Skip to main content

#21 ದಿನದ ಲಾಕ್ ಡೌನ್ ನಲ್ಲಿ ಸಂಪೂಣ೯ ಮದ್ಯಪಾನ ಮಾರಾಟ ರದ್ದು ಸರಿಯಾದ ಕ್ರಮವೆ?#

#ಕೊರಾನಾ ಲಾಕ್ ಡೌನ್ ಡೈರಿ- ಲೆಟರ್ ನಂ 4. 
(ಕೆ.ಅರುಣ್ ಪ್ರಸಾದ್)
(25-ಮಾಚ್೯ - 2020 ರಿಂದ 31 - ಮಾಚ್೯ - 2020
#21ದಿನದಲಾಕ್ಡೌನ್
#ಮದ್ಯಪಾನಿಗಳಮೇಲಿನಪರಿಣಾಮದಸಂಶೋದನೆಗೆಕಾರಣವಾಗಿದೆ.
   
  ಇವತ್ತಿಗೆ ಅಂದರೆ 31 ಮಾಚ್ 2020 ರ ಮಧ್ಯರಾತ್ರಿ ತನಕ ಇದ್ದ ಮದ್ಯ ಮಾರಾಟ ನಿಷೇದ ನಾಳೆ ಅಂದರೆ ಏಪ್ರಿಲ್ 1 ರಿಂದ ತೆರವು ಆಗಲಿದೆ ಎಲ್ಲಾ ಸಕಾ೯ರಗಳು ನಿಯಮಿತ ಸಮಯದಲ್ಲಿ ಮಧ್ಯಮಾರಾಟ ಮಾಡಲಿದೆ ಎಂಬ ಆಶಾಭಾವನೆ ಮದ್ಯಪಾನಿಗಳಲ್ಲಿ ಇತ್ತು.
  ಇದಕ್ಕೆ ಪೂರಕವಾಗಿ ಕುಡುಕರು ಕೇರಳದಲ್ಲಿ ಆತ್ಮಹತ್ಯ ಮಾಡಿಕೊಂಡಿದ್ದು, ಖ್ಯಾತ ಚಿತ್ರ ನಟರು ರಾಜಕಾರಣಿಗಳು ಮನೋವೈದ್ಯರು ಮದ್ಯಪಾನ ಸಂಪೂಣ೯ ನಿಲ್ಲಿಸುವುದರಿಂದ ಅನೇಕರ ಆರೋಗ್ಯ ಮಾರಕವಾಗಲಿದೆ ಎಂದು ಎಚ್ಚರಿಸಿದ್ದರು.
  ಆದರೆ ಏಪ್ರಿಲ್ 14 ರ ವರೆಗೆ ಮದ್ಯ ಮಾರಾಟ ನಿಷೇದ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿದೆ.
   ಕೇರಳ ಮತ್ತು ಪಂಜಾಬ್ ರಾಜ್ಯದಲ್ಲಿ ಅವಶ್ಯಕ (Essential) ಆಹಾರ ಪಟ್ಟಿಯಲ್ಲಿ ಮಧ್ಯ ಸ್ಥಾನ ಪಡೆದಿದೆ.
  ಇಡೀ ದೇಶದಲ್ಲಿ 2019 ರಲ್ಲಿ ಅಬಕಾರಿ ಆಧಾಯ 90 ಸಾವಿರ ಕೋಟಿ ಅಂದರೆ ಇದರ ವ್ಯವಹಾರದ ವಿಸ್ತಾರ 100 ಲಕ್ಷ ಕೋಟಿಗೂ ಹೆಚ್ಚು ಇದರಿ೦ದ ಸೃಷ್ಟಿ ಆಗುವ ನೇರ ಮತ್ತು ಪರೋಕ್ಷ ಉದ್ಯೋಗ ಇನ್ನೆಷ್ಟು ಯೋಚಿಸಿ.
  ಜನತಾ ಕಪ್ಯೂ೯ ಅಂದಾಗಲೆ ಪಂಜಾಬ್ ಮತ್ತು ಉತ್ತರ ಭಾರತೀಯ ರಾಜ್ಯದಲ್ಲಿ ಪ್ರತಿ ಕುಟು೦ಬಗಳು ಒಂದು ತಿಂಗಳಿಗೆ ಬೇಕಾದ ಮಧ್ಯ  ದಿನಸಿಯ ಜೊತೆಯಲ್ಲೆ ಶೇಖರಣೆ ಮಾಡಿ ಕೊಂಡಿದೆ.
  ಆದರೆ ದಕ್ಷಿಣದ ರಾಜ್ಯಗಳು ಮಾತ್ರ ಪ್ರದಾನ ಮಂತ್ರಿಗಳು ಮಾಚ೯ 24 ರ ರಾತ್ರಿ 8ಕ್ಕೆ 21 ದಿನದ ಲಾಕ್ ಡೌನ್ ಆದೇಶಿಸಿದ ನಂತರ ಅವಶ್ಯ ಮಧ್ಯ ಶೇಖರಣೆಗೆ ಕಾಲಾವಕಾಶ ಸಿಗಲಿಲ್ಲ.
   ಗ್ರಾಮೀಣ ಪ್ರದೇಶದಲ್ಲಿ ಈಗಾಗಲೆ ದಿನಸಿ ಅಂಗಡಿಗಳಲ್ಲಿ ಮಾರಾಟ ಮಾಡುವ ಮದ್ಯ ದುಬಾರಿ ಬೆಲೆಯಲ್ಲಿ ಮಾರಾಟಕ್ಕೆ ದೊರಕುತ್ತಿತ್ತು ಈಗ 7 ದಿನದಲ್ಲಿ ಅದೂ ಖಾಲಿ... ಈಗ ಕಳ್ಳಭಟ್ಟಿ ಮದ್ಯದ ಮಾರಾಟ ಪ್ರಾರಂಭವಾದರೂ ಆಶ್ಚಯ೯ ಇಲ್ಲ.
  ಇದರಿಂದ ಅಲ್ಲಲ್ಲಿ ದುರಂತ ನಡೆಯುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.
  ಗುಜರಾತ್ ಬಿಹಾರ್ ಮಿಜೋರಾಂ ನಾಗಲ್ಯಾಂಡ್ ಲಕ್ಷದ್ವೀಪದಲ್ಲಿ ಈಗಾಗಲೇ ಮದ್ಯಪಾನ ನಿಶೇದ ಜಾರಿ ಇದೆ.
   ಒಂದು ಸಮೀಕ್ಷೆ ಪ್ರಕಾರ 16 ಕೋಟಿ ಬಾರತೀಯರು ನಿತ್ಯ ಮದ್ಯಪಾನ ಮಾಡುತ್ತಾರೆ 21 ದಿನ ಸಂಪೂಣ೯ ಲಾಕ್ ಡೌನ್ ನಲ್ಲಿ ತಾತ್ಕಾಲಿಕ ಮಧ್ಯ ಪಾನ ನಿಷೇದದಿಂದ ಇವರ ಮೇಲಿನ ಪರಿಣಾಮ ಏನು? ಎಂದು ತಿಳಿಯಬೇಕಾಗಿದೆ.
  ವೈದ್ಯಕೀಯ ಸಂಶೋದನೆ ಕೂಡ ಕುಡಿತದ ಅಡಿಕ್ಷನ್ ಗೆ ಒಳಗಾದವರನ್ನು ಒಂದೇ ಬಾರಿಗೆ ಕುಡಿತ ಬಿಡಿಸಬಾರದು ಎಂಬುದು ಇದ್ದರೂ ಕೂಡ ಕೊರಾನ ವೈರಸ್ ಎಲ್ಲದನ್ನ ಬದಿಗೆ ಸರಿಸಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...