Skip to main content

ಆನಂದಪುರದ ಚಿರಪರಿಚಿತ ಹೋಟೆಲ್ ಕೃಷ್ಣಣ್ಣ ಮತ್ತು ನಾಟಕ ನಿರ್ದೇಶಿಸುತ್ತಿದ್ದ ಜೋಗಿ ಹನುಮಂತಣ್ಣ

#ಆನಂದಪುರದ_ಚಿರಪರಿಚಿತರಾದ_ಹೋಟೆಲ್_ಕೃಷ್ಣಣ್ಣ
 ಹೋಟೆಲ್ ಕೃಷ್ಣಣ್ಣ, ತಿಂಡಿ ಕೃಷ್ಣಣ್ಣ ಅಂತೆಲ್ಲ ಕರೆಯುವ ಸದಾ ನಗುಮೊಗದ ಕೃಷ್ಣಣ್ಣ ನಿನ್ನೆ ಸಿಕ್ಕಿದ್ದರು ಅವರಿಗೆ ಈಗ 84 ವರ್ಷ ಆದರೆ ಅವರು 35 ವರ್ಷದವರಷ್ಟೆ ಕ್ರಿಯಾಶೀಲರು.
  ಪ್ರತಿನಿತ್ಯ ಬೆಳಿಗ್ಗೆ ಸಂಜೆ ಅವರ ಕೃಷಿ ಕೆಲಸದ ಜೊತೆ ಆನಂದಪುರದಲ್ಲಿನ ಅವರ ಹೋಟೆಲ್ ವ್ಯವಹಾರ ನಿರಂತರ ನಡೆಸಿ ಕೊಂಡು ಬರುತ್ತಿದ್ದಾರೆ.
  ಇದರ ಮಧ್ಯೆ ಸುತ್ತ ಮುತ್ತಲಿನ ಸಂತೆ ಮತ್ತು ಜಾತ್ರೆಯಲ್ಲಿ ಇವರ ಬೆಂಡು ಬತ್ತಾಸು, ಬೂಂದಿ ಖಾರ ಮತ್ತು ಮಂಡಕ್ಕಿ ಅಂಗಡಿ ಇರದಿದ್ದರೆ ನೆರೆದ ಜನ ಆ ವಷ೯ದ ಜಾತ್ರೆ ಜೋರಾಗಿಲ್ಲ ತಿಂಡಿ ಕೃಷ್ಣಣ್ಣ ಅಂಗಡಿನೇ ಹಾಕಿಲ್ಲ ಅನ್ನುವಷ್ಟರವರೆಗೆ ಇವರ ಪ್ರಸಿದ್ದಿ ಇದೆ.
  1960 ರ ದಶಕದಲ್ಲಿ ಇವರೆಲ್ಲ ಆನಂದಪುರದ ಪ್ರಸಿದ್ದ ನಾಟಕ ಕಲಾವಿದರು ನಮ್ಮ ತಂದೆಗೆ ಹೀರೋ ಪಾತ್ರವಂತೆ ಆದರೆ ಜೋಗಿ ಹನುಮಂತಣ್ಣ ನಾಟಕ ನಿದೇ೯ಶನ ಮಾಡುತ್ತಿದ್ದದ್ದು ನನಗೆ ಗೊತ್ತಾಗಿದ್ದೆ ನಿನ್ನೆ ಕೃಷ್ಣಣ್ಣರ ಹತ್ತಿರ ಮಾತಾಡಿದಾಗ.
  ಆಗಿನ ಆನಂದಪುರಂನ ಪ್ರಸಿದ್ಧ ಹೋಟೆಲ್ ಕಿಣಿ ರಾಯರ ಕೋಮಲ ವಿಲಾಸ್ ಪಕ್ಕ 10 x 10 ಅಡಿಯ ಅತ್ಯಂತ ಸಣ್ಣದಾದ ಮಳಿಗೆ ಜೋಗಿ ಹನುಮಂತಣ್ಣನದ್ದು ಅದು ಭೂ ಮಾಲಿಕರಾದ ವೆಂಕಟಾಚಲಯ್ಯ0ಗಾರರಿಂದ (ಮಂತ್ರಿಗಳಾಗಿದ್ದ ಬದರಿನಾರಾಯಣ ಅಯ್ಯಂಗಾರರ ಸಹೋದರ) ಬಾಡಿಗೆ ಪಡೆದದ್ದು.
 ಅಲ್ಲಿ ಏನುಂಟು ಏನಿಲ್ಲ! ಆಲೆಮನೆ ಬೆಲ್ಲ ಶೇಖರಣೆಗಾಗಿ ಹೊಸ ಟಿನ್ ತಗಡಿನ ಡಬ್ಬ ತಯಾರಿ, ಖಾಲಿಯಾದ ಎಣ್ಣೆ ಡಬ್ಬಕ್ಕೆ ದೊಡ್ಡ ಮುಚ್ಚುಳ ಅಳವಡಿಸುವುದು, ಛತ್ರಿ ರಿಪೇರಿ, ಟಾಚ್೯ ರಿಪೇರಿ, ಶಿಕಾರಿಗಾಗಿ ಹೆಡ್ ಲೈಟ್ ತಯಾರಿ ಹೀಗೆ ಸಣ್ಣ ಮಕ್ಕಳಾದ ನಮಗೆ ಜೋಗಿ ಹನುಮಂತಣ್ಣ ಒಂದು ರೀತಿ ವಿಸ್ಮಯ ಹಾಗೂ ವಿಜ್ಞಾನಿ ಅಂತೆ ಕಂಡು ಬರುತ್ತಿದ್ದರು.
  ಇವರೆಲ್ಲ ಸಣ್ಣ ಊರಾಗಿದ್ದ ಆನಂದಪುರದಲ್ಲಿನ ಊರ ಸ್ವಾಸ್ಥ್ಯ ಕಾಪಾಡಿದವರು, ಊರಿನ ನ್ಯಾಯ ಪಂಚಾಯಿತಿ ಮಾಡುತ್ತಿದ್ದವರು, ಊರಿನ ಜನತೆಗೆ ಆಗಿನ ಕಾಲದಲ್ಲಿ ನಾಟಕ ಕಲಿತು ಆಡಿ ತೋರಿಸಿ ಜನರಿಗೆ ಮನೋರಂಜಿಸಿದವರು. 
 ನಮ್ಮ ತಂದೆ ಆದಿ ಆಗಿ ಆಗಿನವರೆಲ್ಲ ಈಗಿಲ್ಲ ಅವರ ಕಿರಿಯ ಒಡನಾಡಿ ತಿಂಡಿ ಕೃಷ್ಣಣ್ಣ ಇದ್ದಾರೆ ಇನ್ನೊಮ್ಮೆ ಅವರನ್ನ ಬಿಡುವಿನಲ್ಲಿ ಬೇಟಿ ಮಾಡಿ 1960 ರ ದಶಕದ ಆನಂದಪುರದ ಕಥೆ ಕೇಳಬೇಕಾಗಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...