# ಸಾಗರದ ಪುರಾತನ ಗಣಪತಿ ದೇವಸ್ಥಾನದ ಅಚ೯ಕರ 4 ತಲೆಮಾರುಗಳ ಇತಿಹಾಸ ಈಗ ಪುಸ್ತಕವಾಗಿ# ಎರೆಡು ವಷ೯ದ ಹಿಂದೆ ಸಾಗರದ ಪತ್ರಕತ೯ ಮಿತ್ರ ದೀಪಕ್ ಸಾಗರ್ ಪೋನಾಯಿಸಿ ಪ್ರತಿ 12 ವಷ೯ಕ್ಕೆ ಒಮ್ಮೆ ಪಶ್ಚಿಮ ಘಟ್ಟದಲ್ಲಿ ದೂರದ ನಾಸಿಕ್ ನಿಂದ ಕರಾವಳಿಯ ಮಂಗಳೂರಿನ ಕದ್ರಿಗೆ ತಲುಪುವ "ಬಾರ ಪಂಥ್ " ಯಾತ್ರೆಯ ಬಗ್ಗೆ ನಾನು ಬರೆದ ಲೇಖನ ಯಾವುದೋ ಒಂದು ಪುಸ್ತಕದಲ್ಲಿ ಬಳಸಿಕೊಳ್ಳಬಹುದಾ? ಎಂದು ಕೇಳಿದ್ದರು, ದಾರಾಳವಾಗಿ ಬಳಸಿಕೊಳ್ಳಿ ಎಂದಿದ್ದೆ ಕಾರಣ ಸುಮಾರು 34 ವಷ೯ ಸಿದ್ದಾಪುರದ ಕಮಲಶಿಲೆ ಹತ್ತಿರದ ಹಲವಾರಿ ಮಠದ ಪಟ್ಟದ ಸ್ವಾಮಿಗಳಾಗಿದ್ದ ಸೋಮನಾಥ ಬಾಬರವರು ಈ ಬಾರ ಪಂಥ ಯಾತ್ರೆ ಬಗ್ಗೆ ಹೆಚ್ಚು ಪ್ರಚಾರ ಮತ್ತು ಪ್ರಸಾರ ಮಾಡಲು ನನಗೆ ಆದೇಶಿಸಿದ್ದರು. ನಿನ್ನೆ ಬೆಳಿಗ್ಗೆ ಪತ್ರಕತ೯ರ ದಿನಾಚಾರಣೆಯ೦ದು ದೀಪಕ್ ಸಾಗರ್ ಮತ್ತು ಅವರ ಪತ್ನಿ ಶ್ರೀಮತಿ ಸಹನಾ ಈ ಪುಸ್ತಕ ಗೌರವ ಪ್ರತಿಯಾಗಿ ನೀಡಿದರು. *ಶ್ರೀಮಹಾಗಣಪತಿ ದೇವಾಲಯದ ಇತಿಹಾಸ* ಎಂಬ ಈ ಪ್ರಸ್ತಕ ಸಾಗರದ ಪುರಾತನ ಮಹಾಗಣಪತಿ ದೇವಸ್ಥಾನದ ಪ್ರದಾನ ಅಚ೯ಕ ವಿದ್ವಾನ್ ಪಿ.ಎಲ್.ಗಜಾನನ ಭಟ್ ರ ಪುತ್ರಿ ಶ್ರೀಮತಿ ಸಹನಾ ಸಂಪಾದಿಸಿ ಪ್ರಕಟಿಸಿದ್ದಾರೆ. ಸುಮಾರು ನಾಲ್ಕು ಶತಮಾನದ ಹಿಂದೆ ಕೆಳದಿ ಅರಸರಾದ ವೆಂಕಟಪ್ಪ ನಾಯಕರು (ದೀಘ೯ ಕಾಲ ರಾಜ್ಯ ಬಾರ ಮಾಡಿದ ಅರಸರು) ಈಗಿನ ಸಾಗರ ಪಟ್ಟಣದ ನಿಮಾ೯ತರು (ಸದಾಶಿವ ಸಾಗರ ಆಗಿನ ಹೆಸರು, ಅವರ ಅಜ್ಜ ರಾಜ ಸದಾಶಿವರ ಸ್ಮರಣಾಥ೯) ಗಣಪತಿ ದೇವಾಲಯ ಕೂಡ ಅ