Skip to main content

ಕೊಡಚಾದ್ರಿಯ ಮೂಲ ಮೂಕಾಂಬಿಕ ಸನ್ನಿದಾನದಲ್ಲಿ ನೆರವೇರಿಸುವ ಶಕ್ತಿ ಪೂಜೆಗೆ ಮಹತ್ವ ಇದೆ

#ಕೊಡಚಾದ್ರಿಯ_ಮೂಲಮೂಕಾಂಬಿಕ_ಸನ್ನಿದಾನದಲ್ಲಿನ_ಶಕ್ತಿಪೂಜೆ
 
  ಶಿವಮೊಗ್ಗ ಜಿಲ್ಲೆಯ ಕೊಡಚಾದ್ರಿ ಬೆಟ್ಟದಲ್ಲಿರುವ ಮೂಲ ಮೂಕಾಂಬಿಕ ದೇವರ ಸನ್ನಿದಿಗೆ ಪುರಾಣದ ಇತಿಹಾಸ ಇದೆ ಆದರೆ ಇದು ನಮ್ಮ ರಾಜ್ಯದ ಕನ್ನಡಿಗರಿಗಿಂತ ಕೇರಳ ಮತ್ತು ತಮಿಳುನಾಡಿಗರಿಗೆ ಹೆಚ್ಚು ಗೊತ್ತು.
  ಕೊಲ್ಲೂರು ಮೂಕಾಂಬಿಕ ದರ್ಶನಕ್ಕೆ ಬಂದವರು ಕೊಡಚಾದ್ರಿ ಮೂಲ ಮೂಕಾಂಬಿಕ ದೇವಿ ದಶ೯ನ ಮಾಡಿ ಅಲ್ಲಿರುವ ಬಾರಾಪಂಥ ಯೋಗಿಗಳ ಸಿದ್ಧ ಪೀಠ ಮತ್ತು ಅದರ ಎದುರಿನ ಪುರಾತನ ಕಬ್ಬಿಣದ ಸ್ಥಂಭ ಮತ್ತು ಶಿಖರದ ಮೇಲಿನ ಸವ೯ಜ್ಞ ಪೀಠ ನಂತರ ಶಂಕರಾಚಾಯ೯ರು ತಪಸ್ಸುಗೈದ ಚಿತ್ರ ಮೂಲದ ಗುಹೆಯಲ್ಲಿ ಧ್ಯಾನ ಮಾಡಿ ವಾಪಾಸ್ ಬರುತ್ತಾರೆ.
   ಈಗ ಇಲ್ಲಿಗೆ ಸವ೯ ಋತು ರಸ್ತೆ ಇಲ್ಲವಾದರೂ ಸಾದಾರಣ ರಸ್ತೆ ಜೀಪುಗಳಲ್ಲಿ ಪ್ರಯಾಣಿಸಲು ಸಾಧ್ಯವಿದೆ ಆದರೆ ಈ ಮೂಲ ಮೂಕಂಬಿಕ ದೇವಸ್ಥಾನದ ಅಚ೯ಕರಾದ ಬಳೆಗಾರ ಜೋಗಿ ಸಮಾಜದ ಕುಟುಂಬಕ್ಕೆ 800 ವರ್ಷದ ಇತಿಹಾಸ ಇದೆ ಆಗೆಲ್ಲ ರಸ್ತೆ ಇಲ್ಲ ವಾಹನ ಇಲ್ಲ ಆದರೂ ಇವರು ನಿರಂತರ ಪೂಜೆ ನಡೆಸಿಕೊಂಡು ಬಂದವರು, ನಾರಾಯಣ ಜೋಗಿ ಮತ್ತು ಕಾವೇರಮ್ಮ ದಂಪತಿ, ಅವರ ಅಳಿಯ ರಾಮ ಜೋಗಿ ಮತ್ತು ಮಗಳು ಸುಶೀಲಮ್ಮ ದಂಪತಿ ಅವರ ಮಗ ನಾಗೇಂದ್ರ ಜೋಗಿ ತನಕ ಜನ ಗುರುತಿಸುತ್ತಾರೆ ಅದಕ್ಕೂ ಹಿಂದಿನ ಅಚ೯ಕ ಕುಟುಂಬ ಸ್ಥಳಿಯರಿಗೆ ನೆನಪಿನಲ್ಲಿ ಉಳಿದಿಲ್ಲ. ಪ್ರತಿ 12 ವರ್ಷಕ್ಕೊಮ್ಮೆ ಬಾರಾಪಂತ ಯಾತ್ರೆ ನಾಸಿಕ್ ನಿಂದ ಕೊಡಚಾದ್ರಿಗೆ ಬರುತ್ತಿತ್ತು ಕಾರಣ ಮೂಲ ಸಿದ್ದ ಪೀಠ ಇಲ್ಲಿಯೇ ಇತ್ತು ಕಾಲ ಕ್ರಮೇಣ ಸಿದ್ಧಪೀಠ ಕೊಡಚಾದ್ರಿಯ ಬುಡದ ಕಮಲಶಿಲೆ ಸಮೀಪದ ಹಲವಾರಿ ಮಠಕ್ಕೆ ಸ್ಥಳಾಂತರ ಆಗಿರಬೇಕು.
  ಈ ದೇವಾಲಯ ಮುಜರಾಯಿ ಇಲಾಖೆಗೆ ಸೇರಿದೆ, ಮೈಸೂರು ಮಹಾರಾಜರಾದ ಕೃಷ್ಣರಾಜ ಒಡೆಯರ್ ಇಲ್ಲಿ ತಂಗಿ ಮೂಲ ಮೂಕಾಂಬಿಕ ತಾಯಿ ಪೂಜಿಸಿದ ಇತಿಹಾಸ ದಾಖಲೆ ಇದೆ. ಈಗ ಆಗು೦ಬೆಯಲ್ಲಿ ವರ್ಷಕ್ಕೊಮ್ಮೆ ಕಾಣುವ ಕಾಡಾನೆ ಒ0ದು ದಿನ ಸಂಜೆ ಮೂಲ ಮೂಕಾಂಬಿಕ ದೇವಾಲಯದ ಎದುರು ಬಂದು ಘೀಳಿಟ್ಟಾಗ ನೆರೆದ ಭಕ್ತರು ಪ್ರವಾಸಿಗಳು ತುಂಬಾ ಭಯ ಪಟ್ಟಿದ್ದರಂತೆ ನಂತರ ಹಾಗೇ ವಾಪಾಸು ಹೋಗಿದ್ದು ಇಲ್ಲಿಯವರು ನೆನಪಿಸುತ್ತಾರೆ.
   ಇಲ್ಲಿ ನಡೆಯುವ ಶಕ್ತಿ ಪೂಜೆಗೆ ವಿಶೇಷ ಶಕ್ತಿ ಇದೆ ಎಂಬ ಪ್ರತೀತಿ ಇದೆ, ಶಕ್ತಿ ಪೂಜೆಗೆ ಹೆಚ್ಚು ಜನ ಕೇರಳದಿಂದ ಬರುತ್ತಾರೆ.
  ಈ ಶಕ್ತಿ ಪೂಜೆ ನಡೆದು ಬಂದದ್ದು ಈಗಿಂದಲ್ಲ ಸಾವಿರಾರು ವರ್ಷದಿಂದ.
   ಈ ಪೂಜೆಗೆ ಸುಮಾರು 3 ಸಾವಿರದಿಂದ 4 ಸಾವಿರ ಖಚಾ೯ಗುತ್ತದೆ (ಬಲಿ ಪೂಜೆ ಸೇರಿ) ನಾನು ಇಲ್ಲಿನ ಶಕ್ತಿ ಪೂಜೆಯಲ್ಲಿ  ಸಂಪೂಣ೯ ಭಾಗವಹಿಸಿದ್ದೆ 8 ವರ್ಷದ ಹಿಂದೆ.
   ಅನೇಕರು ಸಾವಿರಾರು ವರ್ಷದ ಈ ಶಕ್ತಿ ಪೂಜೆ ನಿಲ್ಲಿಸಲು ಪ್ರಯತ್ನಿಸಿ ವಿಫಲರಾದ ಉಧಾಹರಣೆ ಇದೆ.
  ರಾಜ್ಯ ಸಕಾ೯ರ ಇದನ್ನೆಲ್ಲ ಸಮಪ೯ಕ ವಾಗಿ ಬಳಸಿ ಇದನ್ನು ಪ್ರಮುಖ ಪೂಜಾ ಪ್ರವಾಸಿ ಕೇಂದ್ರ ಮಾಡಬಹುದು.
  ಪ್ರಸಿದ್ಧ ಸ್ವಾಮಿ ಒಬ್ಬರು ಇಲ್ಲಿನ ಶಕ್ತಿ ಪೂಜೆ ನಿಲ್ಲಿಸಲು ಪ್ರಯತ್ನಿಸಿ ವಿಫಲರಾದ ಕಥೆ ಇಲ್ಲಿನ ಅಚ೯ಕರ ಪತ್ನಿ ಸುಶೀಲಮ್ಮ ರಾಮ ಜೋಗಿ (ಈಗ ಇಲ್ಲ) ಅವರು ನನಗೆ ವಿವರಿಸಿದ್ದರು.
  ಹಿಂದಿನ ದಿನವೇ ಬೆಟ್ಟಕ್ಕೆ ಬಂದು ಪರಮೇಶ್ವರ ಭಟ್ಟರ ಅಥಿತಿ ಆಗಿ ತಂಗಿದ್ದ ಸ್ವಾಮಿ ಬೆಳಿಗ್ಗೆ ಮೂಲ ಮೂಕಾಂಬಿಕ ದಶ೯ನಕ್ಕೆ ಬಂದವರು ಒ0ದು ಹುಕುಂ ಮಾಡುತ್ತಾರೆ " ಇವತ್ತಿಂದ ಇಲ್ಲಿ ಶಕ್ತಿ ಪೂಜೆಯ ಬಲಿ ನಡೆಸಬಾರದು" ಅಂತ ಆಗ ಸುಶೀಲಮ್ಮ ಗುರುಗಳೇ ನೀವೇ ದೇವಿಯ ಪೂಜೆ ಮಾಡಿ ಆರತಿ ಬೆಳಗಿ ಈ ರೀತಿ ಆದೇಶ ನೀಡಿ, ನಾವು ಪಾಲಿಸುತ್ತೇವೆ ಏಕೆಂದರೆ ಈ ವರೆಗೆ ಅನೇಕ ಅಧಿಕಾರಿಗಳು ಈ ರೀತಿ ಆದೇಶ ಮಾಡಿ ಹೋದವರೇ ಪುನಃ ಬಂದು ಪ್ರಾರಂಬಿಸಿ ಅಂದ ಉದಾಹರಣೆ ಇದೆ " ಅಂದಾಗ ಕಣ್ಣು ಮುಚ್ಚಿ ಪ್ರಾಥಿ೯ಸಿದ ಆ ಸ್ವಾಮಿಗಳು ನಂತರ "ಈಗ ಹೇಗೆ ನಡೆಯುತ್ತಿದೆ ಹಾಗೆ ಮುಂದುವರಿಯಲಿ " ಎಂದರಂತೆ.
  ಬಲಿ ಪೂಜೆ ನಿಲ್ಲಿಸಿದರೆ ಆಗಮ ಪೂಜೆಗಾಗಿ ಅಚ೯ಕರ ನೇಮಿಸಿ ತಲತಲಾಂತರದಿಂದ ನೂರಾರು ವಷ೯ದಿಂದ ಕೊಡಚಾದ್ರಿಯ ಬೀಕರ ಮಳೆ ಗಾಳಿ ಚಳಿಯಲ್ಲಿ ಪೂಜೆ ನಡೆಸಿದ ಬಳೆಗಾರ ಅರ್ಚಕರನ್ನ ಬದಲಿಸ ಬೇಕೆಂಬ ಸಣ್ಣತನದ ಅನೇಕರ ಬಯಕೆ ಈಡೇರಲಿಲ್ಲ.
  ನೂರಾರು ವರ್ಷದಿಂದ ಹೊಟ್ಟಿ ಬಟ್ಟೆ ಕಟ್ಟಿ ಮೂಲ ಮೂಕಾಂಬಿಕ ದೇವಿಯ ಸೇವೆ ಮಾಡಿದ ಈ ಬಳೆಗಾರ ಕುಟುಂಬದ ನಾಗೇಂದ್ರ ಜೋಗಿ ಈಗ ವ್ಯವಹಾರ ಕೃಷಿ ಮತ್ತು ರಾಜಕೀಯದಲ್ಲಿ ಸಕ್ರಿಯ ಆಗಿರುವುದು ಅನೇಕರ ಹೊಟ್ಟೆ ಕಿಚ್ಚಿಗೆ ಕಾರಣ ಆಗಿದ್ದು ಸುಳ್ಳಲ್ಲ.
  ಈಗ ಸಂಜೆ 6 ರ ಒಳಗೆ ಬೆಟ್ಟಕ್ಕೆ ಹೋದವರು ಕಡ್ಡಾಯವಾಗಿ ವಾಪಾಸ್ ಬರಲೇ ಬೇಕಾದ ವನ್ಯಜೀವಿ ಅರಣ್ಯದ ಕಾನೂನು ಬೇರೆ ಇದೆ ಹಾಗಾಗಿ ಇಲ್ಲಿ ಶಕ್ತಿ ಪೂಜೆ ಕಷ್ಟಸಾಧ್ಯವಾಗಿದೆ.
  ಇಲ್ಲಿ ಶಕ್ತಿ ಪೂಜೆ ಮಾಡಿದರೆ ಶತ್ರು ನಾಶ ಎಂಬ ಪ್ರತೀತಿ ಇದೆ ಇಲ್ಲಿ ಶಕ್ತಿ ಪೂಜೆ ಮಾಡಿಸಬೇಕೆಂಬ ಅಪೇಕ್ಷೆ ಇದ್ದವರು ಮಾಹಿತಿಗಾಗಿ ಇಲ್ಲಿನ ಪರಂಪರಾ ಅಚ೯ಕ ಕುಟುಂಬದ ನಾಗೇಂದ್ರ ಜೋಗಿ (ಮಾಜಿ ಗ್ರಾ.ಪಂ ಅಧ್ಯಕ್ಷರು ನಿಟ್ಟೂರು ) ಇವರನ್ನ ಸಂಪಕಿ೯ಸ ಬಹುದು ಇವರ ಸಂಪರ್ಕ ಸೆಲ್ ನಂಬರ್ 9449500806

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ