಿ ಸಣ್ಣ ಪಾರಂ ಹೌಸ್ ನ ಕೊಟ್ಟಿಗೆಯಲ್ಲಿ ವಾಸ್ತವ್ಯ ಹೂಡಿದ್ದರು ಅದರ ನಿತ್ಯ posting ನೋಡುತ್ತಿದ್ದೆ, ಇವತ್ತಿನ ರಾಜಕಾರಣಿಗಳು ಕಾರು ಬಾರು, ವಿದೇಶ ಪ್ರಯಾಣ, ಪಂಚತಾರ ಸೇವೆ ಬಯಸುವಾಗ ಇವರು ಸರಳ ಮಾಗ೯ದಲ್ಲಿ ಜೀವನ ಮಾಡುವುದು ಇವತ್ತಿನ ಅಪರೂಪದಲ್ಲಿ ಅಪರೂಪ.
ಇವರಿಗೆ ಡಾಕ್ಟರೇಟ್ ಕೊಡುವುದಾಗಿ ಯಾರೋ ಸಂಪಕಿ೯ಸಿದರು, ಬೇರೆಯವರಾದರೆ ಹಿಂದೆ ಮುಂದೆ ನೋಡದೆ ಹೆಸರಿನ ಮುಂದೆ ಡಾಕ್ಟರ್ ಅಂತ ಹಾಕಿ ಕೊಳ್ಳಲು ಓಡುತ್ತಿದ್ದರು ಆದರೆ ಇವರು ಅದನ್ನ ನಿರಾಕರಿಸಿದ್ದಲ್ಲದೆ ನಕಲಿ ಡಾಕ್ಟರೇಟ್ ನೀಡುವ ಆ ಸಂಸ್ಥೆಯ ಅಸಲಿಯತ್ತು ಬಯಲಿಗೆಳೆದರು.
ಸದನದಲ್ಲಿ ಇವರ ಪಕ್ಷದವರೇ ಬ್ಲೂಪಿಲಂ ವೀಕ್ಷಿಸಿ ಸುದ್ದಿ ಆದಾಗ ಇವರ ಕೋಪ ನೋಡಬೇಕಿತ್ತು, ಅಯೋಗ್ಯ ಕೆಲಸ ಮಾಡಿದ ಮಂತ್ರಿಗಳನ್ನ ಲೆಪ್ಟ್ ರೈಟ್ ಮಾಡಿದ್ದರು, ಜೀವನದಲ್ಲಿ ನಡೆ ನುಡಿ ಮತ್ತು ಆಚರಣೆಯಲ್ಲಿ ಈ ರೀತಿ ಶಿಸ್ತು ಅಳವಡಿಸಿಕೊಂಡಿರುವ ಇಂತವರು ರಾಜಕೀಯ ಪಕ್ಷದಲ್ಲಿ ಇರುವುದೂ ಅಸಾಧ್ಯ ಆದರೆ ಇದ್ದರೂ ಅತ್ಯಂತ ಕಡಿಮೆ ಅದರಲ್ಲಿ ಇವರೊಬ್ಬರು ಮಾತ್ರ.
ಇಂತವರು ಮುಖ್ಯಮಂತ್ರಿ ಆಗ ಬೇಕು ಅಂತ ನಾವೆಲ್ಲ ಅನೇಕ ಬಾರಿ ಚಚಿ೯ಸಿದ್ದೆವು.
ಇವತ್ತು ಇವರು ನನ್ನ ಕಚೇರಿಗೆ ಬಂದಿದ್ದು ನನ್ನ ಆತಿಥ್ಯ ಸ್ವೀಕರಿಸಿದ್ದು ನನಗೆ ಅತ್ಯಂತ ಸಂತೋಷ ಆಯಿತು, ಕಾಫಿ, ಟೀ ಹಾಲು ಸೇರಿಸಿದ್ದು ಇವರಿಗೆ ಆಗಿ ಬರುವುದಿಲ್ಲ, ಲೆಮನ್ ಸೋಡ, ಬ್ಲಾಕ್ ಟೀ ಸೇವಿಸಿದರು.
ವಿಶೇಷ ಅಂದರೆ ಇವರ ಸೋಷಿಯಲ್ ಮೀಡೀಯಾದ ಪೇಸ್ ಬುಕ್, ವಾಟ್ಸ್ಪ್ ಇವರೇ ನಿವ೯ಹಿಸುತ್ತಾರೆ! ಇವತ್ತಿನ ದಿನದ ರಾಜಕಾರಣಿಗಳಲ್ಲಿ ಇಂತವರು ವಿರಳ.
ಇದೆಲ್ಲ ಹೇಳಿದ್ದಕ್ಕೆ ಅವರು ಹೇಳಿದ್ದು ನಾನು ಇನ್ನು ಎಷ್ಟು ದಿನ ರಾಜಕಾರಣ ಮಾಡಬಲ್ಲೆ? ಅಂತ ನನಗೆ ನಾನೇ ಪ್ರಶ್ನೆ ಮಾಡಿಕೊಳ್ಳುತ್ತೇನೆ ಅಂದರು.
ಸ್ವಚ್ಚ, ಸಜ್ಜನ ರಾಜಕಾರಣ ಮಾಡುವ ಇಂತವರು ರಾಜಕಾರಣದಲ್ಲಿ ಯಾವತ್ತೂ ಇರಲಿ, ಮುಂದಿನ ದಿನದಲ್ಲಿ ಕನ್ನಡ ನಾಡಿನ ಮುಖ್ಯಮಂತ್ರಿಯೂ ಆಗಲಿ ಅಂತ ಹಾರೈಸಿದೆ.
#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ. ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ. ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ. #ದೀರ್ಘವಾದರೂ_ಪೂರ್ಣ_ಲೇಖನ_ಓದಿ #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ
Comments
Post a Comment