Skip to main content

#ಮೆಕ್ಕಾ ಯಾತ್ರೆ ಪುಣ್ಯ ನನಗೆ ಸಿಕ್ಕಿತಾ? #

        ಹಿಂದೂ ದಮ೯ದವನು ಮುಸ್ಲಿ೦ ಗೆಳೆಯರಿಗೆ ಮೆಕ್ಕಾ ಯಾತ್ರೆ ಮಾಡಿಸಬಹುದೆ? ಮುಸ್ಲಿಂ ಗೆಳೆಯ ಈ ರೀತಿ ಮೆಕ್ಕಾ ಯಾತ್ರೆ ಮಾಡಿದರೆ ಹರಾಂ ಅಂತೆ ಅಂತ ಒಂದು ಸುದ್ದಿ ನಮ್ಮ ಊರಲ್ಲಿ ಪ್ರಾರಂಭವಾಗಿತ್ತು.
      ಬಹುಶಃ ಇದು ಅಪರೂಪದ ಪ್ರಕರಣ ಆದ್ದರಿಂದ ಸ್ಥಳೀಯರಿಗೆ ಇದರ ಬಗ್ಗೆ ಸರಿಯಾದ ತಿಳುವಳಿಕೆ ಇರಲಿಲ್ಲ, ಜೊತೆಗೆ ಮತ್ಸರ, ಹೊಟ್ಟೆಕಿಚ್ಚು ಬೇರೆ ಸೇರಿದ್ದರಿಂದ ಮೆಕ್ಕಾ ಯಾತ್ರೆಗೆ ತಯಾರಿ ನಡೆಸಿದವರಿಗೆ ಒಂದು ರೀತಿ ಕಿರಿಕಿರಿ ಆದರೆ, ಮೆಕ್ಕಾ ಯಾತ್ರೆ ಮಾಡಿಸಲು ಹೊರಟ ಹಿಂದೂ ದಮಿ೯ಯನಿಗೆ ಹಿಂದಿನಿಂದ ಹೋಗಿ ಹೋಗಿ ಸಾಬರಿಗೆ ಮೆಕ್ಕಾ ಕಳಿಸಲು ಅವನಿಗೆ ಬುದ್ಧಿ ಇಲ್ಲ ಅಂತ ಕುಹಕ ಬೇರೆ.
      ಇದು ನಾನೂ ಮತ್ತು ನನ್ನ ಹಿರಿಯ ಮಿತ್ರರಾದ ಗನ್ನಿ ಸಾಹೇಬರು 2007 ರಲ್ಲಿ ಅನುಭವಿಸಿದ ಪ್ರಕರಣವಿದು, ಇದಕ್ಕೆ ಒಂದು ಸಕಾರಣ ಇತ್ತು ಮತ್ತು ನಮ್ಮುರ ದೇವಸ್ಥಾನದಲ್ಲಿ ನಾನು ಗನ್ನಿಸಾಬರಿಗೆ ಒಂದು ಮಾತು ಕೊಟ್ಟಿದ್ದೆ.
     2006ರಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರಂ ಹೋಬಳಿಯ ಯಡೇಹಳ್ಳಿ ಎಂಬ ನಮ್ಮ ಊರಲ್ಲಿ ಗಣಪತಿ ದೇವಸ್ಥಾನ ಕಟ್ಟಿಸಿ ಪ್ರತಿಷ್ಟಾಪನೆ ನಡೆಯಿತು, ಅಲ್ಲಿವರೆಗೆ ಇಡಿ ಹೋಬಳಿಯಲ್ಲಿ ಗಣಪತಿ ದೇವಸ್ಥಾನವೇ ಇರಲಿಲ್ಲ, ಯಡೇಹಳ್ಳಿಯಲ್ಲಿ ಎರಡು ಚಚ್೯ ಮತ್ತು ಒಂದು ಮಸೀದಿ ಇತ್ತು, ಗಣಪತಿ ದೇವಸ್ಥಾನದ ದೇವರ ವಿಗ್ರಹ ಕೋಲಾರ ಜಿಲ್ಲೆಯ ಶಿವಾರಪಟ್ಟಣದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತರಿಂದ ಕೃಷ್ಣ ಶಿಲೆಯಲ್ಲಿ ಕೆತ್ತಿಸಿ ತಂದಾಗ ವಿಗ್ರಹವನ್ನ ಯಡೇಹಳ್ಳಿ ವೃತ್ತದಿಂದ ಮೆರವಣಿಗೆಯಲ್ಲಿ ದೇವಸ್ಥಾನದವರೆಗೆ ನಾನು ಗನ್ನಿಸಾಹೇಬರು ಒಟ್ಟಾಗಿ ಹೋದೆವು, ಅಲ್ಲಿ ಕ್ರಿಶ್ಚಿಯನ್ ಅಂದ ಕಲಾವಿದ ಒಲೆಯನ್ ಡಿಸೋಜ ಮತ್ತು ದಲಿತ ಕಲಾವಿದ ಬೋರಯ್ಯ ಸಣ್ಣ ರಸ ಮಂಜರಿ ಕಾಯ೯ಕ್ರಮ ನಡೆಸಿಕೊಟ್ಟರು, ದೇವರ ವಿಗ್ರಹ ಗಭ೯ಗುಡಿಯ ಒಳಕ್ಕೆ ಹೋಗುವಾಗ ಅಚಾನಕ್ಕಾಗಿ ನನ್ನ ಬಾಯಿ೦ದ ಒಂದು ಮಾತು ಹೊರಬಿತ್ತು.
        ಗನ್ನಿ ಸಾಹೇಬರೆ ದೇವರ ಸತ್ಯವಿದ್ದರೆ ಈ ವಷ೯ ನಿಮ್ಮನ್ನ ಮೆಕ್ಕಾ ಯಾತ್ರೆಗೆ ಕಳಿಸುತ್ತೇನೆ, ಹಾಗಾದರೆ ಈ ದೇವಸ್ಥಾನ ಕಟ್ಟಿಸಿದ ಪುಣ್ಯ ಗ್ಯಾರಂಟಿ ನನಗೆ ತಲುಪಿದಂತೆ ಆಗುತ್ತೆ ಅಂದೆ ಅದಕ್ಕೆ ಪ್ರತ್ಯುತ್ತರವಾಗಿ ಅವರು ಗ್ಯಾರಂಟಿ ಆಗೇ ಆಗುತ್ತೆ ಅಂತ ಕೈ ಮುಗಿದರು.
        ಅದರಂತೆ ಗನ್ನಿ ಸಾಹೇಬರು ಮೆಕ್ಕಾ ಯಾತ್ರೆಗೆ ಅಜಿ೯ ಸಲ್ಲಿಸಿದಾಗ ಸಕಾ೯ರದಿಂದ ಆಯ್ಕೆ ಆದರು ಅದಕ್ಕೆ ನಿಗದಿ ಮಾಡಿದ ಹಣ ನಾನು ಡಿ.ಡಿ.ಮೂಲಕ ಪಾವತಿ ಮಾಡಿದೆ, ಅವರು ತಮ್ಮ ದಮ೯ದ ಪವಿತ್ರ ಯಾತ್ರೆಗೆ ತಯಾರಿ ನಡೆಸಿದರು ಅಷ್ಟರಲ್ಲೆ ಈ ಅನುಮಾನದ ಅಪವಾದ ಶುರುವಾಯಿತು.
         ನಮ್ಮಿಬ್ಬರ ಉತ್ಸಾಹಕ್ಕೆ ಒಂದು ರೀತಿ ತಣ್ಣಿೀರು ಎರಚಿದ೦ತೆ ಆಯಿತು, ಗನ್ನಿ ಸಾಹೇಬರು ಯಾರು ಏನೇ ಹೇಳಿದರೂ ನಾನು ಮೆಕ್ಕಾ ಯಾತ್ರೆ ಮಾಡ್ತಿನಿ ಅಂದರಾದರೂ ನನಗೂ೦ದು ಅಳಕು ಇತ್ತು. ಅನ್ಯ ದಮ೯ದವರ ಹಣದಲ್ಲಿ ಮುಸ್ಲಿಂರು ಮೆಕ್ಕಾ ಯಾತ್ರೆ ಮಾಡಿದರೆ ಹರಾಂ ಆಗುವುದಾದರೆ ಸರಿ ಅಲ್ಲ ಅಂತ ಅನ್ನಿಸುತ್ತಿತ್ತು.
       ಅವರ ಸಂಬಂದಿ ಕೆಲ ಯುವಕರು ಗನ್ನಿಸಾಹೇಬರನ್ನ ಹಿಂದಿನಿಂದ ಅವರ ಸಂಬಂದಿ ಗೆಳೆಯರ ಎದುರು ಹಿಯಾಳಿಸುತ್ತಿದ್ದರು ಇದೇ ಸಂದಭ೯ದಲ್ಲಿ ಉತ್ತರ ಪ್ರದೇಶದ ಮೌಲ್ವಿಗಳು ಆನಂದಪುರಂನ ಮಸೀದಿಗೆ ಬಂದರು ಆ ದಿನ ಶುಕ್ರವಾರದ ನಮಾಜು ಬೇರೆ, ನಮಾಜು ಮುಗಿದ ನಂತರ ಈ ಜಿಜ್ಞಾಸೆಗೆ ಉತ್ತರ ಅವರಿ೦ದ ಕೇಳಿದರು, ಅನೇಕ ಗನ್ನಿ ಸಾಹೇಬರ ಆಪ್ತರಿಗೆ ಮತ್ತು ಕೆಲ ಕುಹಕಿಗಳಿಗೆ ಏನು ಉತ್ತರ ಬರಬಹುದು ಅಂತ ಕುತೂಹಲವಿತ್ತು.
          ಮುಸ್ಲಿ೦ ಪಂಡಿತರು ಈ ಬಗ್ಗೆ ಇರುವ ಪತ್ವಾ ಏನಂತ ತಿಳಿಸಿದರು ಅದೇನೆಂದರೆ  "ಯಾರೇ, ಯಾವ ದಮ೯, ಯಾವುದೇ ಜಾತಿ, ಯಾವ ದೇಶದವರೂ  ಮುಸ್ಲಿಂ ದಮ೯ದವರನ್ನ ಮಾತ್ರ ಮೆಕ್ಕಾ ಯಾತ್ರೆಗೆ ಕಳಿಸಬಹುದು, ಇದು ಅವರ ನೆರವಿಂದ ಹೋದವರಿಗೆ ಹರಾಂ ಅಲ್ಲ ಮತ್ತು ಮೆಕ್ಕಾ ಯಾತ್ರೆ ಮಾಡಿಸಿದವರಿಗೆ ಹೋದವರಿಗಿಂತ ಡಬಲ್ ಪುಣ್ಯ ಅಂತ ಅಂದರು" ನಮ್ಮ ಗನ್ನಿ ಸಾಹೇಬರಿಗೆ ಇದರಿಂದ ತುಂಬಾ ನಿರಾಳವಾಯಿತು, ನನಗೂ ಸಂತೋಷವಾಯಿತು.
        ನಮ್ಮ ಶ್ರೀವರ ಸಿದ್ಧಿವಿನಾಯಕ ದೇವಾಲಯದಲ್ಲಿ ಗನ್ನಿ ಸಾಹೇಬರಿಗೆ  ಅಭಿನಂದನಾ ಸಮಾರಂಭ ಇಟ್ಟುಕೊಂಡಿದ್ದೆವು ಸಾಗರದಿಂದ ತೀನಾ.ಶ್ರೀನಿವಾಸ, ಕೋಯಾ ಸಾಹೇಬರು, ಪುತ್ತೂರಾಯರು, ನಾರಾಯಣ್ ರಾವ್, ಅಮೃತ್ ರಾಸ್ ಎಲ್ಲಾ ಬಂದಿದ್ದರು.
      ಊರ ದೇವಸ್ಥಾನ ಕಟ್ಟಿಸಿದ್ದು ನಮ್ಮ ಹೆತ್ತವವರ ಪುಣ್ಯದಿಂದ ಅಂತ ಬಾವಿಸಿದ್ದೇನೆ ಅದೇ ರೀತಿ ಗನ್ನಿ ಸಾಹೇಬರಿಗೆ ಮೆಕ್ಕಾ ಯಾತ್ರೆ ಮಾಡಿಸಿದ್ದು ಕೂಡ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ