Skip to main content

ಬೆಸ್ತರ ರಾಣಿ ಚ೦ಪಕಾ ವಿಮಷೆ೯ - 4

#ಕೃಷ್ಣಮೂತಿ೯_ಎನ್
ಕನ್ನಡ ಉಪನ್ಯಾಸಕರು, ಶಿವಮೊಗ್ಗದ ಪ್ರತಿಷ್ಠಿತ ಡಿ.ವಿ.ಎಸ್ ಪದವಿ ಪೂವ೯ ಕಾಲೇಜಿನಲ್ಲಿ, ಇವರು ಆನಂದಪುರದವರು ಅವರ ಬಾಲ್ಯದಲ್ಲಿ ಚಂಪಕ ಸರಸ್ಸು ನಲ್ಲಿ ಆಡಿ ಬೆಳೆದವರು ಆನಂದಪುರದವರದ್ದೆ ವಿಮಶೆ೯ನನ್ನ ಕಾದ೦ಬರಿ  #ಬೆಸ್ತರರಾಣಿ_ಚಂಪಕಾ ಓದಿ ಬರೆದಿದ್ದಾರೆ.

        ಶ್ರೀ ಅರುಣ್ ಪ್ರಸಾದ್ ರವರೆ, ಕಾದಂಬರಿ ಬರೆಯುವುದು,ತಿದ್ದುವುದು, ಪ್ರಕಾಶರನ್ನು ಹುಡುಕುವುದು. ಮುದ್ರಣಕ್ಕೆ ಹಣಜೋಡಿಸುವುದು ಅಥವಾ ಇದ್ದ ಹಣ ವೆಚ್ಚಮಾಡುವುದು. ಎಲ್ಲವೂ ಪ್ರಯಾಸದ ಕೆಲಸವೇ. ಆದರೆ ತಮ್ಮ ‌ಆಸಕ್ತಿ ಮೆಚ್ಚುವಂತದ್ದು, ಏಕೆಂದರೆ ರಾಣಿ ಚಂಪಕಾಳ ಬಗ್ಗೆ, ಕೆಳದಿ ಸಂಸ್ಥಾನದ ದೊರೆ ವೆಂಕಟಪ್ಪನಾಯಕನ ಬಗ್ಗೆ  ತಾವು ಕಲೆ ಹಾಕಿರುವ ಮಾಹಿತಿ ಸುಲಭ ಸಾಧ್ಯ ವಾದುದಲ್ಲ. ತಾವೇ ಹೇಳಿಕೊಂಡಿರುವಂತೆ,#ಕಾದಂಬರಿ_ಕಾಲ್ಪನಿಕವಾದರೂ, ನಮ್ಮ ಊರಿನ ಬಗ್ಗೆ ಕತೆಯ ವಸ್ತು(ರಾಣಿಚಂಪಕಾ) ಕೇಂದ್ರೀಕೃತ ವಾಗಿರುವುದರಿಂದ ಓದುವಾಗ ಆನಂದಪುರ(ಆನಂದಪುರಂ), ಯಡೇಹಳ್ಳಿ ಹಾಗೂ ಸುತ್ತ ಮುತ್ತಲ ಊರು,ಗ್ರಾಮಗಳ ಹೆಸರು ಓದಿದಾಗ ಮನಸ್ಸಿಗೆ ಅಪ್ಯಾಯಮಾನವಾದ ಖುಷಿ ಯಾಗುತ್ತದೆ‌ ಹಾಗೆಯೇ ಗುಂಡಿಬಯಲು ಜಮೀನಿನ(ರಾಜ್ಯದ ಭತ್ತದ ಕಣಜ) ಪ್ರಾಮುಖ್ಯತೆ, ಅದರ ನೀರಿನ ಮೂಲಗಳ ಪ್ರಸ್ತಾಪ ಔಚಿತ್ಯ ಪೂರ್ಣವೆನಿಸುತ್ತದೆ.ಹಾಗೂ ಹೆಮ್ಮೆ,ಅಭಿಮಾನವೆನ್ನಿಸುತ್ತದೆ. ಆನಂದಪುರದಲ್ಲಿ ವಾಸವಿರುವ ಗಂಗಾಮತಸ್ಥರ(ಬೋವಿಗಳು) ಬಗ್ಗೆ, ಅವರ ಕಸುಬು,ಉಪಕಸುಬುಗಳ ಬಗ್ಗೆ ಬೆಳಕು ಚೆಲ್ಲಿರುವುದೂ ಕೂಡ ಗಮನಾರ್ಹ ವಿಷಯವಾಗಿದೆ‌.ರಾಣಿ ಚಂಪಕಾ ಗಂಗಮತಸ್ಥ ಜನಾಂಗಕ್ಕೆ ಸೇರಿದವಳೆಂಬುದು  ಆ ಜನಾಂಗದ ಪ್ರತಿಷ್ಠೆಯ ವಿಷಯ ಕೂಡವಾಗಿದೆ. ರಂಗೋಲಿಯ ಕಲಾತ್ಮಕತೆ ಬಗ್ಗೆ ಹೊಸದೊಂದು ಕಲ್ಪನೆಯನ್ನು ಕಟ್ಟಿಕೊಟ್ಟದ್ದೀರಿ.ವೆಂಕಟಪ್ಪ ನಾಯಕ ತನ್ನ ರಾಜ್ಯವನ್ನು ಎಷ್ಟುವಿಸ್ತಾರ(ಘಟ್ಟದ ಮೇಲೆ ಘಟ್ಟದ ಕೆಳಗೆ) ಗೊಳಿಸಿದ್ದನೆಂಬುದರಿಂದ ಅವನ ಸಾಮರ್ಥ್ಯದ ಅರಿವಾಗುತ್ತದೆ. ಒಟ್ಟಾರೆ ತಮ್ಮ ಪ್ರಥಮ ಪ್ರಯತ್ನ ಯಶಸ್ಸನ್ನು ಕಂಡಿದೆ ಎಂಬುದು ನನ್ನ ಭಾವನೆ. ನಮ್ಮೂರಿಗೆ, ನಮ್ಮೂರಿನವರಿಗೆ ಆನಂದಪುರ,ಯಡೇಹಳ್ಳಿಗಳು ಐತಿಹಾಸಿಕ ಪ್ರದೇಶ ಗಳೆಂಬುದನ್ನು ಪುನರ್ ಮನನ ಮಾಡಿದ್ದಕ್ಕಾಗಿ ಅನಂತ ವಂದನೆಗಳು.
 💐   ನಿಮ್ಮವ, 
ಎನ್.ಕೃಷ್ಣ ಮೂರ್ತಿ ಕನ್ನಡ ಉಪನ್ಯಾಸ ಕ,ಡಿವಿಎಸ್ ಪದವಿಪೂರ್ವ (ಸ್ವತಂತ್ರ)ಕಾಲೇಜು, ಶಿವಮೊಗ್ಗ.*

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...