Skip to main content

#ರಾಷ್ಟ್ರಿಯ ಸಂತ ಜಂಗಲ್ ವಾಲೆ ಬಾಬರು ನಮ್ಮಲ್ಲಿ ತಂಗಿದ್ದರು #

#ಜಂಗಲ್ ವಾಲೆ ಬಾಬ ಎಂದು ಪ್ರಖ್ಯಾತರಾಗಿದ್ದ ಜೈನ ಮುನಿ ರಾಷ್ಟ್ರ ಸಂತ 108 ಶ್ರೀ ಚಿನ್ಮಯ ಸಾಗರ ಮಹಾರಾಜರು ಅತ್ಯಂತ ಸಣ್ಣ ವಯಸ್ಸಿನಲ್ಲಿ ಸಲ್ಲೇಖನ ವೃತ (ಕೇವಲ ನೀರು ಮಾತ್ರ ಸೇವನೆ) ಕೈಗೊಂಡು ನಿನ್ನೆ ಶನಿವಾರದಿಂದ (12 ಅಕ್ಟೋಬರ್ 2019) ದಿಂದ ಯಮ ಸಲ್ಲೇಖನ ವೃತ ಅಂದರೆ ನೀರು ಸ್ವೀಕರಿಸದೆ ದೇಹ ತ್ಯಾಗಕ್ಕೆ ಮುಂದಾಗಿ ದೇಹ ತ್ಯಾಗ ಮಾಡಿದ್ದಾರೆ#.
  ಇಂತಹ ಪುಣ್ಯಪುರುಷರು ನಮ್ಮ ಕಲ್ಯಾಣ ಮಂಟಪದಲ್ಲಿ ತಂಗಿದ್ದರು,ಇವರ ಜೊತೆ ಕೆಲಸಮಯ ಕಳೆದದ್ದು, ಪತ್ರಿಕಾ ಸಂದಶ೯ನ ಮಾಡಿದ್ದು ನನ್ನ ಸೌಬಾಗ್ಯ ಮತ್ತು ಪೂವ೯ಜನ್ಮದ ಪುಣ್ಯ ಎಂದು ಬಾವಿಸುತ್ತೇನೆ ಇವರ ಬಗ್ಗೆ ನಾನು ಬರೆದ ಬ್ಲಾಗ್ ಲೇಖನ ಯಥಾವತ್ತು ಇಲ್ಲಿ ಹಾಕಿದ್ದೇನೆ.

 ಇಡೀ ದೇಶದಲ್ಲಿ ಜಂಗಲ್ ವಾಲೆ ಬಾಬ ಅಂತ ಚಿರಪರಿಚಿತರಾದ ಜೈನ ಮುನಿ ರಾಷ್ಟ್ರ ಸಂತ 108 ಮುನಿ ಶ್ರೀ ಚಿನ್ಮಯ ಸಾಗರ ಮಹರಾಜರು ನಮ್ಮಲ್ಲಿ ತ0ಗಿದ್ದರು ಮತ್ತು ಅವರನ್ನ ಶಿವಮೊಗ್ಗದ ಶೃ೦ಗೇಶ್ ರ ಜನ ಹೋರಾಟ ಪತ್ರಿಕೆಗೆ ಸಂದಶ೯ನ ಮಾಡಿದ್ದೆ ಅಂದರೆ ಅವರನ್ನ ಬಲ್ಲವರು ನಂಬುವುದಿಲ್ಲ.
    ಯಾಕೆಂದರೆ ಅವರು ಆಚರಿಸುವ ಚಾತುಮಾ೯ಸಕ್ಕೆ ಅನೇಕ ರಾಜ್ಯದ ಮುಖ್ಯಮಂತ್ರಿಗಳು, ಕೇಂದ್ರ ಸಕಾ೯ರದ ಮಂತ್ರಿಗಳು, ಉನ್ನತ ಹುದ್ದೆಯ ಅಧಿಕಾರಿಗಳು ಅವರನ್ನ ಹುಡುಕಿಕೊಂಡು ಬರುತ್ತಾರೆ.
      ರಾಜೀವ್ ಗಾ೦ದಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮನ್ಮೋಹನ್ ಸಿಂಗ್, ಮೋದಿ ಇವರೆಲ್ಲ ಇವರಿಗೆ ನೇರ ಸಂಪಕ೯ ಇರುವವರು, 2015ರಲ್ಲಿ ಇವರು ಕನಾ೯ಟಕಕ್ಕೆ ಬಂದಾಗ ಬೆಳಗಾಂ ಜಿಲ್ಲೆಯ ಖಾನಾಪುರದ ದಟ್ಟ ಅರಣ್ಯದಲ್ಲಿ ಚಾತುಮಾ೯ಸ ನಡೆಸಿದಾಗ ಅನೇಕ ಉತ್ತರ ಭಾರತದ ರಾಜ್ಯಗಳ ಮುಖ್ಯಮಂತ್ರಿಗಳು ಇವರ ಬೇಟಿಗೆ ಬಂದಿದ್ದರು, ಜೈನ ಪ್ರಮುಖರಾದ ದಮ೯ ಸ್ಥಳದ ವೀರೇ೦ದ್ರ ಹೆಗ್ಗೆಡೆಯವರಿಗೂ ಇವರ ದಶ೯ನ ಸಿಕ್ಕಿಲ್ಲ ಅಂತ ಮಹಾರಾಷ್ಟ್ರದ ಸತಾರದ ಜೈನ ಪ್ರಮುಖರು ಹೇಳಿದರು.
       ಅವಾಗ ಅವರನ್ನ ಸಂದಶಿ೯ಸಿದ ಪತ್ರಿಕೆ ಮತ್ತು ಪೋಟೋ ನೋಡಿದ ಅವರು ನನಗೆ ನೀವೇ ಪುಣ್ಯವಂತರು ಅಂದರು.
      ನನಗೆ ಇಂತ ಅವಕಾಶ ಯಾಕೆ ಸಿಗುತ್ತೆ ಗೊತ್ತಿಲ್ಲ ಆದರೆ ಸಾದು ಸಂತರು ನಮ್ಮಲ್ಲಿ ಬರುತ್ತಾರೆ ಉಳಿಯುತ್ತಾರೆ ಹಾಗು ಯಾರ ಹತ್ತಿರ ಬೆರೆಯದವರು ನನ್ನ ಹತ್ತಿರ ಆತ್ಮೀಯವಾಗಿ ಬೆರೆತು, ಕಾಲ ಕಳೆದು ಹೋಗುವಾಗ ಆಶ್ರೀವಾದ ಮಾಡಿ ಹೋಗುತ್ತಾರೆ.
       ನನ್ನ ತಂದೆ ಕೃಷ್ಣಪ ಮತ್ತು ತಾಯಿ ಸರಸಮ್ಮರ ಸ್ಮರಣಾಥ೯ ನಿಮಿ೯ಸಿರುವ "ಕೃಷ್ಣ ಸರಸ ಕನ್ವೆನ್ಷನ್ ಹಾಲ್" ನ ಮಹಿಮೆ ಅಂತ ಬಾವಿಸುತ್ತೇನೆ.
        ಹಿಂದಿನ ದಿನ ಸಾಗರದ ಜೈನ ಮುಖಂಡರಾದ ರಾಜ್ ಕುಮಾರ್ ಜೈನ್ ಮತ್ತು ವಿ.ಟಿ.ಸ್ವಾಮಿ ಬಂದು ನಾಳೆ ಒಬ್ಬ ಸಂತರು ಬರುತ್ತಾರೆ ಅವರಿಗೆ ತಂಗಲು ವ್ಯವಸ್ಥೆ ಮಾಡಬೇಕಾಗಿ ತಿಳಿಸಿದರು ಅದರಂತೆ ಮರುದಿನ ಬಂದವರು ಜಂಗಲ್ ವಾಲೆ ಬಾಬ.
        ಅವರು ಬಂದು ವಿರಾಜಮಾನರಾದ ನಂತರ ಮಾಲಿಕರನ್ನ ಕರೆಯಿರಿ ಅಂದರಂತೆ ಅವರಾಗಿ ಕರೆದದ್ದರಿಂದ ಹೋಗಿ ದಶ೯ನ ಪಡೆದು ಅವರನ್ನ ಮಾತಿಗೆ ಎಳೆದೆ, ಶಿವಮೊಗ್ಗದ ಜನ ಹೋರಾಟ ದಿನಪತ್ರಿಕೆಗೆ ಅವರ ಅನುಮತಿಯಿಂದ ಸಂದಶ೯ನ ಮಾಡಿದೆ, ಅವರು 3000ಕ್ಕೂ ಹೆಚ್ಚು ನಕ್ಸಲೈಟ್ಸ್ ರನ್ನ ಮುಖ್ಯ ವಾಹಿನಿಗೆ ತಂದವರು, ಹೆಚ್ಚಾಗಿ ಅರಣ್ಯ ಮತ್ತು ಅರುಣ್ಯವಾಸಿಗಳಂದಿಗೆ ಇರುವುದರಿಂದ ಇವರಿಗೆ ಜಂಗಲ್ ವಾಲೆ ಬಾಬ ಅಂತ ಹೆಸರಾಗಿದೆ.
        2015 ಮತ್ತು 2016 ರ ವರೆಗೆ ಕನಾ೯ಟಕದ ಪ್ರಮುಖ ಜೈನ ಕೇಂದ್ರ ಸಂದಶಿ೯ಸಿ ಈಗ ಕನಾ೯ಟಕ ದಾಟಿ ಹೋಗಿದ್ದಾರೆ, ಈ ಅವದಿಯಲ್ಲಿ ಎರೆಡು ಚಾತುಮಾ೯ಸ ಕನಾ೯ಟಕದಲ್ಲಿ ಮಾಡಿದ್ದಾರೆ ಒಂದು ಖಾನಾಪುರ ಮತ್ತು ಮೈಸೂರಿನ ಚಾಮುಂಡಿ ಬೆಟ್ಟದ ಅರಣ್ಯದಲ್ಲಿ.
           ದಮ೯ಸ್ಥಳದಲ್ಲಿ ಇವರಿಗೆ ವಿರೇಂದ್ರ ಹೆಗ್ಗಡೆಯವರು ನೀಡಿದ ಸ್ವಾಗತ ನಂತರ ಇವರು ಹೋದಲ್ಲೆಲ್ಲ ಇವರನ್ನ ಬೇಟಿ ಮಾಡಿದ ಗಣ್ಯರ ಮಾಹಿತಿ ಟ್ವಿಟರ್ ನಲ್ಲಿ ಮತ್ತು ಅಂತರ್ಜಾಲದಲ್ಲಿ ನೋಡಿದಾಗ ನಮ್ಮ ಆತಿಥ್ಯ ಸ್ವೀಕರಿಸಿದವರು, ಸಂದಶ೯ನಕ್ಕೆ ಅವಕಾಶ ನೀಡಿದವರು ಮತ್ತು ಆಶಿ೯ ವದಿಸಿದವರು ಇವರೇಯೆ ? ಎಂಬ ಅನುಮಾನ ಉಂಟಾಗುತ್ತೆ, ಇಂತಹ ರಾಷ್ಟ್ರ ಸಂತರ ಸಂದಶಿ೯ಸಿದ ಹೆಮ್ಮೆ ನನ್ನದು.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ