Skip to main content

#ಪತ್ರಿಕೋದ್ಯಮದ ದಿಗ್ಗಜ ಶಾಮರಾವ್ ರ ಸಾಗರ ತಾಲ್ಲೂಕಿನ ನಂಟು #

#ಸಂಯುಕ್ತ ಕನಾ೯ಟಕದ ಶಾಮರಾವ್ ರ ಆತ್ಮಚರಿತ್ರೆ ಸಂಜಯ ಉವಾಚದಲ್ಲಿ ಸಾಗರ ತಾಲ್ಲೂಕ್ #
 1. ಕೆಳದಿ ಮಠದ ಹೋರಾಟದಲ್ಲಿ.
ಶಾಮರಾಯರು.
 ಸಂಯುಕ್ತ ಕನಾ೯ಟಕದ ಸಂಪಾದಕರಾದ ಶಾಮರಾಯರೆಂದರೆ ಪತ್ರಿಕೋದ್ಯಮದ ಬೀಷ್ಮರಿದ್ದ೦ತೆ ಅವರು ಪ್ರಾರಂಭದಲ್ಲಿ  ಸಂಜಯ ಎಂಬ ವಾರ ಪತ್ರಿಕೆ ನಡೆಸುತ್ತಿದ್ದರು ಆ ವಾರ ಪತ್ರಿಕೆಗೆ ಸಾಗರ ತಾಲ್ಲೂಕಿನಲ್ಲಿ ಹೆಚ್ಚು ಚಂದಾದರರಿದ್ದರು, ಈ ಪತ್ರಿಕೆ ಸಾಗರ ತಾಲ್ಲೂಕಿನ ಅಡಕೆ ಬೆಳೆಗಾರರು, ಕೆಳದಿ ಮಠ, ಕಾಗೋಡು ಹೋರಾಟದ ಬಗ್ಗೆ ಹೆಚ್ಚು ವರದಿ ಮಾಡಿದ ಖ್ಯಾತಿ ಇದೆ.
  ಶಾಮರಾಯರ ಆತ್ಮಚರಿತ್ರೆ ಅವರ ಶಿಷ್ಯ ಖ್ಯಾತ ಪತ್ರಕತ೯ ವಿಶ್ವೇಶ್ವರ ಭಟ್ಟರು ಬರೆದು ಪ್ರಕಟಿಸಿದ್ದಾರೆ ಅದರ ಹೆಸರು "ಸಂಜಯ ಉವಾಚ ''ಆದರಲ್ಲಿ ಸಾಗರ ತಾಲ್ಲೂಕಿನ ಕೆಲ ನೆನಪು ಘಟನೆ ದಾಖಲಿಸಿದ್ದಾರೆ ಅದನ್ನ ಕೆಲ ಬಾಗಗಳಾಗಿ ಇಲ್ಲಿ ಬರೆದಿದ್ದೇನೆ.
 ಕೆಳದಿ ರಾಜ ಮಠದ ವ್ಯಾಜ್ಯಗಳು ಸ್ವಾತಂತ್ರ ಪೂವ೯ದಿOದಲೂ ಇದೆ, ಮೊನ್ನೆ ದಸರಾದಲ್ಲಿ ಆ ಮಠದ ಪಚ್ಚೆ ಲಿಂಗ ಲಾಕರ್ ನಿಂದ ತಂದು ಪ್ರದಶ೯ನಕ್ಕೆ ಇಡಲಾಗಿತ್ತು.
  ಇದು ಕೆಲ ವ್ಯಾಜ್ಯದಿಂದ ಭಕ್ತರ ದಶ೯ನಕ್ಕೆ ಲಭ್ಯವಿದ್ದಿಲ್ಲ ಹಾಲಿ ಮಠದ ಸ್ವಾಮಿಗಳು ಸಾಗರದ ಶಾಸಕರಾದ ಹಾಲಪ್ಪರಿಗೆ ಮನವಿ ಮಾಡಿದಾಗ ಅವರು ರಾಜ್ಯದ ಮುಖ್ಯಮಂತ್ರಿ ಯಡೂರಪ್ಪರಿಗೆ ವಿನಂತಿಸಿ ಭಕ್ತರ ದಶ೯ನಕ್ಕೆ ಅಪೂವ೯ವಾದ ಕೆಳದಿ ಅರಸರು ನೀಡಿದ ಪಚ್ಚೆ ಲಿಂಗ ಈ ವಷ೯ ಪ್ರದಶ೯ನಕ್ಕೆ ಇಡಲಾಗಿತ್ತು.
  ಈ ಮಠದ ಸ್ವಾಮಿಯವರನ್ನ ಕೆಳಗಿಳಿಸಿ ಬೇರೆಯವರನ್ನ ಪೀಠದಲ್ಲಿ ಕೂರಿಸಲು ಆಗಿನ ಸಾಗರ ಪ್ರಾ೦ತ್ಯದ ವೀರಶೈವ ಸಮಾಜದ ಪ್ರಮುಖರು ಮು೦ದಾಗುತ್ತಾರೆ ಆಗ ಆ ಸ್ವಾಮಿಜಿ ಆಗಿನ ಆಳನಾವರ ಅಡಿಕೆ ಮಂಡಿ ಅಧ್ಯಕ್ಷರು, ಸಾಗರದ ಖ್ಯಾತ  ವಕೀಲರಾದ ಲಕ್ಷ್ಮಿನಾರಾಯಣಪ್ಪರ ಮೊರೆ ಹೋಗುತ್ತಾರೆ (ಮತ್ತಿಕೊಪ್ಪದ ಜಯಪ್ರಕಾಶ್ ರಾಯರ ತಂದೆ ಮತ್ತು ಮತ್ತಿಕೊಪ್ಪದ ಹರನಾಥ ರಾಯರ ದೊಡ್ಡಪ್ಪ ) ಇದರಿಂದ ವೀರಶೈವ ಸಮಾಜದವರಿಗೆ ಆಕ್ರೋಶ ಉoಟಾಗುತ್ತದೆ.
 ಲಕ್ಷ್ಮಿನಾರಾಯಣಪ್ಪರು ಇದಕ್ಕೆ ಜಗ್ಗದೆ ಶಾಮರಾಯರಿಗೆ ವಹಿಸುತ್ತಾರೆ, ಶಾಮರಾಯರು ಆಗಿನ ಅವರ ಪರಿಚಿತ ಸುಪ್ರಸಿದ್ದ ಹೈಕೋಟ್೯ ವಕೀಲರನ್ನ ನೇಮಿಸಿ ತಡೆ ಆದೇಶ ತರುತ್ತಾರೆ ಇದರಿಂದ ಸಾಗರದ ವೀರಶೈವ ಮುಖಂಡರಿಗೆ ಹವ್ಯಕ ಮುಖಂಡರಾದ ಲಕ್ಷ್ಮಿನಾರಾಯಣಪ್ಪರ ಮೇಲೆ ಹೆಚ್ಚು ಕೋಪ ಉoಟಾಯಿತOತೆ ನಂತರ ಸುಪ್ರಿಂ ಕೋಟ್೯ಗೆ ಮೇಲ್ಮನವಿ ಆಗಿ ನಂತರ ರಾಜಿ ಆಯಿತೆಂದು ಬರೆದಿದ್ದಾರೆ.
  ಇದೊಂದು ಅಪೂವ೯ ದಾಖಲೆ ಕೂಡ

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...