Skip to main content

# ಈ ವಷ೯ದ ಅತ್ಯುತ್ತಮ ಚಲನಚಿತ್ರ ಸಕಾ೯ರಿ ಹಿರಿಯ ಪ್ರಾಥಮಿಕ ಶಾಲೆ ಕಾಸರ ಗೋಡು #

#ಸರ್ಕಾರಿಹಿರಿಯಪ್ರಾಥಮಿಕಶಾಲೆಕಾಸರಗೋಡು #
 ಮೊನ್ನೆ ಹುಬ್ಬಳ್ಳಿ, ಶಿಶುನಾಳದಿ೦ದ ವಾಪಾಸು ಹೊರಡುವಾಗ  ರಾತ್ರಿ 8 ಆಗಿತ್ತು, ಊರು ಸೇರಲು 4 ಗಂಟೆ ಅವಧಿ ಬೇಕು, ನಾವು ಪ್ರಯಾಣಕ್ಕೆ ಒಯ್ದಿದ್ದು ರಿಪ್ಪನ್ ಪೇಟೆಯ ಗೆಳೆಯರಾದ ಶಿವಕುಮಾರರ ಹೊಸ ಮಿನಿ ಬಸ್, ಪ್ರಯಾಣದ ಕಾಲಾಹರಣಕ್ಕಾಗಿ ಈ ಸಿನಿಮಾ ಹಾಕಿದ್ದರು.
  ಹಾಸ್ಯ ಮತ್ತು ಮನೋರಂಜನೆಯ ಜೊತೆ ಕಾಸರಗೋಡು ಕನ್ನಡಿಗರ ಸಮಸ್ಯೆಗಳನ್ನ ಈ ಸಿನಿಮಾ ನವಿರಾಗಿ ತೋರಿಸಿದೆ.
 ಇವತ್ತು ಕಾಸರಗೋಡಿನ ಕನ್ನಡ ಹೋರಾಟಗಾರ ಕಾಸರಗೋಡು ಶಿವರಾಂ ಪೋನ್ ಮಾಡಿದಾಗ ಇದೆಲ್ಲ ನೆನಪಾಯಿತು, ಈ ಸಿನೆಮಾ ನೋಡಿದ ಬಗ್ಗೆ ಹೇಳಿದೆ, ಈ ಸಿನಿಮಾದಲ್ಲಿ ದಡ್ಡ ಸತೀಶನ ಪಾತ್ರ ಮಾಡಿದವ ಇವರ ಸಂಬಂಧಿ ಅಂತೆ ಪ್ರಥಮ ಪಿಯು ವಿದ್ಯಾಥಿ೯ ಈಗ ಅಂದರು.
  ಅವರಿಗೆ ಯಾವುದೋ ಮಾಹಿತಿಗಾಗಿ ಪೋನ್ ಮಾಡಿದ್ದರು, ಹಲವು ಬಾರಿ ನಾನು ಕಾಸರಗೋಡಿಗೆ ಹೋಗಿದ್ದೆ. ಅಲ್ಲಿನ ಕನ್ನಡಿಗರು ತಮ್ಮ ಬಾಷೆಗಾಗಿ ಈಗಲೂ ಹೋರಾಟ ಜೀವ೦ತ ಇಟ್ಟಿದ್ದಾರೆ.
 ಹಾಲಿ ಕಾಸರಗೋಡಿನಲ್ಲಿ 183 ಕನ್ನಡ ಶಾಲೆಗಳು ಜೀವ೦ತವಾಗಿದೆ ಎಂದರೆ ಅವರ ಬಾಷಾಭಿಮಾನ ಅಥ೯ವಾಗುತ್ತದೆ, ಅಲ್ಲಿ ಈಗಲೂ ಮನೆ ಮನೆಗಳಲ್ಲಿ ಖಾಸಾಗಿ ಗ್ರಂಥಾಲಯಗಳಿದೆ.
  ಉದಯವಾಣಿ ಪತ್ರಿಕೆ ಇವರಿಗೆಲ್ಲ ಸಂಬಂದ ಸೇತುವಾಗಿದೆ, ಈ ಪತ್ರಿಕೆಯ ಕಾಸರಗೋಡು ಜಿಲ್ಲಾ ಬ್ಯೂರೋ ಚೀಪ್ ಶ್ರೀ ಪ್ರದೀಪ್ ಬೇಕಲ್ ಇಲ್ಲಿನ ಕನ್ನಡ ಹೋರಾಟಗಾರರಿಗೆ ಬೆನ್ನೆಲುಬಾಗಿದ್ದಾರೆ.
  ಕಾಸರಗೋಡು ಜಿಲ್ಲೆಯ ಹೊಸದುಗ೯ ತಾಲ್ಲೂಕ್ ನ ಕಾಂಜನಗಾಡು ನಿತ್ಯಾನಂದ ಆಶ್ರಮ ಕೂಡ ಅನೇಕ ಕನ್ನಡ ಕಾಯ೯ಕ್ರಮಗಳ ಕೇಂದ್ರ.
  ಬೇಕಲ್ ನ ಐತಿಹಾಸಿಕ ಕೋಟೆ ಕೆಳದಿ ಅರಸರು ನಿಮಿ೯ಸಿದ್ದರೂ ಕೇರಳ ಇತಿಹಾಸದಲ್ಲಿ ಟಿಪ್ಪು ಸುಲ್ತಾನ್ ನಿಮಿ೯ಸಿದ್ದಾಗಿ ನಮೂದಾಗಿದ್ದನ್ನ ನ್ಯಾಯಾಲಯದಲ್ಲಿ ದಾಖಲೆ ಸಮೇತವಾದಿಸಿ ಸರಿಪಡಿಸಿದವರು ಈ ಕನ್ನಡಿಗರು.
 ಕೆಳದಿ ರಾಜರ ಕೊನೆಯ ತಂತುಗಳು ಇಲ್ಲಿ ಇದ್ದಾರೆ ಆದರೆ ಅವರು ವೀರಶೈವರಲ್ಲ ಕಾರಣ ಕೆಳದಿಯ ಕೊನೆಯ ಅರಸು ವಿವಾಹ ಆಗುವುದು ರಾಮ ಕ್ಷತ್ರಿಯ ಯುವತಿಯನ್ನ ಅವರಿಗೆ ಸಂತಾನವಿಲ್ಲದ್ದರಿಂದ ಅವರು ದತ್ತು ಪಡೆಯುವುದೂ ರಾಮ ಕ್ಷತ್ರಿಯ ಸಮುದಾಯದಲ್ಲೇ!
  ಗೋವಾದಿಂದ ಪೋಚು೯ಗೀಸ್ ಮತಾಂತರ ವಿರೋದಿಸಿ, ಕೆಳದಿ ಅರಸರಲ್ಲಿ, ವಿಜಯನಗರದ ಅರಸರಲ್ಲಿ ಸೇವೆ ಸಲ್ಲಿಸುವ ಈ ಕ್ಷತ್ರಿಯ ಸಮುದಾಯದ ಇತಿ ಹಾಸವೇ ವಿಶಿಷ್ಟ, ಹೆಚ್ಚಿನವರು ಕನಾ೯ಟಕದ ಕರಾವಳಿಗೆ ಗೋವಾದಿಂದ ಬಂದು ನೆಲೆಸಿದವರು, ಕಾಸರಗೋಡಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
  ಇವರು ಅಯೋಧ್ಯಾ ಮೂಲದ ವೀರ ಯೋಧರಾದ್ದರಿಂದ ಸ್ಥಳಿಯ ಕ್ಷತ್ರಿಯರಿಂದ ಪ್ರತ್ಯೇಕ ಗುರುತಿಗಾಗಿ ರಾಮ ಕ್ಷತ್ರಿಯರು ಅನ್ನುತ್ತಾರೆ, ಇವರ ಸಾಹಸ ಪ್ರವೃತ್ತಿ ಕೂಡ ಕೇರಳದ ಕಾಸರಗೋಡಿನ ಕನ್ನಡ ಚಳವಳಿ ನಿರಂತರವಾಗಿ ಮುಂದುವರಿಯಲು ಒಂದು ಕಾರಣವಾಗಿದೆ.
  ಕನ್ನಡ ಪುಸ್ತಕಗಳನ್ನ ದಾನ ಮಾಡುವವರು ಕಾಸರಗೋಡಿನ ಖಾಸಾಗಿ ಕನ್ನಡ ಗ್ರಂಥಾಲಯಗಳಿಗೆ ನೀಡಿದರೆ ಅದು ನಿಜಕ್ಕೂ ಉಪಯೋಗ ಆಗುತ್ತೆ ಒಂದು ಪ್ರಸ್ತಕ ನೂರಕ್ಕೂ ಹೆಚ್ಚು ಜನ ಓದುತ್ತಾರೆ.
  ಕನ್ನಡ ಪತ್ರಿಕೆಗಳನ್ನ ಉಚಿತವಾಗಿಯೂ ಕಾಸರಗೋಡು ಜಿಲ್ಲೆಗೆ ಕಳಿಸಬಹುದು.
 ಅಲ್ಲಿ ಸಂಪಕಿ೯ಸ ಬಹುದಾದ ಕನ್ನಡ ಹೋರಾಟಗಾರರು ಅನೇಕರಿದ್ದಾರೆ ಅವರನ್ನೆಲ್ಲ ಒಂದುಗೂಡಿಸುವ ಸಂಚಾಲಕ ಮಿತ್ರ  ಶಿವರಾಂ ಕಾಸರಗೋಡು ಇದ್ದಾರೆ ಅವರ ಮೊಬೈಲ್ ನಂಬರ್ 9448572016.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...