Skip to main content

ಬೆಸ್ತರರಾಣಿ ಚಂಪಕಾ ವಿಮಶೆ೯ - 2

#ಜಾದುಗಾರ್_ಪ್ರಶಾಂತ್_ಹೆಗ್ಗಡೆ
 
 ನನ್ನ #ಬೆಸ್ತರರಾಣಿ_ಚಂಪಕಾ ಓದಿ ವಿಮಶೆ೯ ಮಾಡಿದ್ದಾರೆ .
    ಪ್ರಖ್ಯಾತ ಜಾದುಗಾರರಾಗಿ ನಾಡಿನಾದ್ಯಂತ ಜಾದು ಪ್ರದಶ೯ನ ನೀಡುವ ಪ್ರಶಾಂತ್ ಹೆಗ್ಗಡೆ ಮಲೆನಾಡಿನವರು ಈಗ ಶಿವಮೊಗ್ಗ ಪಟ್ಟಣ ವಾಸಿ ಇವರು ಬಾಲ್ಯದಲ್ಲಿ ಆನಂದಪುರಂ ನಲ್ಲಿ ರಜಾ ದಿನ ಕಳೆಯುತ್ತಿದ್ದರಂತೆ.
  ಆಗ ಆನಂದಪುರಂ ಪ್ರಖ್ಯಾತ #ಕೋಮಲಾ_ವಿಲಾಸ್ ಹೋಟೆಲ್ ನ ಮಾಲಿಕರಾದ ಕಿಣಿ ರಾಯರು ಮತ್ತು #ಜಯವೀರ_ನಾಯಕ್ ಇವರ ಬಂದುಗಳು.
  ಇವರ ಜಾದು ಪ್ರದಶ೯ನ ಆಯೋಜಿಸುವುದಿದ್ದರೆ ಇವರ ಸೆಲ್ ನಂಬರ್ 9844183344 ಗೆ ಸಂಪಕಿ೯ಸಿ.

ಬೆಸ್ತರ ರಾಣಿ ಚಂಪಕಾ
ಧನ್ಯವಾದ ಗಳು ಮಿತ್ರರಾದ  ,Arun Prasad ರವರಿಗೆ.
ತಾವು ಕಳಿಸಿದ ಪುಸ್ತಕ ಕೈ ಸೇರಿತು.
ಇದರ ಬಗ್ಗೆ ‌ನನಗೆ ಅನ್ನಿಸಿದ್ದನ್ನು ಬರೆದಿರುವೆ.
ಸುಮಾರು 1610 ರಲ್ಲಿ ನಡೆದಿರಬಹುದು ಎನ್ನಲಾದ ರಾಜಾ ವೆಂಕಟಪ್ಪ ನಾಯಕರ ಒಂದು ಪ್ರೇಮ ಕಥಾನಕ ದ ವಿಸ್ತಾರ ರೂಪವೇ ಬೆಸ್ರರಾಣಿ ಚಂಪಕಾ.
           ಚಂಪಕಾ ಳ ರಂಗೋಲಿ ಕಲೆಗೆ ಮಾರುಹೋಗಿ ಆಕೆಯ ಪ್ರೇಮದಲ್ಲಿ ಮುಳುಗಿ ರಾಜರು ಆಕೆಯನ್ನು ವಿವಾಹವಾಗುವ ತನಕವೂ ಮುಂದುವರೆಯುತ್ತದೆ .
ಮೊದಲೇ ಪುತ್ರಶೋಕದಿಂದ ನೊಂದಿದ್ದ ರಾಜರ ಮನ ಪರಿವರ್ತನೆ ಗಾಗಿ ಆಸ್ಥಾನದ ಸಿಬ್ಬಂದಿ ಕೂಡ ಇವರಿಬ್ಬರ ವಿವಾಹಕ್ಕೆ ಸಹಕರಿಸುತ್ತಾರೆ.ನಂತರದ ವಿಷಯಗಳೆ ಬಹಳ ಕುತೂಹಲ ಕಾರಿ.
          ಚಂಪಕಾ ಳು ತನ್ನದಲ್ಲದ ತಪ್ಪಿಗಾಗಿ ಎಲ್ಲರಿಂದಲೂ ಅವಹೇಳನ ಎದುರಿಸಬೇಕಾಗುತ್ತದೆ. ಮನವನ್ನು ‌ಕಲಕುವ ದುರಂತ ಕಥಾನಕ.
            ಯಡೆಹಳ್ಳಿಯಿಂದ ಆನಂದಪುರ ವಾದ ಬಗೆಯನ್ನು ಲೇಖಕರು ಬಹಳ ಚೆನ್ನಾಗಿ ಬಣ್ಣಿಸಿದ್ದಾರೆ. ಆಕೆಯ ನೆನಪಿಗಾಗಿ ಕಟ್ಟಿಸಿದ ಚಂಪಕ ಸರಸ್ಸು ಇಂದಿಗೂ ನಮಗೆ ನೋಡಲು ಸಿಗುತ್ತದೆ.
          ಕೇರಳದ ಆನಂದಪುರ ದ ಅನಂತ ಪದ್ಮನಾಭ ದೇವಾಲಯ ದ ನಿರ್ಮಾಣ, ಅಲ್ಲಿಯವರೆಗೂ ರಾಜಾ ವೆಂಕಟಪ್ಪ ನಾಯಕರ ಆಳ್ವಿಕೆಗೆ ಒಳಪಟ್ಟಿದನ್ನು ತಿಳಿಸುತ್ತದೆ.
         ‌‌ಮೊದಲಿನಿಂದ ಕೊನೆಯವರೆಗೂ ‌ಸರಾಗವಾಗಿ ಓದಿಸಿಕೊಂಡು ಹೋಗುವ ಹಾಗೆ ಬರೆದಿದ್ದಾರೆ ಲೇಖಕರಾದ  ಅರುಣ್ ಪ್ರಸಾದ್ ರವರು.
             ಮುಂದಿನ ದಿನಗಳಲ್ಲಿ ಅವರಿಂದ ಬಾರಾಪಂಥಿ ಸನ್ಯಾಸಿ ಗಳ ಬಗ್ಗೆ ಕೂಡ ಪುಸ್ತಕ ಮೂಡಿ ಬರಲಿ ಎನ್ನುವುದು ‌ನನ್ನ ಬಯಕೆ.
ಲೇಖಕರ ಪ್ರಯತ್ನ ಕ್ಕೆ ಶುಭವಾಗಲಿ ಎಂದು ಹಾರೈಸುತ್ತಾ ವಂದನೆಗಳೊಂದಿಗೆ
ಪ್ರತಿಗಳಿಗಾಗಿ ಶಿವಮೊಗ್ಗ ದ ಡಯಾನ ಹಾಗೂ ಸಾಗರದ ಶ್ರೀ ಟ್ರೇಡರ್ಸ್ ನಲ್ಲಿ ದೊರೆಯುತ್ತದೆ

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...