Skip to main content

ಬೊನ್ಸಾಯ್ ಶ್ರೀನಿವಾಸರು ತಮ್ಮ ಜೀವಮಾನದ ಬೊನ್ಸಾಯ್ ಸಂಗ್ರಹವನ್ನು ತಮ್ಮ ತಂದೆ ತಾಯಿ ಹೆಸರಲ್ಲಿ ಬೆಂಗಳೂರಿನ ಲಾಲ್ ಬಾಗ್ ಗೆ ಅಪಿ೯ಸಿದ್ದಾರೆ ಅದರ ಮೌಲ್ಯ ಕೊಟ್ಯಾಂತರ ರೂಪಾಯಿ

#ಬೊನ್ಸಾಯ್_ಶ್ರೀನಿವಾಸರ_ದೇಶಪ್ರೇಮ
 
   ಬೊನ್ಸಾಯ್ ತಮ್ಮ ಹೆಸರಿನ ಮುಂದಿರುವ ಶ್ರೀನಿವಾಸರು ಕನ್ನಡಿಗರು ಇವರು ಜಪಾನ್ ನ ಕಲೆ ಕುಬ್ಜ ಸಸ್ಯಗಳನ್ನ ಬೆಳೆಸಿ ಸಂಗ್ರಹಿಸುವುದರಲ್ಲಿ ಪರಿಣಿತರು.
  ಸುಮಾರು 50 ವರ್ಷದ ಟೇಬಲ್ ಮೇಲಿಡುವ ಅರಳಿ ಮರ ಒಂದು ಅಡಿಗಿಂತ ಕಡಿಮೆ ಇಂತಹ ನೂರಾರು ಸಂಗ್ರಹ ಅವರಲ್ಲಿದೆ.
   ಇವರ ಬಗ್ಗೆ ಸಾಗರದ ಕವಲಗೋಡು ವಿಜ್ಞಾನ ಕೇಂದ್ರ ಪುಸ್ತಕ ಒಂದನ್ನು 2000 - 2003 ರಲ್ಲಿ ಪ್ರಕಟಿಸಿದ್ದರು ಮಿತ್ರ ಕವಲಗೋಡು ವೆಂಕಟೇಶ್ ಕಳಿಸಿದ್ದರು.
   2004ರಲ್ಲಿ ನಾನು ಬೆಂಗಳೂರು ವಾಸಿ ಪ್ರತಿ ದಿನ ಲಾಲ್ ಬಾಗ್ ನಲ್ಲಿ ವಾಕಿಂಗ್ ಮತ್ತು ಅಲ್ಲಿನ ತೋಟಗಾರಿಕಾ ಇಲಾಖಾ ಕಚೇರಿಯಲ್ಲಿ ಯಾವುದೋ ಕೆಲಸಕ್ಕಾಗಿ ನಿತ್ಯ ಅಲೆದಾಟ ಆ ಸಂದಭ೯ದಲ್ಲಿ ಲಾಲ್ ಬಾಗ್ ನ ದಕ್ಷಿಣ ಭಾಗದ ಪ್ರವೇಶದ ಹೆಬ್ಬಾಗಿಲ ಬಲ ಭಾಗದಲ್ಲಿ ಬೊನ್ಸಾಯ್ ಪಾಕ್೯ ನಿಮಾ೯ಣ ಆಗುವುದು ನೋಡಿ ಅಲ್ಲಿ ವೀಕ್ಷಿಸುತ್ತಿದ್ದೆ.
   ಅಲ್ಲಿ ಕೆಲಸ ನಿವ೯ಹಿಸುವವರಿಗೆ ಇದು ಯಾರು ಮಾಡಿದ್ದು ಅಂತೆಲ್ಲ ಕೇಳಿದರೆ ಅವರಿಗೆ ಗೊತ್ತಿಲ್ಲ, ಬೆಂಗಳೂರಿನ ಬೊನ್ಸಾಯಿ ಶ್ರೀನಿವಾಸ್ ಅಂತ ಒಬ್ಬರಿದ್ದಾರೆ ಅವರು ಇದರಲ್ಲಿ ಪೇಮಸ್ ಅಂತ ಜೊತೆಯಲ್ಲಿದ್ದ ಗೆಳೆಯರಿಗೆ ಹೇಳುತ್ತಿದ್ದಾಗ " ನಾನೇ ಬೊನ್ಸಾಯ್ ಶ್ರೀನಿವಾಸ್" ಅಂತ ಗಿಡದ ಮರೆಯಿಂದ ಎದ್ದು ಬಂದರು.
  ಪರಸ್ಪರ ಪರಿಚಯ ಅವರ ಪುಸ್ತಕದ ಬಗ್ಗೆ ಎಲ್ಲಾ ಮಾತಾಡಿದರು, ಅವರ ತಂದೆ ತಾಯಿ ಹೆಸರಲ್ಲಿ ಲಾಲ್ ಬಾಗ್ ಗೆ ಅವರಲ್ಲಿರುವ ಎಲ್ಲಾ ಸಂಗ್ರಹ ದಾನ ಮಾಡಿದ್ದಾರೆ, ಮಾರಾಟ ಮಾಡುವುದಾದರೆ ಕೊಟ್ಯಾಂತರ ಹಣಕ್ಕೆ ಖರೀದಿಸುವವರಿದ್ದರು ತಿರಸ್ಕರಿಸಿದ್ದಾಗಿ ತಿಳಿಸಿದರು.
  ಅವರ ಜೊತೆ ನೆನಪಿಗಾಗಿ ಲಾಲ್ ಬಾಗ್ ನಲ್ಲಿ ತೆಗೆದ ಪೋಟೋಗೆ 16 ವಷ೯ ಆಯಿತು, ಈ ಬಾರಿ ಬೆಂಗಳೂರಿಗೆ ಹೋದಾಗ ಲಾಲ್ ಬಾಗ್ ನವರು ಹೇಗೆ ಕಾಪಾಡಿದ್ದಾರೆ ಇವರು ದಾನವಾಗಿ ನೀಡಿದ ಬೊನ್ಸಾಯ್ ಪಾಕ್೯ ಅಂತ ನೋಡಬೇಕು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...