Skip to main content

ಕೊರಾನಾ ಲಾಕ್ ಡೌನ್ ಡೈರಿ 2020, ಮೇ ಜೂನ್ ಜುಲೈ ತಿಂಗಳುಗಳು ಭಾರತ ದೇಶದಲ್ಲಿ ಜನತೆ ಎಚ್ಚರಿಕೆಯಿ೦ದ ಕೊರಾನಾ ವೈರಸ್ ನಿಮೂ೯ಲನೆಗೆ ಸಹಕರಿಸಬೇಕಾಗಿದೆ.

#ಕೊರಾನಾ_ಲಾಕ್_ಡೌನ್_ಡೈರಿ_2020
#ಲೆಟರ್_ನOಬರ್_23
#ದಿನಾ0ಕ_26_ಏಪ್ರಿಲ್_2020

*ಮಾಚ್೯ 24 ರಿಂದ ಮೇ 3 ರವರೆಗಿನ 2 ಹoತದ ಲಾಕ್ ಡೌನ್ ನಲ್ಲಿ ಇವತ್ತಿಗೆ 32 ದಿನಗಳಾಯಿತು ಇನ್ನೂ 8 ದಿನ ಬಾಕಿ ಇದೆ.

   ಸಾಧ್ಯವೇ ಇಲ್ಲ ಅಂತ ಬಾವಿಸಿದ್ದು ಅದಾಗಿ ನಡೆದೇ ಹೋಯಿತು, ಸಿನಿಮಾ ಇಲ್ಲದೆ ಸಾಧ್ಯವೆ? ಮಾಲ್ ಇಲ್ಲದೆ ಸಾಧ್ಯವೆ? ಶಾಲೆ ಇಲ್ಲದೆ ಸಾಧ್ಯವೇ? ಹೋಟೆಲ್ ಅಂಗಡಿ ಇಲ್ಲದೆ ಸಾಧ್ಯವೆ? ಬಸ್, ರೈಲು, ವಿಮಾನ ಇಲ್ಲದೆ ಸಾಧ್ಯವೇ? ಅಂತೆಲ್ಲ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ.
  ಮಧ್ಯದ ಅಂಗಡಿ ಬಂದ್ ಮಾಡಲು ಸಾಧ್ಯವೇ ಇಲ್ಲ ಮದ್ಯ ಮಾರಾಟದ ಲಾಬಿಯ ಶಕ್ತಿಯ ಮುಂದೆ ಸಕಾ೯ರ ಏನೇನೂ ಅಲ್ಲ ಅಂತ ಬಾವಿಸಿದ್ದು ಹುಸಿ ಆಯಿತು.
  ಲಾಕ್ ಡೌನ್ ಮೋದಿ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಅಪಾದನೆ, ಅವರು ನೀಡಿದ ಕರೆ  ಚಪ್ಪಾಳೆ ತಟ್ಟಿ ಜನರ ಆರೋಗ್ಯಕ್ಕಾಗಿ ದುಡಿಯುವವರಿಗೆ ಬೆಂಬಲಿಸಿ ಎಂದದ್ದು, ರಾತ್ರಿ ದೀಪ ಬೆಳಗಿಸಿ ಒಗ್ಗಟು ಪ್ರದಶಿ೯ಸಿ ಎಂದಿದ್ದು ಎಷ್ಟೇ ವಿರೋಧ ವ್ಯಕ್ತಪಡಿಸಿದರೂ ದೇಶದಾದ್ಯಂತ ಜನತೆ ಪಕ್ಷಾತೀತವಾಗಿ ಬೆಂಬಲಿಸಿದರು.
   ದೇಶದ ಈ ಸಂಕಷ್ಟದಲ್ಲಿ ಒಗ್ಗಟ್ಟು ಪ್ರದಶಿ೯ಸಿ ಆಳುವ ಸಕಾ೯ರಕ್ಕೆ ಸಹಕರಿಸಿದರೆ ನಮ್ಮ ಜೀವ ಸುರಕ್ಷಿತ ಎಂಬ ತಿಳುವಳಿಕೆ ಸಾವ೯ಜನಿಕರಲ್ಲಿ ಮೂಡಿದೆ.
  ಮಾಚ೯ 26ಕ್ಕೆ ಕನಾ೯ಟಕದಲ್ಲಿ ಕೊರಾನ ವೈರಸ್ ಸೋoಕು 55 ಜನರಿಗೆ ಹರಡಿತ್ತು ಮತ್ತು 2 ಸಾವು ಆಗಿತ್ತು.
  ಇಡೀ ದೇಶದಲ್ಲಿ 18 ಸಾವು ಆಗಿತ್ತು ಮತ್ತು 721 ಜನರಿಗೆ ಸೋ೦ಕು ಹರಡಿತ್ತು.
  ಇವತ್ತು ಅಂದರೆ ಏಪ್ರಿಲ್ 25ಕ್ಕೆ ಇಡೀ ದೇಶದಲ್ಲಿ ಕೊರಾನ ವೈರಸ್ ನಿಂದ 24942 ಜನರಿಗೆ ಸೋ೦ಕು ಹರಡಿದೆ, ಸಾವು 780 ಆಗಿದೆ.
  ಅಮೆರಿಕಾದಲ್ಲಿ ಈ ಸೋ೦ಕು ಇವತ್ತಿಗೆ 9 ಲಕ್ಷ ದ 41 ಸಾವಿರದ 478 ಜನರಿಗೆ ಹರಡಿದೆ, 52 ಸಾವಿರದ 948 ಸಾವು ಆಗಿದೆ.
  ಬೇರೆ ದೇಶದ ಜೊತೆ ಹೋಲಿಸಿದರೆ ಭಾರತದಲ್ಲಿ ಇದರ ಪ್ರಮಾಣ ಕಡಿಮೆ ಆದರೂ ಒಂದು ವೇಳೆ ಲಾಕ್ ಡೌನ್ ತೆಗೆದ ಮೇಲೆ ಜನತೆ ಮೈಮರೆತರೆ ಮೇ ತಿಂಗಳ ಅಂತ್ಯದಲ್ಲಿ ಈ ವೈರಸ್ 2 ಲಕ್ಷ ದಾಟಿದರೆ ಸುಮಾರು 90 ಸಾವಿರ ಜನರನ್ನ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅಡ್ಮಿಟ್ ಮಾಡಬೇಕಾದ ಸಂದಭ೯ ಬರುವ ಸಾಧ್ಯತೆ ತೆಗೆದು ಹಾಕುವ ಹಾಗಿಲ್ಲ.
  ಹಾಗಾದರೆ ನಮ್ಮ ದೇಶದ ಪರಿಸ್ಥಿತಿ ಯಾವ ನಿಯOತ್ರಣಕ್ಕೂ ಸಿಗಲಾರದು, ಹಾಗಾಗದಿರಲಿ, ದೇಶದ ಅದೃಷ್ಟ ಮತ್ತು  ದೇವರ ದಯೆ ಈ ಕೊರಾನ ವೈರಸ್ ದೇಶದಿಂದಲೇ ಅಷ್ಟೆ ಅಲ್ಲ ಪ್ರಪ೦ಚದಿಂದಲೆ ನಿಗ೯ಮಿಸಲಿ ಎಂದು ಹಾರೈಸೋಣ.
  ಸೆಪ್ಟೆ೦ಬರ್ ಅಂತ್ಯದಲ್ಲಿ ಇದಕ್ಕೆ ಸೂಕ್ತ ಚಿಕಿತ್ಸೆಯ ಔಷದಿ ಬಳಕೆಗೆ ಸಿಗಬಹುದಾದ ಪ್ರಯೋಗಗಳು ನಡೆಯುತ್ತಿದೆ ಅಲ್ಲಿನ ವರೆಗೆ ನಾವು ಆದಷ್ಟು ಸ್ವಯಂ ಮತ್ತು ಸ್ವಾವಲಂಬನೆಯಿಂದ ಎಚ್ಚರಿಕೆ ಜೀವನ ನಡೆಸಬೇಕಾಗಿದೆ.
  ಎಲ್ಲದನ್ನು ನಕಾರತ್ಮಕವಾಗಿ ಪರಿಗಣಿಸದೆ ಸಕಾರತ್ಮಕ ಚಿಂತನೆಯ ಒಗ್ಗಟ್ಟು ಕಾಪಾಡಿಕೊಳ್ಳಬೇಕಾದ ಅತಿ ಅನಿವಾಯ೯ತೆ ಇದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...