Skip to main content

ಡಾಕ್ಟರ್ ಎಂ.ಸಿ. ಮೋದಿ ಮಹಾತ್ಮಾ ಗಾಂದೀಜಿಯಿಂದ ಪ್ರೇರಿತರಾಗಿ ಕುಗ್ರಾಮಗಳಲ್ಲಿ ಉಚಿತವಾಗಿ ಮಾಡಿರುವ ಕಣ್ಣಿನ ಆಪರೇಷನ್ ಗಳು ಯಾರೂ ಅಳಿಸಲಾರದ ವಿಶ್ವ ದಾಖಲೆ

ಡಾಕ್ಟರ್ ಎಂ.ಸಿ.ಮೋದಿ ಕಣ್ಣಿನ ಆಪರೇಷನ್ ಮುರಿಯಲಾಗದ ಸವ೯ಕಾಲಿಕ ದಾಖಲೆ

   ಹೌದು ಡಾ.ಎಂ.ಸಿ. ಮೋದಿಯವರ ದಾಖಲೆ ಯಾರೂ ಮುರಿಯಲು ಸಾಧ್ಯವಿಲ್ಲ, 1968 ರಲ್ಲಿ ತಿರುಪತಿಯಲ್ಲಿ ಸತತ 14 ಗಂಟೆ ಕಣ್ಣಿನ ಚಿಕಿತ್ಸೆ ಮಾಡಿದ್ದರು.
  ಒಂದೇ ದಿನ 833 ಜನರ ನೇತೃ ಶಸ್ತ್ರಚಿಕಿತ್ಸೆಗಾಗಿ1986 ರಲ್ಲಿ ಇವರ ಹೆಸರು ಗಿನ್ನೆಸ್ ದಾಖಲೆಯಲ್ಲಿದೆ.
  ಒಮ್ಮೆಗೆ 4 ಜನರ೦ತೆ ಗ೦ಟೆಗೆ 40 ಶಸ್ತ್ರಚಿಕಿತ್ಸೆ ಮಾಡುತ್ತಿದ್ದರು.
   ಇವರು ಮಾಡಿರುವ ಒಟ್ಟು ಕಣ್ಣಿನ ಶಸ್ತ್ರಚಿಕಿತ್ಸೆ 5 ಲಕ್ಷದ 79 ಸಾವಿರ, ತಪಾಸಣೆ ಮಾಡಿದ ಸಂಖ್ಯೆ 50 ಲಕ್ಷ, 45 ಸಾವಿರಕ್ಕೂ ಹೆಚ್ಚು ಹಳ್ಳಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
   ಇವರ ಕಣ್ಣಿನ ಶಸ್ತ್ರಚಿಕಿತ್ಸೆ ಯಶಸ್ಸಿನ ಶೇಕಡವಾರು 99.5%.
   ಇದಕ್ಕಾಗಿ ಇವರಿಗೆ ಬಂದ ದೇಶ ವಿದೇಶಗಳ ಪ್ರಶಸ್ತಿ ಅಸಂಖ್ಯ, ಪದ್ಮಶ್ರೀ, ಪದ್ಮಭೂಷಣ, ಹೆಲೆನ್ ಕೆಲರ್ ಹೀಗೆ ಆ ಪಟ್ಟಿ ದೊಡ್ಡದಿದೆ.
  ಆದರೆ ಡಾ.ಎಂ.ಸಿ.ಮೋದಿ ಗ್ರಾಮೀಣ ಪ್ರದೇಶದ ಬಡ ಜನರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಅವರು ಮುಂದಾಗಲು ಕಾರಣ ಮಹಾತ್ಮಾ ಗಾಂದೀಜಿ.
  1942 ರಲ್ಲಿ ಮುಂಬೈನಲ್ಲಿ ನಡೆದ ಕ್ರಿಟ್ ಇಂಡಿಯಾ ಚಳವಳಿಯ ಸಮಾವೇಶದಲ್ಲಿ ಗಾಂದೀಜಿ ಪ್ರೇರಣೆಯಿಂದ ಡಾ.ಮೋದಿ ಕನಾ೯ಟಕದ ಹಳ್ಳಿಗಳ ಬಡ ಜನರ ನೇತೃ ಚಿಕಿತ್ಸೆಗೆ ತೀಮಾ೯ನ ಮಾಡುತ್ತಾರೆ.
 ಪ್ರಾರಂಭದ ದಿನದಲ್ಲಿ ತಮ್ಮ ಚಿಕಿತ್ರೆಯ ಬ್ಯಾಗ್ ನೊಂದಿಗೆ ಬಸ್ಸು, ಎತ್ತಿನಗಾಡಿ ಮತ್ತು ಸೈಕಲ್ ನಲ್ಲಿ ಹಳ್ಳಿ ತಲುಪಿ ತಮ್ಮ ಚಿಕಿತ್ಸೆ ನೀಡುತ್ತಿದ್ದರು ವರ್ಷಕೊಮ್ಮೆ ಊರಿಗೆ ಹೋಗಲು ಸಾಧ್ಯವಾಗುತ್ತಿರಲಿಲ್ಲ.
 ರೋಗಿ ದೇವತೆ ವೈದ್ಯ ಪೂಜಾರಿ ಅನ್ನುತ್ತಿದ್ದ ಡಾ.ಮುರುಘಪ್ಪ ಚನ್ನವೀರಪ್ಪ ಮೋದಿ ಬಾಗಲಕೋಟೆ ಜಿಲ್ಲೆಯ ಬಿಳಗಿಯಲ್ಲಿ ದಿನಾಂಕ 4 - ಅಕ್ಟೋಬರ್ -1916 ರಲ್ಲಿ ಜನಿಸಿ ದಿನಾ೦ಕ 11- ನವೆಂಬರ್ -2005 ರಲ್ಲಿ ಬೆಂಗಳೂರಲ್ಲಿ ಮರಣಿಸಿದ ಡಾ.ಎಂ.ಸಿ.ಮೋದಿ 89 ವಷ೯ದ ತಮ್ಮ ಸಾಥ೯ಕ ಜೀವನದಲ್ಲಿ ಸಿಂಗಲ್ ಮ್ಯಾನ್ ಆಮಿ೯ಯಾಗಿ ಸತತ 45 ವರ್ಷ ಗ್ರಾಮೀಣ ಭಾರತದ ಕಣ್ಣು ಕಾಣದ ಬಡ ಜನರಿಗೆ ದೃಷ್ಟಿ ನೀಡಿದ ಸೇವೆ ಅನನ್ಯ.
   ಇಂತಹ ಮೋದಿಯವರನ್ನ ಎರೆಡು ಸಾರಿ ಆನಂದಪುರಕ್ಕೆ ಕರೆ ತಂದು ಉಚಿತ ಕಣ್ಣಿನ ಚಿಕಿತ್ಸೆ ಮಾಡಿಸಿದ ಹಿರಿಮೆ ಆನಂದಪುರದ ಕನ್ನಡ ಸಂಘದ್ದು, ಇದರಲ್ಲಿ ಸಮಿತಿಯ ಉಪಾದ್ಯಕ್ಷನಾಗಿ ಸೇವೆ ಮಾಡಿದ ಹೆಮ್ಮೆ ನನಗಿದೆ.
  ಡಾ. ಮೋದಿಯವರ ಕೈ ಚಳಕದ ನೇತೃ ಚಿಕಿತ್ಸೆ ಕಣ್ಣಾರೆ ನೋಡುವ ಸದವಕಾಶ ನನಗೆ ಸಿಕ್ಕಿದ್ದು ನನ್ನ ಪುಣ್ಯ, ಅವರ ಕೈ ಹಸ್ತ ಮತ್ತು ಬೆರಳು ಸ್ಪಶಿ೯ಸಿ ಇದು ಅಸಾಧ್ಯ ಕೈಗುಣದ ಹಸ್ತ ಅಂದಾಗ ಡಾ.ಮೋದಿ ನಗುತ್ತಾ ತಮ್ಮ ಎಡ ಗೈ ಎತ್ತಿ ಹಿಡಿದು " ನಾನು ಎಡಚ, ನನ್ನ ಎಡಗೈಯಲ್ಲೇ ನಾನು ಆಪರೇಷನ್ ಮಾಡುವುದು " ಎಂದಾಗ ನಾವೆಲ್ಲ ದಿಗ್ಬ್ರಾಂತರಾಗಿದ್ದೆವು.
  ಇವತ್ತು FB ಹಳೆಯ ಪೋಸ್ಟ್ ನೆನಪಿಸಿದಾಗ ಇದೆಲ್ಲ ನೆನಪಾಯಿತು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...