Skip to main content

ಚಿಕ್ಕಮಗಳೂರು ಜಿಲ್ಲೆಯ ಹೊಯ್ಸಳ ಖ್ಯಾತಿಯ ವಾಸಂತಿಕಾ ಪರಮೇಶ್ವರಿ ದೇವಸ್ಥಾನದ ಪ್ರದಾನ ಅಚ೯ಕರು ಸಾಗರ ತಾಲ್ಲೂಕಿನ ಕರೂರು ಮೂಲದವರು, ಇಲ್ಲಿನ ಎರೆಡು ಬೃಹದಾಕಾರದ ಸಂಪಿಗೆ ಮರ ಒಂದು ಸಾವಿರ ವರ್ಷದ ಪುರಾತನದ್ದು ಎಂದು ಸಾಬೀತಾಗಿದೆ.

#ಐತಿಹಾಸಿಕ_ಹೊಯ್ಸಳ_ಖ್ಯಾತಿಯ_ವಾಸಂತಿಕ_ದೇವಾಲಯದ_ಪ್ರದಾನ_ಅಚ೯ಕರ_ವಿಮಷೆ೯

 ಚಿಕ್ಕಮಗಳೂರು ಜಿಲ್ಲೆಯ ಮುಡಿಗೆರೆ ತಾಲ್ಲೂಕಿನ ಅಂಗಡಿ ಗ್ರಾಮದ ಪುರಾಣ ಪ್ರಸಿದ್ದ ವಾಸಂತಿಕ ದೇವಸ್ಥಾನ ಐತಿಹಾಸಿಕವಾಗಿಯೂ ಪ್ರಮುಖ ಸ್ಥಳ ಹೊಯ್ಸಳ ವಂಶ ಸ್ಥಾಪಕಕ ಸಳ ತನ್ನ ವಿದ್ಯಾಬ್ಯಾಸದ ಕಾಲದಲ್ಲಿ ಗುರುಗಳ ಆದೇಶ "ಹೊಯ್ - ಸಳ " ಎಂದಿದ್ದರಿಂದ ಎದುರಿಗೆ ಬಂದಿದ್ದ ಹುಲಿ ಸಂಹಾರ ಮಾಡಿದ್ದ ಸ್ಥಳವೂ ಇದೇ.
  ಈ ದೇವಾಲಯದ ಎದುರು ಬೃಹದಾಕಾರದ ಎರೆಡು ಸಂಪಿಗೆ ಮರವೂ ಇದೆ, ಇದನ್ನ ಕಾಬ೯ನ್ ಟೆಸ್ಟಿಂಗ್ ನಲ್ಲಿ ಒಂದು ಸಾವಿರ ವರ್ಷ ಪುರಾತನವಾಗಿದ್ದೆಂದು ಸಾಬೀತಾಗಿದೆ.
  ವಾಸಂತಿಕ ದೇವಿ ವಿಗ್ರಹ  ಮಣ್ಣಿನದ್ದು (ಕಡು ಶಾಕ೯ರ ಪಾಕ), ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯವರಿಗೆ ಇದೆಲ್ಲ ಗೊತ್ತಿದೆ ಆದರೆ ರಾಜ್ಯದ ಇತರ ಜಿಲ್ಲೆಯವರಿಗೆ ಇದರ ಮಾಹಿತಿ ಕಡಿಮೆ, ನಾನು ಈ ದೇವಾಲಯ ನೋಡಿದ್ದೇನೆ.
 ಈ ದೇವಾಲಯದ ಪ್ರದಾನ ಅಚ೯ಕರು #ಕಮಕೋಡು_ದತ್ತಾತ್ರೇಯ ಭಟ್ಟರು ಇವರು ಸಾಗರ ತಾಲ್ಲೂಕಿನ ಕರೂರು ಹೋಬಳಿ ಮೂಲದವರು, ಇವರು ನಿಟ್ಟೂರು ಸಮೀಪದ ಮುಳುಗಡೆ ಆದ ಕಮಕೋಡಿನವರು ಈ ಊರು ಕೆಳದಿ ಸಂಸ್ಥಾನದ ಸೈನಿಕ ತರಬೇತಿ ಪ್ರದೇಶ ಇದನ್ನೆಲ್ಲ ಇಲ್ಲಿ ಉಲ್ಲೇಖಿಸಲು ಕಾರಣ ನನ್ನ ಬೆಸ್ತರ ರಾಣಿ ಚಂಪಕಾ ಇವರು ಓದಿದ್ದಾರೆ ಮತ್ತು ಈ ಪುಸ್ತಕದ ವಿಮಷೆ೯ #ನಿಟ್ಟೂರು_ರವೀಶ್ ಮಾಡುವಾಗ ಈ ಕಮಕೋಡು ಕೆಳದಿ ಅರಸರ ಸೇನಾ ಶಿಬಿರ, ತರಬೇತಿ ಮತ್ತು ಶಸ್ತ್ರಾಗಾರ ತಯಾರಿ ಕೇಂದ್ರವೂ ಆಗಿತ್ತು ಅಂತ ಬರೆದಿದ್ದು ಇವರ ಪೂವಿ೯ಕರ ಊರು ನೆನಪಿಸಿದೆ ಒಮ್ಮೆ ಅಲ್ಲಿಗೆ ಬೇಟಿ ನೀಡುವ ಬಯಕೆ ಬಂದಿದೆ ಅಲ್ಲಿಂದ ಅವರ ಪೂವಿ೯ಕರು ಪೂಜಿಸುತ್ತಿದ್ದ ಶಿಲಾ ಗಣಪತಿ ತಂದು ಆವಿನಳ್ಳಿಯ ಯಾವುದೋ ದೇವಸ್ಥಾನಲ್ಲಿ ಇಟ್ಟಿದ್ದಾರಂತೆ.
  ಒಂದು ಪುಸ್ತಕ ಹೇಗೆ ಪುರಾತನ ನೆನಪು, ಇತಿಹಾಸಗಳ ಸರಪಳಿಯ ಕೊಂಡಿಯನ್ನು ಜೊಡಿಸುತ್ತದೆ ಅನ್ನುವುದು ನನಗಾದ ಅನುಭವ, ಕಮಗೋಡು ದತ್ತಾತ್ರೇಯ ಭಟ್ಟರು ನನ್ನ ಪುಸ್ತಕದ ಬಗ್ಗೆ ಹೀಗೆ ಬರೆದಿದ್ದಾರೆ.
 
 " ನಿಮ್ಮ ಪುಸ್ತಕಕ್ಕೆ ಬಂದ ವಿಮರ್ಶೆಗಳು ಹಾಗೂ ಅಭಿಪ್ರಾಯಗಳು ಒಂದು ಹೊಸ ಸಂಚಲನವನ್ನೇ ಸೃಷ್ಟಿಸಿದೆ, ಗೌರವಾನ್ವಿತ ಡಾ. ಗುಂಡಾಜೋಯಿಸರ   ಸಾಧನೆ ಹಾಗೂ ತಮ್ಮ ಪುಸ್ತಕದ ಬಗ್ಗೆ ಬರೆದ ಅಭಿಪ್ರಾಯಗಳು ಪ್ರಶಂಸನೀಯ, ಕೆಳದಿ ಇತಿಹಾಸದ ಬಗೆಗಿನ ಅವರ ಆಸಕ್ತಿಯ ಪ್ರಯತ್ನಗಳಿಗೆ ಅಭಿನಂದನೆಗಳು. ಚಂಪಕರಾಣಿ ಪುಸ್ತಕ ಇತಿಹಾಸ ತಜ್ಞರಿಂದ ಹಿಡಿದು ಸಾಮಾನ್ಯರ ಗಮನವನ್ನೂ ಸೆಳೆದಿರುವುದು ತಮ್ಮ ಪ್ರಯತ್ನಕ್ಕೆ ಸಂದ ಜಯ ಮತ್ತು ಉತ್ತಮ ಬೆಳವಣಿಗೆ ". - ಕಮಕೋಡು ದತ್ತಾತ್ರೇಯ ಭಟ್ಟರು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...