Skip to main content

ಕೃಷಿಯಲ್ಲಿ ಸಾದನೆ ಮಾಡಿದ ಅನಾನಸ್ ಕಿಂಗ್ ಬಿರುದಾಂಕಿತ ಡಾ. ರೋಪ್ ಸಾಹೇಬರ ನೆನಪು

#ರೋಪ್_ಸಾಹೇಬರು_ಡಾಕ್ಟರ್_ಆದ_ಕಥೆ.
 
   ಇವರಿಗೆ ಕನಾ೯ಟಕದ ಪೈನಾಪಲ್ ಕಿಂಗ್ ಎಂಬ ಅನ್ವಥ೯ ನಾಮವೂ ಇದೆ, ಇವರ ಸಾದನೆ ಆ ಮಟ್ಟದ್ದು.
  ಉ.ಕ.ಜಿಲ್ಲೆಯ ಬನವಾಸಿಯ ಇವರಿಗೆ 2006ರಲ್ಲಿ ದಾರವಾಡದ ಕೃಷಿ ವಿಶ್ವವಿದ್ಯಾಲಯ ಡಾಕ್ಟರೇಟ್ ಪ್ರದಾನ ಮಾಡಿದ್ದು ದೊಡ್ಡ ಸುದ್ದಿ ಆಗಿತ್ತು.
  ಈಗೆಲ್ಲ ಡಾಕ್ಟರೇಟ್ ಅಗ್ಗ ಆದರೆ ಅವಾಗ ಅದಕ್ಕೆ ಘನತೆ ಇತ್ತು. 
  ರೋಪ್ ಸಾಹೇಬರಿಗೆ ಡಾಕ್ಟರೇಟ್ ಕೊಟ್ಟ ಬಗ್ಗೆ ಅಪಸ್ವರವೂ ಇತ್ತು ಕಾರಣ ಇವರು ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಬಳಕೆ ವಿಪರೀತ ಅಂತ.
  ಇವರನ್ನ ಬೇಟಿ ಮಾಡಲೇ ಬೇಕೆಂದು ಯೋಚಿಸುವಾಗಲೇ ಸೊರಬ ಮೂಲದ ಸಾಗರ ತಾಲ್ಲೂಕಿನ ಭೂ ಅಭಿವೃದ್ದಿ ಬ್ಯಾಂಕಿನ ಉದ್ಯೋಗಿ ಆಗಿದ್ದ ಜಾನಕಪ್ಪನವರು ಡಾಕ್ಟರ್ ರೋಪ್ ಸಾಹೇಬರ ಸಾದನೆ ಬಗ್ಗೆ ಹೇಳಿದಾಗ ನನಗೆ ಅವರ ಹತ್ತಿರ ಕರೆದೊಯ್ದು ಪರಿಚಯಿಸಲು ವಿನಂತಿಸಿದ್ದೆ.
  ನಿಗದಿತ ಬೆಳಿಗ್ಗೆ ಸೊರಬ ಮಾಗ೯ವಾಗಿ ಬನವಾಸಿ ತಲುಪಿ ಅವರ ಮನೆಯಲ್ಲಿ ಅವರ ಅಗಮನಕ್ಕೆ ಕಾಯುವಾಗ ಮುಂಬೈನ ನನ್ನ ಗೆಳೆಯ ವಿಜಯ್ ಗಡ್ಕರ್ ಅವರ ಮನೆಯ ಡೈನಿಂಗ್ ಹಾಲ್ ನಿಂದ ಬಂದಾಗ ಇಬ್ಬರಿಗೂ ಆಶ್ಚಯ೯.
  ಹಿಂದೆಯೇ ಬಂದ ರೋಪ್ ಸಾಹೇಬರಿಗೂ, ನನ್ನ ಗೆಳೆಯ ಅವರ ಅನಾನಸ್ ಹಣ್ಣಿನ ಸಂಸ್ಕರಣ ಘಟಕದ ಯಂತ್ರೋಪಕರಣ ಸರಬರಾಜು ಮಾಡಿದ್ದ ಕಾರಣ ಅವರ ಅತಿಥಿ ಆಗಿದ್ದರು ಇದರಿಂದ ರೋಪ್ ಸಾಹೇಬರ ನನ್ನ ಪರಿಚಯ, ಚಚೆ೯ ಸರಾಗವಾಯಿತು.
  ಎಕರೆ ಒ0ದರಲ್ಲಿ ಸರಾಸರಿ 30 ಟನ್ ಅನಾನಸ್ ಬೆಳೆ ತೆಗೆಯುವ ಇವರ ವಿಧಾನವೇ ಬಿನ್ನ, ಇವರಿಂದ ಅನಾನಸ್ ಬೆಳೆಯ ಹಬ್ ಆಗಿದೆ ಬನವಾಸಿ.
  ಅನಾನಸ್ ಒಯ್ಯಲು ದೂರದ ದೆಹಲಿ ಪಂಜಾಬಿನಿಂದ ಖರೀದಿದಾರರು ಬರುತ್ತಾರೆ.
  ಇವರದ್ದೇ ಸ್ವಂತ ಅನಾನಸ್ ಹಣ್ಣು ಸಂಸ್ಕರಣ ಘಟಕ ಸ್ಥಾಪಿಸಿದ್ದಾರೆ ದಿನಕ್ಕೆ 10 ರಿಂದ 20 ಟನ್ ಸಂಸ್ಕರಣ ಮಾಡುತ್ತದೆ.
  ಇವರ ಪುತ್ರ ಸಿಸಿ೯ ರಸ್ತೆಯಲ್ಲಿ ಇನ್ನೊಂದು ಸಂಸ್ಕರಣ ಘಟಕ ಸ್ಥಾಪಿಸಿದ್ದಾರೆ.
  ಇವರ ಕೃಷಿ ವಿದಾನ ವಿಬಿನ್ನ ನೂರಾರು ಎಕರೆ ಕುಷ್ಕಿ ಜಮೀನು ಅನಾನಸ್ ಬೆಳೆಯಲು ಗುತ್ತಿಗೆಗೆ ಪಡೆಯುತ್ತಾರೆ ಅಲ್ಲಿ ನೀರಿಗಾಗಿ ಬೋರ್ ವೆಲ್ ತೆಗೆಸುತ್ತಾರೆ ನಂತರ ದೊಡ್ಡ ಮಟ್ಟದ ಅನಾನಸ್ ಕೃಷಿ ಪ್ರಾರಂಬಿಸುತ್ತಾರೆ, ಅನಾನಸ್ ಬೆಳೆ ತೆಗೆದು ಲಾಭದಿಂದ ಅದೇ ಜಮೀನು ಖರೀದಿಸಿ ಬಾಳೆ ಹಾಕಿ ಅದರ ಮಧ್ಯ ಅಡಿಕೆ ಹಾಕುತ್ತಾರೆ ಆರೇಳು ವರ್ಷದಲ್ಲಿ ಅದನ್ನು ಅತ್ಯುತ್ತಮ ಅಡಿಕೆ ತೋಟವಾಗಿ ಬದಲಿಸಿಬಿಡುವ ಕುಶಾಗ್ರಮತಿ ಅವರು.
  2007 ರಲ್ಲಿ ಅವರ ಹಿಡಿತದಲ್ಲಿ 2000 ಎಕರೆಗೂ ಹೆಚ್ಚಿನ ಜಮೀನು ಅನಾನಸ್, ಬಾಳೆ ಮತ್ತು ಅಡಿಕೆ ಬೆಳೆ ಇತ್ತು.
   ಅವರ ಬಾಲ್ಯದಲ್ಲಿ ಬಡತನದ ಬೇಗೆಯಲ್ಲಿ ಬಂದದ್ದು, ಸುರಿಗಿ ಹೂವಿನ ದಂಡೆ ಮಾರಿ ಜೀವನ ಮಾಡಿದ್ದು ನೆನಪಿಸಿಕೊಂಡಾಗ ಅವರ ಕಣ್ಣು ತೇವ ಆಗಿತ್ತು.
  ಪ್ರಾಥಮಿಕ ಶಿಕ್ಷಣವೂ ಪೂಣ೯ ಮಾಡಲಾಗದ ಬಡತನ ಈಗಿನ ಕೃಷಿ ಸಾಹಸದಿಂದ ಕೃಷಿ ವಿಶ್ವವಿದ್ಯಾಲಯ ಒ೦ದು ಗೌರವ ಡಾಕ್ಟರೇಟ್ ಕೊಡುವ ಮಟ್ಟಕ್ಕೆ ಬೆಳೆದಿದ್ದನ್ನ ಸ್ವತಃ ಅವರೇ ಅವರು 1972 ರಲ್ಲಿ ಖರೀದಿಸಿದ ಹಳ್ಳಿ ಕೊಪ್ಪದ ತೋಟದಲ್ಲಿ ವಿವರಿಸಿ ನಮಗೆಲ್ಲ ಎಳನೀರು ಕುಡಿಸಿ, ತಿನ್ನಲು ಅನಾನಾಸ್ ಕೊಟ್ಟು ಜೊತೆಗೆ ಸಂಸ್ಕರಿಸಿದ ಅನಾನಸ್ ಟಿನ್ ಗಳನ್ನ ಕೊಟ್ಟಿದ್ದು ಮೊನ್ನೆ 16 ಅಕ್ಟೋಬರ್ 2020 ರಂದು ಡಾಕ್ಟರ್ ರೋಪ್ ಸಾಹೇಬರು ಇಹ ಲೋಕ ತ್ಯಜಿಸಿದ ಸುದ್ದಿ ತಿಳಿದಾಗ ನೆನಪಾಯಿತು.
  ಇವರ ಹತ್ತಿರ ಅವತ್ತು ದಾಸ್ತಾನಿದ್ದ ಕಾಳು ಮೆಣಸು ಒ0ದು ಸಾವಿರ ಕ್ವಿಂಟಾಲ್ ಗೂ ಹೆಚ್ಚು.
   ಕೃಷಿ ಒಂದನ್ನ ಕೈಗಾರಿಕೆ ಮಾಡಿ ಯಶಸ್ವಿ ಆದ ಡಾಕ್ಟರ್ ಅಬ್ದುಲ್ ರೋಪ್ ಅಬ್ದುಲ್ ಕರೀಂ ಶೇಖ್ ಬನವಾಸಿ ಇನ್ನು ನೆನಪು ಮಾತ್ರ ಆದರೆ ಅವರ ಕೃಷಿ ಸಾಧನೆ ಮುಂದಿನ ತಲೆಮಾರಿಗೂ ಒಂದು ಸಾಧನೆಯ ಕೈಪಿಡಿ ಆಗಿದೆ.
   ರಾಜ್ಯದ ಅನಾನಸ್ ಹಣ್ಣಿನ ಕಿಂಗ್ ರ ಸಾಧನೆ ಸಣ್ಣದಲ್ಲ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...