Skip to main content

# ಅಹಮದ್ ಆಲೀ ಖಾನ್ ಕಾಂಗ್ರೇಸ್ ಪಾಟಿ೯ ಆದಾರ ಸ್ತ್oಭ #

# ನಮ್ಮ ಹೊಸ ಕಚೇರಿಗೆ ಆಗಮಿಸಿದ ನನ್ನ ನೆಚ್ಚಿನ ನಾಯಕರಾದ ಆಹಮದ್ ಆಲೀ ಖಾನ್ ಸಾಹೇಬರು#
 ಮೊನ್ನೆ 28 ಅಕ್ಟೋಬರ್ ರಂದು ಸಂಜೆ ಖಾನ್ ಸಾಹೇಬರು ಅವರ ಮಗ ಮತ್ತು ನನ್ನ ಕ್ಲಾಸ್ ಮೇಟ್ ಮೋಹಿಸಿನ್ ಆಲೀ ಖಾನ್ ಮತ್ತು ಅವರ ಮೊಮ್ಮಗ ಬಂದಿದ್ದರು.
   ಸಾಗರದ ಆಹಮದ್ ಆಲೀ ಖಾನ್ ಸಾಹೇಬರ ಜೀವನದ ಬಗ್ಗೆ ಬರೆದರೆ ಒಂದು ಸ್ವಾರಸ್ಯಕರವಾದ ಗ್ರ೦ಥವೇ ಆದೀತು, 1978-79ರಲ್ಲಿ ಸಾಗರದ ನಿಮ೯ಲ ಹೈಸ್ಕೂಲ್ ಎದರು ಜನತಾ ಪಕ್ಷದ ಸಾಗರದ ಮಾಜಿ ಶಾಸಕರಾದ ಕಾಗೋಡು ತಿಮ್ಮಪ್ಪ ಜನತಾ ಪಕ್ಷ ತೊರೆದು ಕಾ೦ಗ್ರೇಸ್ ಸೇರುವ ಸಭೆ ಇದೆ ಅಂತ ಸಾವ೯ಜನಿಕ ಪ್ರಕಟನೆ ಕೇಳಿ ಮುನ್ಸಿಪಲ್ ಹೈಸ್ಕೂಲ್ ನ 8ನೇ ತರಗತಿಗೆ ಚಕ್ಕರ್ ಹೊಡೆದು ಈ ಸಭೆ ನೋಡಲು ಹೋಗಿದ್ದೆ, ಅಲ್ಲಿ ಕಾಗೋಡು ಜನತಾ ಪಕ್ಷದವರು ನನ್ನ ಬೆನ್ನಿಗೆ ಚೂರಿ ಹಾಕಿದ್ದಾರೆ ಅಂತ ಭಾಷಣ ಮಾಡಿದ್ದು ಮತ್ತು ಖಾನ್ ಸಾಹೇಬರು ಅವರನ್ನ ಕಾಂಗ್ರೇಸ್ ಗೆ ಸೇರಿಸಿಕೊಂಡ ಕ್ಷಣ ಜನರ ಚಪ್ಪಾಳೆ ಅಭೂತ ಪೂವ೯ ಬೆಂಬಲದ ಕ್ಷಣ ಅವತ್ತು 15 ವಷ೯ ಪ್ರಾಯದ ನನ್ನ ಮೆದುಳಲ್ಲಿ ಅಚ್ಚಳಿಯದೆ ಉಳಿದಿದೆ.
  ಆಗ ದೇಶದ ಪ್ರದಾನಿ ಇಂದಿರಾ ಗಾಂಧಿ ನನ್ನ ಮೂರನೆ ಮಗ ಎನ್ನುತ್ತಿದ್ದ ಮಡಿಕೆರೆಯ ಎಪ್.ಎಂ.ಖಾನ್ ಮತ್ತು ಸಾಗರದ  ಆಹಮದಾಲಿ ಖಾನ್ ಖಾಸಾ ಖಾಸಾ, ಗುಂಡುರಾವ್ ರನ್ನ ಮುಖ್ಯಮಂತ್ರಿ ಮಾಡಿದ್ದರಿಂದ ಸೊರಬದ ಬಂಗಾರಪ್ಪ ದೂರ ಆಗಿದ್ದರು ಆಗ ಸಾಗರದ ಶಾಸಕರು ಕಾ೦ಗ್ರೇಸ್ ನ ಎಲ್.ಟಿ. ತಿಮ್ಮಪ್ಪ ಹೆಗ್ಗಡೆ ಚುನಾವಣೆಯಲ್ಲಿ ಜನತಾ ಪಕ್ಷದ ಕಾಗೋಡು ತಿಮ್ಮಪ್ಪರನ್ನ ಸೋಲಿಸಿದ್ದರು.
  ಬಂಗಾರಪ್ಪರನ್ನ ಕೌ೦ಟರ್ ಮಾಡಲೆಂದೇ  ಕಾಗೋಡರನ್ನ ಕಾಂಗ್ರೆಸ್ ಗೆ ಸೇರಿಸಿ, ವಿಧಾನ ಪರಿಷತ್ ಸದಸ್ಯರನ್ನ ಮಾಡಿ PWD ಮಂತ್ರಿ ಮಾಡುವ ಮೂಲಕ ರಾಜಕಾರಣದ ಗಾಡ್ ಪಾದರ್ ಈ ಆಹಮದ್ ಆಲೀ ಖಾನ್ ಸಾಹೇಬರು ಮತ್ತು ಅವತ್ತಿನ ಸಭೆಯ ಉದ್ದೇಶ ಮತ್ತು ಅದರ ರೂವಾರಿ ಖಾನ್ ಸಾಹೇಬರು.
  ಇದರಿಂದ ಕಾಗೋಡರ ರಾಜಕೀಯ ಜೀವನ, ಶಾಂತವೇರಿ ಗೋಪಾಲ ಗೌಡರ ಸಮಾಜ ವಾದದ ಮೂಸೆಯಿಂದ ಬಂದ ಕಾಗೋಡು ಬಂಗಾರಪ್ಪ ಬದ್ದ ಶತ್ರುಗಳಾಗಿದ್ದು ಇತಿಹಾಸ.
  ಈ ಎಲ್ಲಾ ಕಾರಣದಿಂದ ಖಾನ್ ಸಾಹೇಬರು ವಿದಾನ ಪರಿಷತ್ ಸದಸ್ಯರಾಗಿ ಮಂತ್ರಿಗಳಾಗುವ ಅಹ೯ತೆ ಇದ್ದರೂ ಸಕಾ೯ರದಲ್ಲಿ ನಿಗಮದ ಅಧ್ಯಕ್ಷರೂ ಆಗಿ ಮಾಡದಿದ್ದು ದುರಂತ.
   ಈ ಇಳಿ ವಯಸ್ಸಿನಲ್ಲಿ ಶಿವಮೊಗ್ಗದಿಂದ ಸಾಗರ ತೆರಳುವ ಮಾಗ೯ ಮಧ್ಯದಲ್ಲಿ ಬ೦ದವರನ್ನ ಒತ್ತಾಯದಿಂದ ನನ್ನ ಕುಚಿ೯ಯಲ್ಲಿ ಕೂರಿಸಿ ಶಾಲು ಹೊದಿಸಿ ಸನ್ಮಾನ ಮಾಡಿ ನಾವೆಲ್ಲ ಸಂತೋಷಪಟ್ಟಿವು, ನಿಜಕ್ಕೂ ಈ ಅವಕಾಶ ಪಡೆದ ನಾವು ದನ್ಯರು ನಮ್ಮ ನೂತನ ಉದ್ದಿಮೆಗೆ ಶುಭ ಹಾರೈಸಿದರು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...