Skip to main content

ಲಾಕ್ ಡೌನ್ ಡೈರಿ - 36,ಎರೆಡು ತಿಂಗಳ ಲಾಕ್ ಡೌನ್ ಸಮಯ ಮುಂದಿನ ದಿನದಲ್ಲಿ ರೋಗ ನಿಯ೦ತ್ರಣಕ್ಕೆ ಬೇಕಾದ ಎಲ್ಲಾ ತಯಾರಿ ಮಾಡಿಕೊಳ್ಳಲು ಸಕಾ೯ರಕ್ಕೆ ಸಾಕಷ್ಟು ಕಾಲಾವಕಾಶ ಆಗಿತ್ತು ಇದನ್ನ ಸಕಾ೯ರಗಳು ಸದುಪಯೋಗ ಪಡಿಸಿಕೊಂಡಿರ ಬಹುದು!

ಕೊರಾನಾ ಲಾಕ್ ಡೌನ್ ಡೈರಿ -2020
              ಲೆಟರ್ ನಂಬರ್- 36
           ದಿನಾ೦ಕ: 18 -ಮೇ -2020

4ನೇ ಹಂತದ ಲಾಕ್ ಡೌನ್ ಪ್ರಾರಂಭ
ಸುಮಾರು 2 ತಿಂಗಳ ಕಾಲಾವಕಾಶ ಸಕಾ೯ರ ಸದುಪಯೋಗ ಪಡಿಸಿ ಕೊ೦ಡಿತಾ?.
  
    ಸುಮಾರು 2 ತಿಂಗಳು ಅಂದರೆ 60 ದಿನದ ಕಾಲಾವಕಾಶದಲ್ಲಿ ಸಕಾ೯ರ ಮುಂದಿನ ಹಂತದ ಪರೀಕ್ಷೇ ಮತ್ತು ಚಿಕಿತ್ಸೆಗಾಗಿ ಬೇಕಾದ ಪರಿಕರಗಳ ಸಂಗ್ರಹಣೆ ಮಾಡಿಕೊಳ್ಳುವುದು, ರೋಗ ಪೀಡಿತರನ್ನ ಕೊರಾ೦ಟೈನ್ ಗೆ ಸ್ಥಳ ಮತ್ತು ಚಿಕಿತ್ಸೆಗೆ ಸ್ಥಳ ಕಾಯ್ದಿರಿಸಲು ಬೇಕಾದಷ್ಟು ಸಮಯ ಆಗಿತ್ತು.
   ಈ ಅವದಿಯಲ್ಲಿ ರೋಗಕ್ಕೆ ವ್ಯಾಕ್ಸಿನ್ ಕಂಡು ಹಿಡಿಯಲು ಸಂಶೋದನೆಗೂ ಕಾಲಾವಕಾಶ ಸಿಕ್ಕಿತ್ತು.
  ಈ ಅವದಿಯಲ್ಲಿ ಯಾವುದೇ ಚಿಕಿತ್ಸೆ ಇಲ್ಲದ ಕಾಯಿಲೆಯನ್ನ ರೋಗದಿಂದ ದೂರ ಇರುವ ಮೂಲಕ ನಿಯ೦ತ್ರಿಸುವ ಏಕ ಮಾತ್ರ ಮಾಗ೯ದಿಂದ ಭಾರತದಲ್ಲಿ ಬೇರೆ ದೇಶಕ್ಕಿ೦ತ ಪರಿಣಾಮಕಾರಿ ಪಲಿತಾಂಶ ಪಡೆದಿದ್ದೇವೆ.
   ವಿಶಾಲ ದೇಶ, ವಿಪರೀತ ಜನ ಸಂಖ್ಯೆ, ಸಾವಿರಾರು ಬಾಷೆ, ಆಹಾರ ಮತ್ತು ಆಚರಣೆಯ ಇವರನ್ನ ನಿಯ೦ತ್ರಿಸುವುದು ಸುಲಭವಲ್ಲ.
 ಹೊಟ್ಟೆಪಾಡಿಗೆ ಉದ್ಯೋಗಕ್ಕಾಗಿ ಹೊರ ಹೋದವರಿಗೆ ವಾಪಾಸ್ ಅವರ ಊರಿಗೆ ತಲುಪಲು ಅವಕಾಶ ಮಾಡಿಕೊಡುವ ಹಂತದಲ್ಲಿ ರೋಗ ನಿಯಂತ್ರಣ ನಿರೀಕ್ಷೆಯOತೆ ಕೈ ಮೀರುತ್ತಿದೆ.
  ಹಸಿದವರಿಗೆ ಆಹಾರ ಭದ್ರತೆ, ಆಥಿ೯ಕ ವ್ಯವಹಾರದ ಪರಿಹಾರ, ಶಿಕ್ಷಣದಲ್ಲಿ ಬದಲಿ ವ್ಯವಸ್ಥೆ, ಸ್ಥಳಿಯ ಉದ್ಯೋಗವಕಾಶದ ಪರಿಹಾರ ಸಕಾ೯ರ ತೆಗೆದುಕೊಂಡಿದೆ.
   ಮುಂದಿನ ಹಂತದಲ್ಲಿ ಎಲ್ಲಾ ಮಿತಿ ಮೀರಿ ಹರಡುವ ರೋಗ ಪೀಡಿತರ ಚಿಕಿತ್ಸೆ ಸುಲಭವಾಗಿ  ದೊರೆಯುವುOತೆ ಮಾಡುವ ದೊಡ್ಡ ಸವಾಲಿದೆ.
  ಲಾಕ್ ಡೌನ್ ನಲ್ಲಿ ದೊರಕಿರುವ ಎರೆಡು ತಿಂಗಳ ಕಾಲಾವಕಾಶ ಸರಿಯಾಗಿ ಸಕಾ೯ರ ಬಳಸಿಕೊಂಡು ತಯಾರಿ ಮಾಡಿದ್ದರೆ ಎಲ್ಲವನ್ನೂ ಸರಾಗವಾಗಿ ಎದುರಿಸುವುದು ಸಮಸ್ಯೆ ಆಗುವುದಿಲ್ಲ.
   ಈ ಮದ್ಯದಲ್ಲಿ ಮುಂದುವರಿದ ದೇಶದಲ್ಲಿ ವ್ಯಾಕ್ಸಿನ್ ಕಂಡು ಹಿಡಿಯಲು ಮತ್ತು ಅದರ ಪಲಿತಾ೦ಶ ಪರೀಕ್ಷೆ ಕೂಡ ಪ್ರಗತಿಯಲ್ಲಿದೆ ಅದರಲ್ಲಿ ಯಶಸ್ವಿ ಆದರೆ ನಮ್ಮ ದೇಶದಲ್ಲಿ ಈ ಅತಿ ದೊಡ್ಡ ಗOಡಾ೦ತರ ಸುಲಭದಲ್ಲಿ ಪರಿಹಾರವಾದಂತೆ.
   ಎರೆಡು ತಿಂಗಳ ಕಾಲಾವಕಾಶ ಸರಿಯಾಗಿ ಬಳಸಿಕೊಳ್ಳದಿದ್ದಲ್ಲಿ ಮತ್ತು ಸೋ೦ಕು ನಿಯಂತ್ರಣಕ್ಕೆ ಬರದಿದ್ದಲ್ಲಿ ಸಕಾ೯ರದ ವಿಪಲತೆಗೆ ಬಾರೀ ತಲೆದಂಡ ಕಟ್ಟುವ೦ತಾಗಲಿದೆ.
  ಆ ಪರಿಸ್ಥಿತಿ ಭಾರತ ದೇಶಕ್ಕೆ ಬರದಿರಲಿ ಎಲ್ಲವೂ ಸುಖಾಂತ್ಯದಲ್ಲಿ ಮುಕ್ತಾಯವಾಗಲಿ ಎಂದು ಪ್ರಾಥಿ೯ಸೋಣ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...