Skip to main content

#ಇರುವಕ್ಕಿ ಕೃಷಿ ವಿಶ್ವವಿದ್ಯಾಲಯದ ಮೊದಲ ಪಾರಂ ಇನ್ ಚಾಜ್೯ ಡಾ.ಗಣಪತಿ#

#ಪ್ರತಿಷ್ಟಿತಇರುವಕ್ಕಿ ಕೃಷಿ ವಿಶ್ವವಿದ್ಯಾಲಯದ ಪಾರಂ ಇನ್ ಚಾಜ್೯ ಡಾ.ಗಣಪತಿ ನಮ್ಮ ಅತಿಥಿ#
  ಇವರು ಮೂಲತ ಶಿವಮೊಗ್ಗ ಜಿಲ್ಲೆಯ ತೀಥ೯ಹಳ್ಳಿ ತಾಲ್ಲೂಕಿನ ಹುOಚದ ಸಮೀಪದ ಹಳ್ಳಿಯವರು ಮೆರಿಟ್ ವಿದ್ಯಾಥಿ೯ ಆಗಿ ಉನ್ನತ ವ್ಯಾಸಂಗ ಮಾಡಿ ಈಗ ನಮ್ಮ ಊರಿನ ಸಮೀಪದ ಇರುವಕ್ಕಿ ಕೃಷಿ ವಿಶ್ವವಿದ್ಯಾಲಯದ ಪಾರಂ ಇನ್ ಚಾಜ್೯ ಆಗಿದ್ದಾರೆ.
  ಅನೇಕರು ಹೇಳುತ್ತಿದ್ದರು 777 ಎಕರೆ ವಿಶ್ವ ವಿದ್ಯಾಲಯ ಇನ್ನೂ ಪ್ರಾರ೦ಭ ಆಗಿಲ್ಲ ಆದರೆ ಅಲ್ಲಿ ಅನೇಕ ಸಂಶೋದನೆಗಾಗಿ ತಳಿ ಸಂರಕ್ಷಣೆಗಾಗಿ ಕೆಲಸ ನಡೆಯುತ್ತಿದೆ ಡಾ.ಗಣಪತಿ ಎಂಬುವವರು ಮಲೆನಾಡಿನವರೆ ಹೆಚ್ಚಿನ ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೆ ಅಂತ ಹೇಳುವುದು ಕೇಳುತ್ತಿದ್ದೆ.
  ನಿನ್ನೆ ನನ್ನ ಆಪೀಸಿಗೆ ಗೆಳೆಯ ವಕೀಲರಾದ ಕುಬಟೂರು ರಾಮಚಂದ್ರರ ಜೊತೆ ಬಂದಿದ್ದರು ಅವರ ಮತ್ತು ನನ್ನ ಮಾತುಕಥೆಯಲ್ಲಿ ತಿಳಿದು ಬಂದಿದ್ದು ಇಡೀ ದೇಶದಲ್ಲೇ ಕಾಡಿನ ಮಧ್ಯೆ ಮತ್ತು ಹಳ್ಳಿಯ ಮದ್ಯ ಇರುವ ಕೃಷಿ ವಿಶ್ವವಿದ್ಯಾಲಯ ಇದೊ೦ದೆ ಅಂತೆ, ಪ್ರಾರಂಭವೇ ಆಗದ೦ತ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುವುದು ಕಠಿಣ ಆದರೂ ಇವರಿಗೆ ಕೆಲ ಗುರಿ ಮತ್ತು ಹಠ ಇರುವುದರಿಂದ ಜವಾಬ್ದಾರಿ ವಹಿಸಿಕೊಂಡಿದ್ದಾರೆ, ಈಗಾಗಲೆ ಸ್ಥಳಿಯ ರೈತರಿಗಾಗಿ ಅನೇಕ ರೀತಿಯ ನಸ೯ರಿ ಮಾಡಿ ಗಿಡ ನೀಡುತ್ತಿದ್ದಾರೆ, ಮಲೆ ನಾಡಿನ ಅಪ್ಪೆ ಮಾವಿನ ಮಿಡಿಗಾಗಿ ವಿಶೇಷ ಸಂಶೋದನೆ ಮತ್ತು ಸಂರಕ್ಷಣೆಯ ಯೋಜನೆ ಹಾಕಿದ್ದಾರೆ, ಅಳವಿನಂಚಿನ ಪಶ್ಚಿಮ ಘಟ್ಟದ ಅನೇಕ ಜಾತಿಯ ಸಸ್ಯಗಳನ್ನ ಸಂಗ್ರಹಿಸಿ ನೆಡೆಸಿದ್ದಾರೆ, ಯಾವುದೇ ಮರ ಕಡಿಯದೆ ಕಾಡಿನ ಮಧ್ಯ ಇದೆಲ್ಲ ಚಟುವಟಿಕೆ ಮಾಡುತ್ತಿದ್ದಾರೆ.
  ಅವರಿಗೆ ಸಾಗರದ ಕೃಷಿ ಮಿತ್ರ ನಾಗೇಂದ್ರ ಸಾಗರ್ ಸಂಪಕಿ೯ಸಿ ಕೊಟ್ಟೆ ಅವರ ಮುಖಾಂತರ ಮಲೆನಾಡಿನ ಅಪ್ಪೆಮಾವಿನ ಮಿಡಿ ತಜ್ಞ ಬೇಳೂರು ಸುಬ್ಬಣ್ಣರ ಬೇಟಿ ಮಾಡಿ ಅವರ ಸಹಾಯ ಸಹಕಾರ ಪಡೆಯ ಬಹುದೆಂದೆ.
   ಕೆಳದಿ ಅರಸರ ಕಾಲದಲ್ಲಿ ಎಲ್ಲಾ ಮಾಗ೯ದಲ್ಲಿ ದೂಪದ ಮರ ಬೆಳೆಸಿದ್ದರು ಇದನ್ನ ಡಾ.ರೈಸ್ ತಮ್ಮ ಲೇಖನದಲ್ಲಿ ನಮೂದಿಸಿದ್ದಾರೆ ನಂತರ ರಾಷ್ಟ್ರಿಯ ಹೆದ್ದಾರಿಗಾಗಿ ಜಿಲ್ಲಾ ರಸ್ತೆಗಾಗಿ ರಸ್ತೆ ಅಗಲಿಕರಣದಲ್ಲಿ ದೂಪದ ಮರ ಕಡಿಯಲಾಯಿತು ಕೃಷಿ ವಿಶ್ವವಿದ್ಯಾಲಯದಲ್ಲಿನ 777 ಎಕರೆ ಸುತ್ತಲೂ ದೂಪದ ಮರ ಬೆಳೆಸಬಹುದೆಂದು ಸೂಚಿಸಿದೆ ಈ ವಷ೯ವೇ ಸಸಿ ಬೆಳೆಸಿ ಮುಂದಿನ ವಷ೯ ಕಾಯ೯ರೂಪಕ್ಕೆ ತರುವುದಾಗಿ ಗುರುತು ಮಾಡಿಕೊ೦ಡರು.
  ಜೇನು ಕೃಷಿಯನ್ನು ಇಲ್ಲಿ ಹಮ್ಮಿಕೊಳ್ಳಲಿದ್ದಾರೆ.
 ಇವರಿಗೆ ಅರವಿ೦ದ ಚೊಕ್ಕಾಡಿಯವರು ಬರೆದ ಗಾಂದಿ ಪುಸ್ತಕ ನೆನಪಿನ ಕಾಣಿಕೆ ಆಗಿ ನೀಡಿದೆ, ಮಿತ ಬಾಷಿ ಸ್ವಲ್ಪ ನಾಚಿಕೆ ಸ್ವಭಾವದ ಆದರೆ ಮಾಡಬೇಕಾದ್ದನ್ನ ಮಾಡೇ ತೀರುವ ಹಠ ಇರುವ ಇವರ ಪರಿಚಯ ಆದದ್ದು ಸಂತೋಷ ಆಯಿತು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...