Skip to main content

# ಸೋನಕ್ಕ ಶಾಂತವೇರಿ ಗೋಪಾಲಗೌಡರಿಗೆ ಶ್ರದ್ದಾ೦ಜಲಿಗಳು #

#ಶ್ರೀಮತಿ ಸೋನಕ್ಕ ಶಾಂತವೇರಿ ಗೋಪಾಲಗೌಡರಿಗೆ ಶೃದ್ದಾ0ಜಲಿಗಳು#
 ಸಾಗರದ ಸಮೀಪದ ಕಾಗೋಡಿನಲ್ಲಿ ಪ್ರಾರಂಭವಾದ ಉಳುವವನೆ ಹೊಲದ ಒಡೆಯ ಉದ್ಘೋಷಣೆಯ ಗೇಣಿ ರೈತರ ಹೋರಾಟ ತಾತ್ವಿಕ ಅಂತ್ಯದೆಡೆಗೆ ಒಯ್ದವರು ತೀಥ೯ಹಳ್ಳಿ ಆರಗ ಸಮೀಪದ ಶಾ೦ತವೇರಿಯ ಗೋಪಾಲಗೌಡರು ಈ ಚಳವಳಿಯಲ್ಲಿ ಭಾಗವಹಿಸಿ ಬಂದನಕ್ಕೆ ಒಳಗಾದವರು ಅವತ್ತಿನ ಸಂಸದ್ ಸದಸ್ಯರಾದ ಡಾ.ರಾಮಮನೋಹರ್ ಲೋಹಿಯ ಸಮಾಜವಾದದ ಚಿಂತನೆಯ ಅವರು ಅ೦ದಿನ ಪ್ರದಾನ ಮಂತ್ರಿ ನೆಹರೂರವರ ಚಿಂತನೆಯ ಕಟ್ಟಾ ವಿರೋದಿಗಳು, ಗೋಪಾಲಗೌಡರು ಮತ್ತು ಲೋಹಿಯಾ ಕಾರಣದಿಂದ ಜೆ.ಪಿ., ಮದುಲಿಮೆ ಇನ್ನೂ ಮುಂತಾದ ದೇಶದ ಗಣ್ಯರು ಕಾಗೋಡು ಚಳವಳಿಗೆ ಬೆಂಬಲಿಸಿ ಸಾಗರಕ್ಕೆ ಬಂದಿದ್ದು ಒಂದು ಇತಿಹಾಸ ಮತ್ತು ದಾಖಲೆ, ಈ ಚಳವಳಿ ಪ್ರಾರಂಬಿಸಿದ ಕಾಗೋಡು ಚಳವಳಿಯ ನೇತಾರ ಹೆಚ್.ಗಣಪತಿಯಪ್ಪ ಸ್ಮರಣೀಯರು.
  ಶಾಂತವೇರಿ ಗೋಪಾಲ ಗೌಡರ ಸಮಾಜವಾದಿ ಹೋರಾಟದ ಮೂಸೆಯಲ್ಲಿ ಬಂದವರು, ಬಾಗವಹಿಸಿದವರು ಮತ್ತು ಪ್ರಬಾವಕ್ಕೆ ಒಳಗಾದವರು ಅಸಂಖ್ಯ ಮುಖಂಡರು ಅವರಲ್ಲಿ ಬಂಗಾರಪ್ಪ, ಜೆ.ಹೆಚ್.ಪಟೇಲರು, ಕಾಗೋಡು ತಿಮ್ಮಪ್ಪ, ಕೊಣ0ದೂರು ಲಿಂಗಪ್ಪ, ಸ್ವಾಮಿ ರಾವ್, ಜಾಜ್೯ ಪನಾ೯Oಡಿಸ್, UR ಅನಂತಮೂತಿ೯, ಲಂಕೇಶ್, ತೇಜಸ್ವಿ, ಅಜೀಜ್ ಸೇಠ ಹೀಗೆ ದೊಡ್ಡ ಪಟ್ಟಿ ಆಗುತ್ತದೆ.
  ಸ್ವಾತಂತ್ರ ನಂತರದ ಮೊದಲ ವಿದಾನ ಸಭಾ ಚುನಾವಣೆಯಲ್ಲಿ ಜಾತಿ ( ಒಕ್ಕಲಿಗರು) ಬೆಂಬಲ, ಪಕ್ಷದ ಬೆಂಬಲ ಮತ್ತು ಹಣ ಬೆಂಬಲ ಇಲ್ಲದೆ ಸಾಗರದಿಂದ ಮೊದಲ ಶಾಸಕರಾಗಿ ಸಮಾಜವಾದಿ ಪಕ್ಷದಿಂದ ಗೋಪಾಲಗೌಡರು ಆಯ್ಕೆ ಆಗಿದ್ದು ಒಂದು ಸವ೯ಕಾಲಿಕ ದಾಖಲೆ ಮತ್ತು ಇತಿಹಾಸ.
  ಇವರ ದಮ೯ ಪತ್ನಿ ಸೋನಕ್ಕ ಜೀವನ ಪೂತಿ೯ ನೋವು ಅನುಭವಿಸಿದಾಕೆ ಶಿಕ್ಷಕಿ ಆಗಿ ಅದರ ವೇತನ, ಪಿಂಚಣಿಯಲ್ಲಿ ಜೀವನ ಸಾಗಿಸಿ ಇವತ್ತು ಇಹಲೋಕ ಯಾತ್ರೆ ಮುಗಿಸಿದ್ದಾರೆ, ನಾಳೆ ಅಂತ್ಯ ಸಂಸ್ಕಾರ ಬೆಂಗಳೂರಲ್ಲಿ ನಡೆಯಲಿದೆ.
  ಇಡೀ ಶಿವಮೊಗ್ಗ ಜಿಲ್ಲೆಯ ರಾಜಕಾರಣ, ಹೋರಾಟಗಳಲ್ಲಿ ಚಿರಸ್ಥಾಯಿ ಆಗಿರುವ ಗೋಪಾಲಗೌಡರ ದಮ೯ ಪತ್ನಿ ಸೋನಕ್ಕರಿಗೆ ಇವರ ಪತಿಯ ಹೋರಾಟದಿಂದಲೇ ಗೇಣಿ ರೈತರಾಗಿ ಭೂ ಒಡೆತನ ಪಡೆದ ಶಿವಮೊಗ್ಗ ಜಿಲ್ಲೆಯ ಲಕ್ಷಾ೦ತರ ಗೇಣಿ ರೈತರ ಶ್ರದ್ದಾ೦ಜಲಿ ಮತ್ತು ಅವರ ಆತ್ಮಕ್ಕೆ ಸದ್ಗತಿ ಸ್ವಗ೯ ಪ್ರಾಪ್ತಿಯ ದೇವರ ಪ್ರಾಥ೯ನೆ ಸಲ್ಲಲ್ಪಡಲಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...