# ಸಲೂನ್ ಕೃಷ್ಣ ನನ್ನ ಖಾಯಂ ಹೇರ್ ಡ್ರೆಸರ್ #
ಒಂದು ಕಾಲದಲ್ಲಿ ಈ ವೃತ್ತಿಯವರಲ್ಲಿ ಬಲು ಕಷ್ಟದ ಜೀವನ, ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಮನೆಗೂ ಹೋಗಿ ಎಲ್ಲರ ಕಟಿಂಗ್ ಮಾಡಿ ಸುಗ್ಗಿ ಕಾಲದಲ್ಲಿ ಅವರು ನೀಡುವ ಭತ್ತ, ರಾಗಿ ಕಾಳು ಕಡಿ ಪಡೆಯುವ ವತ೯ನೆ ಹೆಸರಿನ ಪದ್ದತಿ ಇತ್ತು ಅದು ಕೃಷ್ಣನ ಆಜ್ಜನ ಕಾಲಕ್ಕೆ ಮುಗಿಯಿತಾ ಬಂದಿತ್ತು, ನಂತರ ಇವರ ತಂದೆ ಮುನಿಯಣ್ಣ ಅದ೯ ವತ೯ನೆ ಅದ೯ ಸೆಲೂನಿನಲ್ಲಿ ದುಡಿಮೆ ಮಾಡಿದರು.
ಆಗೆಲ್ಲ ವೃತ್ತಿಯ ಬಗ್ಗೆ ಕೀಳರಿಮೆ ಬೆಳೆಸಿಕೊಂಡ ಇವರ ಕುಟುಂಬದಲ್ಲಿ ಅನೇಕರು ಬೇರೆ ವೃತ್ತಿ, ಸಕಾ೯ರಿ ಕೆಲಸಕ್ಕೆ ಸೇರಿದರು, ಬೇರೆ ರಾಜ್ಯದವರು ಬಂದು ಇಲ್ಲೆಲ್ಲ ಭರಪೂರ ದಂದೆ ಮಾಡಲು ಶುರು ಮಾಡಿದ್ದು, ಬ್ಯೂಟಿ ಪಾಲ೯ರ್ ಕಾನ್ಸೆಪ್ಟ್ ಗಳು ಪುನಃ ವಂಶಪಾರಿಖ ವೃತ್ತಿಯನ್ನ ಮುಂದುವರೆಸಲು ಇವರಿಗೆಲ್ಲ ಪ್ರೋತ್ಸಾಹ ನೀಡಿರಬಹುದು.
ಇವರ ಮಗ ಕಾಲೇಜು ಓದುತ್ತಾ ಬಿಡುವಿನಲ್ಲಿ ಸೆಲೂನ್ ಕೆಲಸ ಮಾಡುತ್ತಾನೆ.
ಇವರ ಅಜ್ಜ ದಿವಂಗತ ನಾರಾಯಣಪ್ಪ, ಇವರ ತಂದೆ ದಿ.ಮುನಿಯಣ್ಣ ಈಗ ಮಗ ಕೃಷ್ಣ ಆಗಾಗ ಕೃಷ್ಣ ಇಲ್ಲದಾಗ ಇವರ ಮಗ ನನ್ನ ಕೇಶ ಶೃ೦ಗಾರ ಮಾಡುತ್ತಾನೆ ಹಾಗಾಗಿ ಅವರ ನಾಲ್ಕು ತಲೆಮಾರಿನವರ ಹತ್ತಿರ ನಾನು ವ್ಯವಹರಿಸಿದ್ದೇನೆ.
ಕೃಷ್ಣನ ತಾಯಿಯ ತಂದೆ ನೆಲ್ಲಪ್ಪನವರು ದೂರದ ಕೋಲಾರದ ಆಂದ್ರ ಪ್ರದೇಶದ ಬಾಡ೯ರ್ ನಿಂದ ಬಂದು ನೆಲೆಸಿದವರು, ಬಹಳ ಸಾಹಸಿ ಮತ್ತು ದಯಾಮಯಿ ಅಂತೆ, ಹಾಗೆಯ ಅನ್ಯಾಯದ ವಿರುದ್ದ ಅವರದ್ದೇ ಆದ ಮಾಗ೯ದಲ್ಲಿ ಹೋರಾಟಗಾರರು, ಆನಂದಪುರಂ ಪೇಟೆಯಲ್ಲಿ ಎರಡು ಅಂತಸ್ತಿ ಅತಿ ದೊಡ್ಡ ಕಟ್ಟಡ ಇವರದ್ದೇ ಆಗಿತ್ತು, ಕೃಷಿ ಜಮೀನು ಹೊಂದಿದ್ದರು, ಆಗಿನ ಭೂ ಮಾಲಿಕರು ಮತ್ತು ಸಂಸದರಾಗಿದ್ದ ಬದರಿನಾರಾಯಣ ಅಯ್ಯOಗಾರರ ಕುಟುಂಬದವರು ನೆಲ್ಲಪ್ಪರನ್ನ ಕಂಡರೆ ಭಯ ಪಡುತ್ತಿದ್ದರಂತೆ.
ಈ ನೆಲ್ಲಪ್ಪ ಇಲ್ಲದಿದ್ದರೆ ಅವತ್ತು ಆ ದೊಡ್ಡ ಸಹಾಯ ಮಾಡದಿದ್ದರೆ ನಮ್ಮ ತಂದೆ ಇರುತ್ತಿರಲಿಲ್ಲ, ನಾವು ಹುಟ್ಟುತ್ತಿರಲಿಲ್ಲ ಅವರು ಜೀವದಾನ ಪಡೆದ ಕಥೆ ಕೂಡ ಇದೆ.
ಇವತ್ತು ಕೃಷ್ಣ ಮನೆಗೆ ಬಂದು ಕೇಶ ವಿನ್ಯಾಸ ಮಾಡುವಾಗ ಇದೆಲ್ಲ ನೆನಪಾಯಿತು ಇವರ ಅಜ್ಜ ನೆಲ್ಲಪ್ಪರ ಬಗ್ಗೆ ಮುಂದೆ ಬರೆಯಬೇಕು.
ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ) ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ. ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ. ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ. ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ. ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...
Comments
Post a Comment