Skip to main content

#ಪತ್ರಿಕೋದ್ಯಮದ ದಿಗ್ಗಜ ಶಾಮರಾವ್ ರ ಸಾಗರ ತಾಲ್ಲೂಕಿನ ನಂಟು #

#ಸಂಯುಕ್ತ ಕನಾ೯ಟಕದ ಶಾಮರಾವ್ ರ ಆತ್ಮಚರಿತ್ರೆ ಸಂಜಯ ಉವಾಚದಲ್ಲಿ ಸಾಗರ ತಾಲ್ಲೂಕ್ #
 1. ಕೆಳದಿ ಮಠದ ಹೋರಾಟದಲ್ಲಿ.
ಶಾಮರಾಯರು.
 ಸಂಯುಕ್ತ ಕನಾ೯ಟಕದ ಸಂಪಾದಕರಾದ ಶಾಮರಾಯರೆಂದರೆ ಪತ್ರಿಕೋದ್ಯಮದ ಬೀಷ್ಮರಿದ್ದ೦ತೆ ಅವರು ಪ್ರಾರಂಭದಲ್ಲಿ  ಸಂಜಯ ಎಂಬ ವಾರ ಪತ್ರಿಕೆ ನಡೆಸುತ್ತಿದ್ದರು ಆ ವಾರ ಪತ್ರಿಕೆಗೆ ಸಾಗರ ತಾಲ್ಲೂಕಿನಲ್ಲಿ ಹೆಚ್ಚು ಚಂದಾದರರಿದ್ದರು, ಈ ಪತ್ರಿಕೆ ಸಾಗರ ತಾಲ್ಲೂಕಿನ ಅಡಕೆ ಬೆಳೆಗಾರರು, ಕೆಳದಿ ಮಠ, ಕಾಗೋಡು ಹೋರಾಟದ ಬಗ್ಗೆ ಹೆಚ್ಚು ವರದಿ ಮಾಡಿದ ಖ್ಯಾತಿ ಇದೆ.
  ಶಾಮರಾಯರ ಆತ್ಮಚರಿತ್ರೆ ಅವರ ಶಿಷ್ಯ ಖ್ಯಾತ ಪತ್ರಕತ೯ ವಿಶ್ವೇಶ್ವರ ಭಟ್ಟರು ಬರೆದು ಪ್ರಕಟಿಸಿದ್ದಾರೆ ಅದರ ಹೆಸರು "ಸಂಜಯ ಉವಾಚ ''ಆದರಲ್ಲಿ ಸಾಗರ ತಾಲ್ಲೂಕಿನ ಕೆಲ ನೆನಪು ಘಟನೆ ದಾಖಲಿಸಿದ್ದಾರೆ ಅದನ್ನ ಕೆಲ ಬಾಗಗಳಾಗಿ ಇಲ್ಲಿ ಬರೆದಿದ್ದೇನೆ.
 ಕೆಳದಿ ರಾಜ ಮಠದ ವ್ಯಾಜ್ಯಗಳು ಸ್ವಾತಂತ್ರ ಪೂವ೯ದಿOದಲೂ ಇದೆ, ಮೊನ್ನೆ ದಸರಾದಲ್ಲಿ ಆ ಮಠದ ಪಚ್ಚೆ ಲಿಂಗ ಲಾಕರ್ ನಿಂದ ತಂದು ಪ್ರದಶ೯ನಕ್ಕೆ ಇಡಲಾಗಿತ್ತು.
  ಇದು ಕೆಲ ವ್ಯಾಜ್ಯದಿಂದ ಭಕ್ತರ ದಶ೯ನಕ್ಕೆ ಲಭ್ಯವಿದ್ದಿಲ್ಲ ಹಾಲಿ ಮಠದ ಸ್ವಾಮಿಗಳು ಸಾಗರದ ಶಾಸಕರಾದ ಹಾಲಪ್ಪರಿಗೆ ಮನವಿ ಮಾಡಿದಾಗ ಅವರು ರಾಜ್ಯದ ಮುಖ್ಯಮಂತ್ರಿ ಯಡೂರಪ್ಪರಿಗೆ ವಿನಂತಿಸಿ ಭಕ್ತರ ದಶ೯ನಕ್ಕೆ ಅಪೂವ೯ವಾದ ಕೆಳದಿ ಅರಸರು ನೀಡಿದ ಪಚ್ಚೆ ಲಿಂಗ ಈ ವಷ೯ ಪ್ರದಶ೯ನಕ್ಕೆ ಇಡಲಾಗಿತ್ತು.
  ಈ ಮಠದ ಸ್ವಾಮಿಯವರನ್ನ ಕೆಳಗಿಳಿಸಿ ಬೇರೆಯವರನ್ನ ಪೀಠದಲ್ಲಿ ಕೂರಿಸಲು ಆಗಿನ ಸಾಗರ ಪ್ರಾ೦ತ್ಯದ ವೀರಶೈವ ಸಮಾಜದ ಪ್ರಮುಖರು ಮು೦ದಾಗುತ್ತಾರೆ ಆಗ ಆ ಸ್ವಾಮಿಜಿ ಆಗಿನ ಆಳನಾವರ ಅಡಿಕೆ ಮಂಡಿ ಅಧ್ಯಕ್ಷರು, ಸಾಗರದ ಖ್ಯಾತ  ವಕೀಲರಾದ ಲಕ್ಷ್ಮಿನಾರಾಯಣಪ್ಪರ ಮೊರೆ ಹೋಗುತ್ತಾರೆ (ಮತ್ತಿಕೊಪ್ಪದ ಜಯಪ್ರಕಾಶ್ ರಾಯರ ತಂದೆ ಮತ್ತು ಮತ್ತಿಕೊಪ್ಪದ ಹರನಾಥ ರಾಯರ ದೊಡ್ಡಪ್ಪ ) ಇದರಿಂದ ವೀರಶೈವ ಸಮಾಜದವರಿಗೆ ಆಕ್ರೋಶ ಉoಟಾಗುತ್ತದೆ.
 ಲಕ್ಷ್ಮಿನಾರಾಯಣಪ್ಪರು ಇದಕ್ಕೆ ಜಗ್ಗದೆ ಶಾಮರಾಯರಿಗೆ ವಹಿಸುತ್ತಾರೆ, ಶಾಮರಾಯರು ಆಗಿನ ಅವರ ಪರಿಚಿತ ಸುಪ್ರಸಿದ್ದ ಹೈಕೋಟ್೯ ವಕೀಲರನ್ನ ನೇಮಿಸಿ ತಡೆ ಆದೇಶ ತರುತ್ತಾರೆ ಇದರಿಂದ ಸಾಗರದ ವೀರಶೈವ ಮುಖಂಡರಿಗೆ ಹವ್ಯಕ ಮುಖಂಡರಾದ ಲಕ್ಷ್ಮಿನಾರಾಯಣಪ್ಪರ ಮೇಲೆ ಹೆಚ್ಚು ಕೋಪ ಉoಟಾಯಿತOತೆ ನಂತರ ಸುಪ್ರಿಂ ಕೋಟ್೯ಗೆ ಮೇಲ್ಮನವಿ ಆಗಿ ನಂತರ ರಾಜಿ ಆಯಿತೆಂದು ಬರೆದಿದ್ದಾರೆ.
  ಇದೊಂದು ಅಪೂವ೯ ದಾಖಲೆ ಕೂಡ

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ