Skip to main content

#ಉಚಿತ ಎಂದರೆ ಮುಗಿ ಬೀಳುವ ಸ೦ಸ್ಕಾರ ಹೀನ ಶ್ರೀಮ೦ತ, ವಿದ್ಯಾವಂತ ಸಮೂದಾಯ ಸಮಾಜಕ್ಕೆ ಕೊಡುವ ನೀತಿ ಪಾಠ ಏನು?ಇದು ನಮಗೆ ನಾವೇ ಹಾಕಿಕೊಳ್ಳಬೇಕಾದ ಪ್ರಶ್ನೆ.

#ಕೊರಾನಾ_ಲಾಕ್_ಡೌನ್_ಡೈರಿ_2020
 #ಲೆಟರ್_ನಂ_13.
#ದಿನಾ೦ಕ_13_ಏಪ್ರಿಲ್_2020.

#ಅಶಿಕ್ಷಿತ_ಜ್ಞಾನಿ V/S ಎಜುಕೇಟೆಡ್ ಈಡಿಯೇಟ್ಸ್
  ಕಳೆದ ಮಾಚ್೯ 24ರಿಂದ ಇಡೀ ದೇಶದಲ್ಲಿ ಕೊರಾನಾ ವೈರಸ್ ಸಾ೦ಕ್ರಮಿಕವಾಗಿ ಹರಡದಂತೆ ತಡೆಯಲು ಸಕಾ೯ರ ತೆಗೆದುಕೊಳ್ಳಬೇಕಾದ ಮು೦ಜಾಗೃತೆ ಕ್ರಮಗಳನ್ನ ಸಾವ೯ಜನಿಕರಿಗೆ ಎಲ್ಲಾ ಮಾಧ್ಯಮಗಳ ಮೂಲಕ ಪ್ರಚಾರ ಮಾಡಿದೆ.
  ಈ ಕಾಯಿಲೆಯಿ೦ದ ಮು೦ದುವರಿದ ದೇಶಗಳೇ ತತ್ತರಿಸಿದೆ ಎಂಬ ಪ್ರತಿ ಕ್ಷಣದ ಮಾಹಿತಿ ಸೋಷಿಯಲ್ ಮೀಡಿಯಾದಲ್ಲಿ ನೋಡುತ್ತಿದ್ದೇವೆ.
   ಇದರಲ್ಲಿ ಬಹುಮುಖ್ಯವಾದದ್ದು ಸಾಮಾಜಿಕ ಅಂತರ ಕಾಪಾಡುವುದು ಆದರೆ ಜನರನ್ನ  ಎಷ್ಟು ಜಾಗೃತಿ ಮಾಡಿದರೂ ಸಾಮಾಜಿಕ ಅಂತರ ಕಾಪಾಡುತ್ತಿಲ್ಲ ಬಹುಶಃ ಇದೇ ಮುಂದಿನ ದಿನದಲ್ಲಿ ದೊಡ್ಡ ದುರಂತಕ್ಕೆ ಕಾರಣವಾದೀತು.
  ತರಕಾರಿ ಖರೀದಿ ಸ್ಥಳ, ದಿನಸಿ ಖರೀದಿ ಸ್ಥಳದಲ್ಲಿ ಒಬ್ಬರನ್ನೊಬ್ಬರು ತಾಗಿಯೇ ಇರುತ್ತಾರೆ.
  ಅಮೆರಿಕಾ ಲಂಡನ್ ನಲ್ಲಿ ವಿದ್ಯಾವಂತರು ಈ ಮುಂಜಾಗೃತಿಯನ್ನ ಕಡೆಗಾಣಿಸಿ ವೀಕ್ ಎಂಡ್, ಬಾರ್ ಗಳಲ್ಲಿ ಕಳೆದದ್ದೇ ಇವತ್ತಿನ ಸಾವಿರಾರು ಸಾವಿಗೆ ಕಾರಣ.
  ಶಿವಮೊಗ್ಗ ಪಟ್ಟಣದಲ್ಲಿ ಈ ಕಾಯಿಲೆ ಹರಡದಂತೆ ತಡೆಯಲು ವಿದ್ಯಾವಂತ ಯುವ ಜನತೆಯನ್ನ ಸ್ವಯಂ ಹೆಸರು ನೋಂದಾಯಿಸಿ ಸಾವ೯ಜನಿಕರಿಗೆ ಸಹಾಯ ಮಾಡಲು ಸ್ವಯಂ ಸೇವಕರಾಗಿ ಸೇವೆ ಮಾಡಲು ಅವಕಾಶ ನೀಡಿ ತರಬೇತಿ ನೀಡಲಾಗಿದೆ.
  ಮೊನ್ನೆ ಶಿವಮೊಗ್ಗದ ಪೆಟ್ರೋಲ್ ಪಂಪ್ ಮಾಲಿಕರು ಈ ಸ್ವಯಂ ಸೇವಕರ ಮೊಟಾರ್ ಬೈಕ್ ಗೆ ತಲಾ ಒಂದು ಲೀಟರ್ ಪೆಟ್ರೋಲ್ ದಾನ ನೀಡುವುದಾಗಿ ಘೋಷಿಸಿದ್ದರು 70 ರೂಪಾಯಿ ಬೆಲೆಯ ಈ ಕೊಡುಗೆ ಪಡೆಯಲು ನೂರಾರು ಸ್ವಯಂ ಸೇವಕರು ಸ್ವಯಂ ಶಿಸ್ತು ಪಾಲಿಸದೇ ದುರಾಸೆಯಿ೦ದ ಒಬ್ಬರ ಮೇಲೆ ಒಬ್ಬರು ಬಿದ್ದ೦ತೆ ಸಾಮಾಜಿಕ ಅಂತರ ಕಾಪಾಡದೇ ಪೆಟ್ರೋಲ್ ಗೆ ಮುಗಿ ಬಿದ್ದದ್ದು ನೋಡಿದರೆ ಹೇಸಿಗೆ ಅನ್ನಿಸಿತು ಮತ್ತು ಇವರೇ ಹೀಗಾದರೆ ಇವರು ಯಾರಿಗೆ ಯಾವ ರೀತಿ ಮಾಗ೯ದಶ೯ನ ನೀಡುವ ಸ್ವಯಂ ಸೇವಕರಾದಾರು?
   ಇದಿಷ್ಟೆ ಅಲ್ಲ ಸಕಾ೯ರದ ಉಚಿತ ಹಾಲಿನ ಸಾಲಿನಲ್ಲಿ ನಿಲ್ಲುವ ಸಕಾ೯ರಿ ನೌಕರರು, ಲಕ್ಷಾ೦ತರ ಬಾಡಿಗೆ ಬರುವ ಶ್ರೀಮ೦ತರು ಏನನ್ನ ತೋರಿಸುತ್ತದೆ?
  ಅಶಿಕ್ಷಿತರೇ ಜ್ಞಾನಿಗಳಂತೆ ಸಕಾ೯ರದ ನೀತಿ ನಿಯಮ ಪಾಲಿಸುತ್ತಿದ್ದಾರೆ,ಬಡವರ ಪಾಲು ಕಸಿದುಕೊಳ್ಳುವ ಪ್ರಯತ್ನ ಮಾಡುತ್ತಿಲ್ಲ ಆದರೆ ವಿದ್ಯಾವಂತರು ಮಾಡುತ್ತಿರುವ ಅಪವಸ್ಯಕ್ಕೆ ಮಾತ್ರ ಕ್ಷಮೆ ಇಲ್ಲ.
   ನಮ್ಮ ದೇಶದಲ್ಲಿನ ವಿದ್ಯೆಯಲ್ಲಿ ಸಂಸ್ಕಾರ ಕಲಿಸುತ್ತಿಲ್ಲವೆ? ಹಾಗಾದರೆ ಸಮಗ್ರ ವಿದ್ಯಾ ನೀತಿ ಬದಲಾಗಬೇಕೆ? ಎಂಬ ಪ್ರಶ್ನೆ ಎಲ್ಲರನ್ನ ಕಾಡುತ್ತಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...