Skip to main content

ಅನೇಕ ಜನ ಪ್ರತಿನಿಧಿಗಳಿಗೆ ಸೋಷಿಯಲ್ ಮೀಡಿಯ ಬಳಕೆ ಇನ್ನು ಗೊತ್ತಿಲ್ಲ ಮಾಸಿಕ 20 ಸಾವಿರಕ್ಕೆ ಇದನ್ನ ನಿವ೯ಹಿಸುವವರಿಗೆ ಹೊರಗುತ್ತಿಗೆ ನೀಡುತ್ತಾರೆ ಆದರೆ ರಾಜ್ಯದ ಶಿಕ್ಷಣ ಮಂತ್ರಿ ಸುರೇಶ್ ಕುಮಾರ್ ಇವರಿಗೆಲ್ಲ ಬಿನ್ನ, ಸ್ವತಃ ಬರೆಯುವ ಪ್ರತಿಕ್ರಿಯಿಸುವುದರಿಂದ ಇವರು ಸೋಷಿಯಲ್ ಮೀಡಿಯದಲ್ಲಿ ಹೆಚ್ಚು ಜನರ ತಲುಪಿದ್ದಾರೆ.

#ಸ್ವತಃ_ಕನಿಷ್ಟ_ಪೇಸ್_ಬುಕ್_ವಾಟ್ಸ್_ಅಪ್_ಬಳಸಲು_ಬಾರದ_ಜನಪ್ರತಿನಿದಿಗಳ_ಮದ್ಯ_ಇದನ್ನೆಲ್ಲ_ಬಳಸಿ_ಜನರಿಗೆ_ಹತ್ತಿರ_ಆಗಿರುವ
#ಮOತ್ರಿ_ಸುರೇಶ್_ಕುಮಾರ್

    ಕಂಪ್ಯೂಟರ್ ಇರಲಿ ನಿತ್ಯ ದಿನ ಪತ್ರಿಕೆನೇ ಓದದ ಶಾಸಕರು ಸಂಸದರೇ ಹೆಚ್ಚು ಜನ,ಇವರಿಗೆಲ್ಲ ಪ್ರತಿ ವಷ೯ ಹೆಚ್ಚು ಬೆಲೆಯ ಲಾಪ್ ಟಾಪ್ ಸಕಾ೯ರ ನೀಡುತ್ತದೆ, 5 ವಷ೯ ದಿನಪತ್ರಿಕೆ ಬಿಲ್ ಸಕಾ೯ರ ನೀಡುತ್ತದೆ.
  ಅದೇನೇ ಇರಲಿ ಅತಿ ಹೆಚ್ಚು ಬೆಲೆಯ ಮೊಬೈಲ್ ಕೈನಲ್ಲಿ ಶೋ ಮಾಡುತ್ತಿರುತ್ತಾರೆ ಆದರೆ ಅದನ್ನ ಬಳಸುವುದೂ ಕಲಿತಿಲ್ಲ ಇವರ ಪೇಸ್ ಬುಕ್, ವಾಟ್ಸ್ ಅಪ್ ಪ್ರತಿ ತಿಂಗಳಿಗೆ 20 ಸಾವಿರ ಪಡೆದು ಬೇರಾರೋ ನಿವ೯ಹಿಸುತ್ತಾರೆ.
   ಇದರಿಂದ ಇವರಿಗೆ ಇವತ್ತಿನ ಸೋಷಿಯಲ್ ಮೀಡಿಯಾದಲ್ಲಿ ಏನು ನಡೆಯುತ್ತದೆಂಬ ಜ್ಞಾನ ಇರುವುದಿಲ್ಲ ಬೇರಾರೋ ಇವರ ಆಪ್ತರು ತಿಳಿಸದೆ ಇವರಿಗೆ ತಿಳಿಯುವುದಿಲ್ಲ.
  ಇದೆಲ್ಲ ತಿಳಿಯದ ಇವರು ಈಗಿನ ಕಾಲದ ಅನಕ್ಷರಸ್ಥರೆಂದರೆ ತಪ್ಪಾಗದು.
  ಇದರ ಮದ್ಯ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಸೋಷಿಯಲ್ ಮೀಡಿಯಾದ ಮುಖಾಂತರ ರಾಜ್ಯದ ಜನರಿಗೆ ಅತಿ ಸಮೀಪ ಆಗಿದ್ದಾರೆ.
  ರಾಜ್ಯ ಸಕಾ೯ರದ ಪ್ರತಿ ನಿತ್ಯದ ಕೆಲಸ ಮಾದ್ಯಮಕ್ಕೆ ಪರಿಣಾಮಕಾರಿಯಾಗಿ ತಲುಪಿಸುತ್ತಾರೆ.
  ಸಜ್ಜನತೆ, ಸುಸ೦ಸ್ಕೃತ ನಡತೆ ಮತ್ತು ಮಾತಿನಿಂದ ಇವರ ವ್ಯಕ್ತಿತ್ವಕ್ಕೆ ವಿಶೇಷ ಗೌರವ ಉoಟಾಗಿದೆ, ಇವತ್ತು ಇವರು ಹಾಕಿದ Post ನ ಪೋಟೋ ಇಲ್ಲಿ ಲಗತ್ತಿಸಿದೆ, 7ನೇ ತರಗತಿಯ ಪುಟಾಣಿ ಒಬ್ಬಳು ಶಿಕ್ಷಣ ಸಚಿವರನ್ನ ಮಾತಾಡಿಸಿದ ಸುದ್ದಿ ಅವರು ಪೇಸ್ ಬುಕ್ ಲ್ಲಿ ಬರೆದಿದ್ದಾರೆ.
  ಜನ ಪ್ರತಿನಿದಿಗಳು ಸುಲಭವಾಗಿ ಕಲಿತು ಕೊಳ್ಳಬಹುದಾದ ಮೊಬೈಲ್ ಆಪ್ ಗಳನ್ನು ಕಲಿತರೆ ಅವರ ನಿತ್ಯ ಆಡಳಿತ ಸುಲಭ ಆದರೂ ಕಲಿಯದವರೇ ಅನೇಕರು, ಮುಂದಿನ ದಿನದಲ್ಲಿ ಗಮನಿಸಿ ನಿಮ್ಮ ಯಾವ ಜನ ಪ್ರತಿನಿದಿಗೆ ಇದೆಲ್ಲ ಗೊತ್ತಿದೆ ಅಂತ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...