Skip to main content

#ರಾಜಕಾರಣದ ಹೊಸ ಪ್ರಯೋಗ ಸೋತ ಕಾಗೋಡು ಕೈ ಹಿಡಿದು ಗೌರವಿಸುವ ಗೆದ್ದ ಹರತಾಳು ಹಾಲಪ್ಪ#

#ಹರತಾಳುಕಾಗೋಡು ಜುಗಲ್ಬ೦ದಿ, ಹಾಲಪ್ಪರ ಜಾಣ ನಡೆ ಹತಾಷ ಕಾ೦ಗ್ರೇಸ್ ಕಾಯ೯ಕತ೯ರು#
  ಇಡೀ ರಾಜ್ಯದಲ್ಲೇ ಬಹುಶಃ ವಿಧಾನ ಸಭೆಗೆ ಪರಸ್ಪರ ಸ್ಪದಿ೯ಸಿದ ಸೋತವರೂ ಗೆದ್ದವರೂ ಈ ರೀತಿ ಸಾಮರಸ್ಯದಲ್ಲಿ ಇರುವುದು ಶಿವಮೊಗ್ಗ ಜಿಲ್ಲೆಯ ಸಾಗರ ವಿಧಾನ ಸಭಾ ಕ್ಷೇತ್ರದಲ್ಲಿ ಮಾತ್ರ ಅಂತ ನನ್ನ ಅಂದಾಜು.
  ಸೊರಬದಲ್ಲಿ ಕುಮಾರ್ ಮತ್ತು ಮದು, ತೀಥ೯ಹಳ್ಳಿಯಲ್ಲಿ ಜ್ಞಾನೆಂದ್ರ ಮತ್ತು ಕಿಮ್ಮನೆ, ಭದ್ರಾವತಿಯಲ್ಲಿ ಸಂಗಮೇಶ್ ಮತ್ತು ಅಪ್ಪಾಜಿಗೌಡರು, ಶಿವಮೊಗ್ಗದಲ್ಲಿ ಈಶ್ವರಪ್ಪ ಮತ್ತು ಪ್ರಸನ್ನ ಕುಮಾರ್,  ಶಿಕಾರಿಪುರದಲ್ಲಿ ಯಡೂರಪ್ಪ ಮತ್ತು ಗೋಣಿ ಮಾಲ್ತೇಶ್, ಶಿವಮೊಗ್ಗ ಗ್ರಾಮಾಂತರದಲ್ಲಿ ಅಶೋಕ ನಾಯಕ ಮತ್ತು ಶಾರದಾ ಪೂಯ೯ ನಾಯಕ್ ರ ಜಟಾಪಟಿ ಮತ್ತು ಆಯಾ ಪಕ್ಷದ ಕಾಯ೯ಕತ೯ರು ಹಾವು ಮುಂಗುಸಿಯ೦ತೆ ಇದ್ದಾರೆ.
  ಆದರೆ ಸಾಗರದ ಶಾಸಕರಾಗಿರುವ ಹರತಾಳು ಹಾಲಪ್ಪ ತಾವು ಸೋಲಿಸಿದ ಕಾಂಗ್ರೇಸ್ ನ ಮಂತ್ರಿ ಕಾಗೋಡು ತಿಮ್ಮಪ್ಪ ರ ಜೊತೆ ಗೆಳೆತನ ಬೆಳೆಸಿದ್ದಾರೆ, ಪರಸ್ಪರ ವೇದಿಕೆಯಲ್ಲಿ ಅವರವರ ಪಕ್ಷದ ಹಿತ ಕಾಪಾಡುವ ಮಾತು ವತ೯ನೆ ಕಡಿಮೆ ಏನು ಆಗಿಲ್ಲ.
  ಮತದಾರರಿಗೆ ಇವರಿಬ್ಬರ ಈ ಸಂಬಂದ ಆದಶ೯ವಾಗಿ ಕಂಡು ಬಂದರೂ ಬಿಜೆಪಿ ಮತ್ತು ಕಾಂಗ್ರೇಸ್ ಕಾಯ೯ಕತ೯ರಿಗೆ ಇದು ಬಿಸಿ ತುಪ್ಪ ಆಗಿದೆ ನುOಗಲು ಆಗುತ್ತಿಲ್ಲ ಉಗಳಲು ಸಾಧ್ಯವಿಲ್ಲ.
   ಹಾಲಿ ಶಾಸಕರಾದ ಹಾಲಪ್ಪರಿಗೆ ಇದರಿಂದ ಲಾಭವೇ ಹೊರತು ನಷ್ಟವಿಲ್ಲ ಆದರೆ ಕಾಗೋಡರ ಕಾಂಗ್ರೇಸ್ ಪಕ್ಷಕ್ಕೆ ನಷ್ಟವಲ್ಲದೆ ಬೇರೆ ಏನೂ ಇಲ್ಲ ಹಾಗ೦ತ ವೈಯಕ್ತಿಕವಾಗಿ ಕಾಗೋಡರಿಗೆ ಸೋತರು ತಾಲ್ಲೂಕ್ ಆಡಳಿತ ವಗ೯ದಿಂದ ಗೌರವ ಮತ್ತು ಅವರ ಮಾತಿಗೆ ಘನತೆ ಶಾಸಕ ಹಾಲಪ್ಪರಿಂದ ಲಭಿಸಿದೆ.
   ಕಾಂಗ್ರೇಸ್ ಪಕ್ಷ ಸಂಘಟನೆಗಾಗಿ ತಾಲ್ಲೂಕಿನ ಶಾಸಕರನ್ನ ಟೀಕಿಸುವ ಶಕ್ತಿ ಆ ಪಕ್ಷದ ಮುಖಂಡರು ಕಳೆದುಕೊಂಡಿರುವುದು ರಹಸ್ಯವಾಗಿಲ್ಲ ಅಲ್ಲಲ್ಲಿ ಕಾಗೋಡರ ಈ ವತ೯ನೆಗೆ ಕಾಯ೯ಕತ೯ರು ಚಚಿ೯ಸುತ್ತಾರಾದರೂ ಕಾಗೋಡರನ್ನ ಅವರ ಇಷ್ಟಕ್ಕೆ ತಕ್ಕ೦ತೆ ಬದಲಿಸಲು ಸಾಧ್ಯವಿಲ್ಲವಾದ್ದರಿಂದ ಹತಾಶರಾಗಿದ್ದಾರೆ.
  ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಈ ತಂತ್ರಗಾರಿಕೆ ಒಂದು ಕಾಲದ ಅವರ ಶ್ರೀಷ್ಯ ಹಾಲಪ್ಪ ಸಾಗರದಲ್ಲಿ ಅವರ ಎದುರಾಳಿ ಕಾಗೋಡರ ಮೇಲೆಯೆ ಪ್ರಯೋಗಿಸಿ ಯಶಸ್ವಿ ಆಗಿದ್ದಾರೆ, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಹಾಲಪ್ಪನವರು ದಿಡೀರ್ ಆಗಿ ಬೇಳೂರು ಗೋಪಾಲಕೃಷ್ಣರನ್ನ ಕಾಗೋಡು ಅಪ್ಪಿಕೊಂಡಿದ್ದರಿಂದ ಸುಪ್ತವಾಗಿ ಬೇಸರಗೊಂಡಿದ್ದ ಸ್ಥಳಿಯ ಕಾಂಗ್ರೇಸ್ ಮುಖಂಡರು ಮತ್ತು ಪ್ರಮುಖ ಕಾಯ೯ಕತ೯ರನ್ನ ವೈಯಕ್ತಿಕವಾಗಿ ಬೇಟಿ ಮಾಡಿ ಸಹಕಾರ ಯಾಚಿಸಿದ್ದು ಕಾಗೋಡರನ್ನ ಸುಲಭವಾಗಿ ಸೋಲಿಸಲು ಸಾಧ್ಯವಾಗಿತ್ತು ಈಗ ಸಾವ೯ಜನಿಕವಾಗಿ ಇವರು ಹೆಚ್ಚು ಹೆಚ್ಚು ಕಾಗೋಡು ಸಖ್ಯ ಪ್ರದಶ೯ನದಿಂದ ಮುಂದಿನ ದಿನಗಳಲ್ಲಿ ಬರುವ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಹೆಚ್ಚು ಬಿಜೆಪಿ ಅಭ್ಯಥಿ೯ ಗೆಲ್ಲಿಸಿಕೊಂಡು ಬರುವ ಸುಲಭ ದಾರಿ ಕಂಡು ಹಿಡಿದಿದ್ದಾರೆ ಅಲ್ಲದೆ ಮುಂದಿನ ದಿನದಲ್ಲಿ ಸಾಗರ ವಿಧಾನ ಸಭಾ ಕ್ಷೇತ್ರದಲ್ಲಿ ಹೆಚ್ಚು ವಿರೋದಿಗಳು ಇಲ್ಲದಂತೆ ಮಾಡಿ ಕೊಂಡು ಮುಂದಿನ ಅವರ ಗೆಲುವಿಗೂ ಅವಕಾಶ ಮಾಡಿಕೊಳ್ಳುತ್ತಿದ್ದಾರೆ.
  ಈ ಮಧ್ಯೆ ಹಾಲಪ್ಪ ನಡೆ ನುಡಿಯಲ್ಲಿ ಪ್ರಬುದ್ಧತೆ ಕಂಡು ಬರುತ್ತಿರುವುದು ಕೂಡ ಅವರು ಬದಲಾಗಿರುವುದು ತೋರಿಸುತ್ತಿದೆ, ದ್ವೇಷದ ರಾಜಕಾರಣ ಮಾಡದೆ ವಿರೋದಿಗಳಿಗೂ ಸಹಾಯ ಮಾಡುವುದು, ಕಾಂಗ್ರೇಸ್ ಬೆಂಬಲಿಸುವ ಗುತ್ತಿಗೆದಾರರಿಗೂ ಕೆಲಸ ನೀಡುತ್ತಿದ್ದಾರೆ, ಕ್ಷೇತ್ರದಲ್ಲಿ ಆಗಬೇಕಾದ ಕೆಲಸಕ್ಕೆ ಆದ್ಯತೆ ನೀಡಿ ಹಣ ಮಂಜೂರು ಮಾಡಿಸಿ ಅನೂಷ್ಟಾನಗೊಳಿಸುತ್ತಿರುವುದು ಕೆಲಸಗಾರ ಕಾಗೋಡರ ಸೋಲಿನಿಂದ ಸಾಗರದಲ್ಲಿ ಅಭಿವೃದ್ಧಿ ನಿಂತಿದೆ ಎಂಬ ಬಾವನೆ ಬರದಂತಾಗಿದೆ.
  ಮತದಾರರಿಗೆ ಕಾಗೋಡು ಸೋತ ನೋವು ಆಗದಂತೆ ಗೆದ್ದ ಹಾಲಪ್ಪನವರು ನಡೆನುಡಿಯಿ೦ದ ಕ್ಷೇತ್ರದಲ್ಲಿ ಅಜಾತ ಶತ್ರು ಆಗುತ್ತಿದ್ದಾರೆ.
  ಇದು ರಾಜಕಾರಣಿಗಳ ಸಾವ೯ಜನಿಕ ಜೀವನಕ್ಕೆ ಮಾದರಿ ಕೂಡ, ಕಾಗೋಡು ಹರತಾಳರ ಜುಗಲ್ಬಂದಿ ಹೀಗೆ ಮುಂದುವರಿಯಲಿ ಎಂದು ಹಾರೈಸೋಣ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...